AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST ದರ ಕಡಿತದಿಂದ ರಾಜ್ಯಗಳ ಆದಾಯಕ್ಕೆ ಹೊಡೆತ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ

ಕೇಂದ್ರ ಜಿಎಸ್​ಟಿ ದರ ಕಡಿತದಿಂದ ಜನಾಸಾಮಾನ್ಯರಿಗೆ ರಿಲೀಫ್ ನೀಡಿದೆ. ಆದರೆ ಇದು ರಾಜ್ಯಗಳಿಗೆ ಬಿಗ್ ಶಾಕ್ ಉಂಟು ಮಾಡಿದೆ. ಕರ್ನಾಟಕ ರಾಜ್ಯದ ಜಿಎಸ್​ಟಿ ಸಂಗ್ರಹಣೆಯೂ ಕುಸಿದಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದು, ಸೆಸ್‌ನಿಂದ ಸಂಗ್ರಹವಾಗುವ ಆದಾಯದ ಅರ್ಧದಷ್ಟು ಭಾಗವನ್ನು ರಾಜ್ಯದೊಂದಿಗೆ ಹಂಚಿಕೊಳ್ಳುವಂತೆ ಮನವಿ ಮಾಡಿದ್ದಾರೆ.

GST ದರ ಕಡಿತದಿಂದ ರಾಜ್ಯಗಳ ಆದಾಯಕ್ಕೆ ಹೊಡೆತ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿ
ಹರೀಶ್ ಜಿ.ಆರ್​.
| Edited By: |

Updated on:Dec 05, 2025 | 10:36 PM

Share

ಬೆಂಗಳೂರು, ಡಿಸೆಂಬರ್​ 05: ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ ಪರಿಷ್ಕರಣೆ ಮಾಡಿರುವುದರಿಂದ ರಾಜ್ಯಗಳಿಗೆ ನಷ್ಟವಾಗಲಿದೆ ಎಂದು ಕರ್ನಾಟಕ ಸೇರಿದಂತೆ 8 ರಾಜ್ಯ ಸರ್ಕಾರಗಳು ಕಳವಳ ವ್ಯಕ್ತಪಡಿಸಿದ್ದವು. ಈ ಹಿಂದೆಯೇ ಸಿಎಂ ಸಿದ್ದರಾಮಯ್ಯ (Siddaramaiah), ಜಿಎಸ್​​ಟಿ ಪರಿಷ್ಕರಣೆಯಿಂದಾಗಿ ರಾಜ್ಯಕ್ಕೆ 18,500 ಕೋಟಿ ರೂ, ನಷ್ಟವಾಗಲಿದೆ ಎಂದು ಹೇಳಿದ್ದರು. ಈ ಮೂಲಕ ಜಿಎಸ್​​ಟಿ ಇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ, ಅಧಿಕೃತವಾಗಿ ಪ್ರಧಾನಿ ನರೇಂದ್ರ ಮೋದಿಗೆ (Narendra Modi) ಪತ್ರ ಬರೆದಿದ್ದು, ಸೆಸ್‌ನಿಂದ ಸಂಗ್ರಹವಾಗುವ ಆದಾಯದ ಅರ್ಧದಷ್ಟು ಭಾಗವನ್ನು ರಾಜ್ಯದೊಂದಿಗೆ ಹಂಚಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಜಿಎಸ್​​ಟಿ ದರ ಸರಳೀಕರಣದಿಂದ ರಾಜ್ಯಗಳ ಆದಾಯಕ್ಕೆ ನಷ್ಟ ಉಂಟಾಗಿದೆ. GST ಕೌನ್ಸಿಲ್ ಸಭೆಯಲ್ಲಿ ನಾಗರಿಕರ ಹೊರೆ ಕಡಿಮೆ ಮಾಡಲು ರಾಜ್ಯಗಳು ಬೆಂಬಲ ಸೂಚಿಸಿವೆ. ಆದರೆ, ದೇಶದ GST ಸಂಗ್ರಹದಲ್ಲಿ ಭಾರಿ ಕುಸಿತ ಕಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​

ನ.2025-26ರಲ್ಲಿ GST ಸಂಗ್ರಹದಲ್ಲಿ 2% ಕುಸಿತ ದಾಖಲಾಗಿದೆ. ಕಳೆದ ವರ್ಷ ನವೆಂಬರ್ 2024ರಲ್ಲಿ GST 9.3% ಬೆಳವಣಿಗೆ ಆಗಿತ್ತು. ನಿವ್ವಳ ದೇಶೀಯ GST ಬೆಳವಣಿಗೆ ದರ ಇಳಿಕೆಯಾಗಿದೆ. ದರ ಸರಳೀಕರಣ ಬಳಿಕ 3 ತಿಂಗಳಲ್ಲಿ 1.7% ಮಾತ್ರ ಬೆಳವಣಿಗೆ ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 8.9% ಬೆಳವಣಿಗೆ ಇತ್ತು. ಇದರಿಂದ ಕರ್ನಾಟಕದ ಬೊಕ್ಕಸಕ್ಕೆ 18,500 ಕೋಟಿ ರೂ ನಷ್ಟವಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಜಿಎಸ್‌ಟಿ ಪರಿಷ್ಕರಣೆಯ ಲಾಭ ನಷ್ಟದ ಲೆಕ್ಕಾಚಾರ: ರಾಜ್ಯಗಳಿಗೆ ನಿಜಕ್ಕೂ ಭಾರಿ ನಷ್ಟವೇ? ಕೇಂದ್ರ ಸರ್ಕಾರ, ತಜ್ಞರು ಹೇಳಿದ್ದಿಷ್ಟು

ಕರ್ನಾಟಕ ರಾಜ್ಯದ ಜಿಎಸ್​ಟಿ ಸಂಗ್ರಹಣೆಯೂ ಕುಸಿದಿದೆ. ರಾಜ್ಯದ ನಿವ್ವಳ GST ಸಂಗ್ರಹಣೆಯಲ್ಲಿ 3.1% ಬೆಳವಣಿಗೆ ಹೊಂದಿದ್ದು, ರಾಜ್ಯದ ಬೊಕ್ಕಸಕ್ಕೆ 18,500 ಕೋಟಿ ರೂ. ನಷ್ಟದ ಭೀತಿ ಎದುರಾಗಿದೆ. ಈ ವರ್ಷ 9,000 ಕೋಟಿಗಳ ಆದಾಯ ಕೊರತೆ ಸಾಧ್ಯತೆ ಇದೆ. ವಿಲೀನಗೊಳಿಸದಿರುವಿಕೆಯಿಂದ 9,500 ಕೋಟಿ ರೂ. ನಷ್ಟವಾಗಲಿದೆ. ಈ ನಷ್ಟವನ್ನು ಕೇಂದ್ರವು ರಾಜ್ಯಗಳಿಗೆ ಸರಿದೂಗಿಸಬೇಕು. ಪಾನ್ ಮಸಾಲಾ ಸೆಸ್ ಆದಾಯವನ್ನು 50:50 ಆಧಾರದ ಮೇಲೆ ರಾಜ್ಯಗಳೊಂದಿಗೆ ಹಂಚಿಕೆಗೆ ಪರಿಗಣಿಸಬೇಕೆಂದು ಸಿಎಂ ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:21 pm, Fri, 5 December 25

Follow Us
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ಸೋಷಿಯಲ್ ಮೀಡಿಯಾ ಗಿಮಿಕ್ ಮಾಡೋರೇ ಹುಷಾರ್: ಪೊಲೀಸ್ ಆಯುಕ್ತ ಖಡಕ್ ವಾರ್ನಿಂಗ್
ಸೋಷಿಯಲ್ ಮೀಡಿಯಾ ಗಿಮಿಕ್ ಮಾಡೋರೇ ಹುಷಾರ್: ಪೊಲೀಸ್ ಆಯುಕ್ತ ಖಡಕ್ ವಾರ್ನಿಂಗ್
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮೌನ ಮುರಿದ ಡಿಕೆಶಿ: ಹೇಳಿದ್ದೇನು ನೋಡಿ!
ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮೌನ ಮುರಿದ ಡಿಕೆಶಿ: ಹೇಳಿದ್ದೇನು ನೋಡಿ!