AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವೇ ದಿನಗಳಲ್ಲಿ ಜಿಟಿ ದೇವೇಗೌಡ ಕಾಂಗ್ರೆಸ್ ಸೇರ್ಪಡೆ: ಸಚಿವ ಮಧು ಬಂಗಾರಪ್ಪ ಶಾಕಿಂಗ್ ಹೇಳಿಕೆ

ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಅವರು ವಿಧಾನಸಭೆ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಸೇರುತ್ತಾರೆ ಎಂದು ಭಾರೀ ಚರ್ಚೆಗಳು ನಡೆದಿದ್ದವು. ಆದರೆ, ಪಕ್ಷದ ವರಿಷ್ಠ ಹೆಚ್​ಡಿ ದೇವೇಗೌಡ ಅವರು ಜಿಟಿ ದೇವೇಗೌಡರ ಜೊತೆ ಮಾತುಕತೆ ನಡೆಸಿ ಪಕ್ಷದಲ್ಲೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಮತ್ತೆ ಜಿಟಿ ದೇವೇಗೌಡ ಕಾಂಗ್ರೆಸ್ ಸೇರುತ್ತಾರೆ ಎಂದು ಹೇಳುವ ಮೂಲಕ ಸಚಿವ ಮಧು ಬಂಗಾರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.

ಕೆಲವೇ ದಿನಗಳಲ್ಲಿ ಜಿಟಿ ದೇವೇಗೌಡ ಕಾಂಗ್ರೆಸ್ ಸೇರ್ಪಡೆ: ಸಚಿವ ಮಧು ಬಂಗಾರಪ್ಪ ಶಾಕಿಂಗ್ ಹೇಳಿಕೆ
ಮಧು ಬಂಗಾರಪ್ಪ ಮತ್ತು ಜಿಟಿ ದೇವೇಗೌಡ
TV9 Web
| Edited By: Rakesh Nayak Manchi|

Updated on: Nov 14, 2023 | 3:27 PM

Share

ಶಿವಮೊಗ್ಗ, ನ.14: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ (G.T.Devegowda) ಅವರು ವಿಧಾನಸಭೆ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಸೇರುತ್ತಾರೆ ಎಂದು ಭಾರೀ ಚರ್ಚೆಗಳು ನಡೆದಿದ್ದವು. ಆದರೆ, ಪಕ್ಷದ ವರಿಷ್ಠ ಹೆಚ್​ಡಿ ದೇವೇಗೌಡ (H.D.Deve Gowda) ಅವರು ಜಿಟಿ ದೇವೇಗೌಡರ ಜೊತೆ ಮಾತುಕತೆ ನಡೆಸಿ ಪಕ್ಷದಲ್ಲೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಮತ್ತೆ ಜಿಟಿ ದೇವೇಗೌಡ ಕಾಂಗ್ರೆಸ್ ಸೇರುತ್ತಾರೆ ಎಂದು ಹೇಳುವ ಮೂಲಕ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೊಸ ಬಾಂಬ್ ಸಿಡಿಸಿದ್ದಾರೆ.

ಈ ಬಗ್ಗೆ ಶಿವಮೊಗ್ಗದಲ್ಲಿ ನಡೆದ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಈಗಾಗಲೇ ಕೆಲವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕೆಲವೇ ದಿನಗಳಲ್ಲಿ ಜಿ.ಟಿ.ದೇವೇಗೌಡ ಕಾಂಗ್ರೆಸ್ ಪಕ್ಷ ಸೇರುತ್ತಾರೆ. ಅವರು ನಮಗೆ ಬಹಳ ಹಳಬರು, ಸ್ವಲ್ಪ ದಿನ ದೂರವಾಗಿದ್ದರು. ಈಗ ಮತ್ತೆ ಪಕ್ಷಕ್ಕೆ ಹತ್ತಿರವಾಗಲಿದ್ದಾರೆ. ನಮ್ಮ ಹತ್ತಿರವೇ ಇರುವ ಹಾಗೆ ನೋಡಿಕೊಳ್ಳುತ್ತಿದ್ದೇವೆ. ಶಾಸಕ ಚನ್ನಬಸಪ್ಪ ಕೂಡ ಈಗಾಗಲೇ ನಮ್ಮ ಹತ್ತಿರದಲ್ಲಿದ್ದಾರೆ ಎಂದು

ಇದನ್ನೂ ಓದಿ: ಮೈಸೂರಿನಲ್ಲಿ ಮತ್ತೊಮ್ಮೆ ಸಿದ್ದರಾಮಯ್ಯ ವರ್ಸಸ್ ಜಿಟಿ ದೇವೇಗೌಡ ಫೈಟ್!

ಇತ್ತೀಚೆಗಷ್ಟೇ ಹಾಸನದಲ್ಲಿರುವ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿದ್ದ ಜಿಟಿ ದೇವೇಗೌಡ ಮತ್ತಿತರರು ಪಕ್ಷ ಬಿಡಲ್ಲ ಎಂಬ ಆಣೆ ಪ್ರಮಾಣ ಮಾಡಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಜಿಟಿ ದೇವೇಗೌಡ, ಹಾಸನಾಂಬೆ ಎದುರು ನಾವು ಪಕ್ಷ ಬಿಡುವುದಿಲ್ಲ ಎಂದು ಆಣೆ ಪ್ರಮಾಣ ಮಾಡಿಲ್ಲ. ಪಕ್ಷ ಕಟ್ಟುವ ಬಗ್ಗೆ ಪ್ರತಿಜ್ಞೆ ಮಾಡಿದ್ದೇವೆ ಎಂದಿದ್ದರು.

ಜೆಡಿಎಸ್ ಮಾಜಿ ಶಾಸಕರಾದ ಡಿಸಿ ಗೌರಿಶಂಕರ್ ಹಾಗೂ ಮಂಜುನಾಥ್ ಅವರು ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ. ನಾಳೆ ಅಧಿಕೃತವಾಗಿ ಪಕ್ಷ ಸೇರಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಹೆಚ್​ಡಿ ಕುಮಾರಸ್ವಾಮಿ, ಇದು ಹಳೆಯ ವಿಚಾರ, ಇದರಿಂದ ನನಗನೂ ಶಾಕ್​ ಆಗಲ್ಲ. ಗೌರಿಶಂಕರ್​, ಮಂಜುನಾಥ್ ಕರೆದು ಎರಡು ಬಾರಿ ಮಾತನಾಡಿದ್ದೇನೆ ಅವರಿಗೆ ಅನುಕೂಲ ಆಗುವ ಕಡೆ ಹೋಗಿದ್ದಾರೆ. ನಮಗೆ ಯಾವುದೇ ತೊಂದರೆ ಆಗಲ್ಲ, ಕಾರ್ಯಕರ್ತರಿದ್ದಾರೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ