AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ.ಟಿ. ದೇವೇಗೌಡರಿಗೆ ಭರ್ಜರಿ ಶಾಕ್​​ ಕೊಡುತ್ತಾ ಜೆಡಿಎಸ್​​? ವರಿಷ್ಠರ ನಡೆಯೇನು?

ಮುಂದಿನ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸಾ.ರಾ.ಮಹೇಶ್‌ರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಜೆಡಿಎಸ್​​ನಲ್ಲಿ ತಯಾರಿ ನಡೆದಿದೆ. ಆ ಮೂಲಕ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಶಾಸಕ ಜಿ.ಟಿ. ದೇವೇಗೌಡರಿಗೆ ಶಾಕ್​​ ನೀಡುವ ಚಿಂತನೆ ನಡೆದಿದ್ಯಾ ಎಂಬ ಪ್ರಶ್ನೆ ಉದ್ಭವಿಸಿದೆ. ಆದ್ರೆ , ದೇವೇಗೌಡರ ನೇತೃತ್ವದಲ್ಲಿ ಇಂದು ನಡೆಯಲಿರುವ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಆಗುವ ಸಾಧ್ಯತೆ ಇದೆ.

ಜಿ.ಟಿ. ದೇವೇಗೌಡರಿಗೆ ಭರ್ಜರಿ ಶಾಕ್​​ ಕೊಡುತ್ತಾ ಜೆಡಿಎಸ್​​? ವರಿಷ್ಠರ ನಡೆಯೇನು?
ಜಿ.ಟಿ. ದೇವೇಗೌಡ
ರಾಮ್​, ಮೈಸೂರು
| Edited By: |

Updated on: Jan 18, 2026 | 10:52 AM

Share

ಮೈಸೂರು, ಜನವರಿ 18: ಜೆಡಿಎಸ್​​​ನಿಂದ ಈಗಾಗಲೇ ಸಾಕಷ್ಟು ಅಂತರ ಕಾಯ್ದುಕೊಂಡಿರುವ ಶಾಸಕ ಜಿ.ಟಿ. ದೇವೇಗೌಡಗೆ ಮತ್ತಷ್ಟು ಶಾಕ್​​ ಕೊಡಲು ಜಾತ್ಯತೀತ ಜನತಾದಳ ನಾಯಕರು ಮುಂದಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ JDSನಿಂದ ಸಾ.ರಾ.ಮಹೇಶ್ ಸ್ಪರ್ಧಿಸ್ತಾರೆ ಎಂದು ಮೈಸೂರಿನಲ್ಲಿ ಪರಿಷತ್​ನ ಜೆಡಿಎಸ್​ ಸದಸ್ಯ ಮಂಜೇಗೌಡ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಹೆಚ್​​.ಡಿ. ದೇವೇಗೌಡರ ನೇತೃತ್ವದಲ್ಲಿ ಸಭೆ ಇದ್ದು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧೆಗೆ ಸಾ.ರಾ.ಮಹೇಶ್​ ಒಪ್ಪಿದ್ದಾರೆ ಎಂದವರು ತಿಳಿಸಿದ್ದಾರೆ.

ಸಹಕಾರ ಕ್ಷೇತ್ರದ ಚುನಾವಣೆಯಲ್ಲಿ ಜಿ.ಟಿ. ದೇವೇಗೌಡ ಪಕ್ಷಕ್ಕೆ ಮೋಸ ಮಾಡಿದ್ದಾರೆ . MLC ಚುನಾವಣೆಯಲ್ಲೂ ಪಕ್ಷ ವಿರೋಧಿ ಕೆಲಸ ಮಾಡಿದ್ದಾರೆ. ಹೀಗಾಗಿ 2028ರ ಚುನಾವಣೆಯಲ್ಲಿ ಸಾ.ರಾ.ಮಹೇಶ್​​ರನ್ನು ಅಭ್ಯರ್ಥಿ ಮಾಡ್ತೇವೆ. ಎಲ್ಲಾ ವಿಚಾರವನ್ನು ಜೆಡಿಎಸ್​ ವರಿಷ್ಠರ ಗಮನಕ್ಕೆ ತರುತ್ತೇವೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ. ಇರುವ ವಿಷಯವನ್ನು ಅವರ ಗಮನಕ್ಕೆ ತರುತ್ತಿದ್ದೇವೆ ಅಷ್ಟೇ ಎಂದವರು ತಿಳಿಸಿದ್ದಾರೆ. ಇನ್ನು ಈ ಹಿಂದೆಯೇ ಜಿಟಿಡಿಗೆ ಜೆಡಿಎಸ್​​ ಒಂದು ಹಂತದ ಶಾಕ್​​ ನೀಡಿತ್ತು. ಪಕ್ಷದ ಕೋರ್ ಕಮಿಟಿ ಪುನಾರಚನೆ ವೇಳೆ ಕಮಿಟಿ ಅಧ್ಯಕ್ಷ ಸ್ಥಾನದಿಂದ ಜಿ.ಟಿ.ದೇವೇಗೌಡರಿಗೆ ಗೇಟ್ ಪಾಸ್ ನೀಡಲಾಗಿತ್ತು. ಆ ಸ್ಥಾನಕ್ಕೆ ಚಿಂತಾಮಣಿ ಮಾಜಿ ಶಾಸಕ ಹಾಗೂ ಮಾಜಿ ಉಪ ಸ್ಪೀಕರ್ ಎಂ. ಕೃಷ್ಣಾರೆಡ್ಡಿ ಅವರನ್ನು ನೇಮಿಸಲಾಗಿತ್ತು. ಇನ್ನು ಅರಕಲಗೂಡು ಶಾಸಕ ಎ. ಮಂಜು ಅವರನ್ನು ಕೋರ್ ಕಮಿಟಿಯ ಸಂಚಾಲಕರನ್ನಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ನೇಮಿಸಿದ್ದರು.

ಇದನ್ನೂ ಓದಿ: ಸಿಎಂ ಪರ ಜಿಟಿ ದೇವೇಗೌಡ ಬ್ಯಾಟಿಂಗ್​; ಜೆಡಿಎಸ್​ ನಾಯಕರಿಂದ ಕ್ರಮಕ್ಕೆ ಆಗ್ರಹ

ಜೆಡಿಎಸ್​​ ಶಾಸಕರಾಗಿರುವ ಜಿಟಿಡಿ ಪದೇ ಪದೇ ಸಿದ್ದರಾಮಯ್ಯ ಸೇರಿದಂತೆ ಇತರ ನಾಯಕರನ್ನು ಹೊಗಳುತ್ತಿದ್ದಿದ್ದು ಪಕ್ಷದ ಮುಖಂಡರ ಕೆಂಗಣ್ಣಿಗೆ ಗುರಿಯಾಗಿತ್ತು. ಅಲ್ಲದೆ ಪಕ್ಷಕ್ಕೆ ಮುಜುಗರವನ್ನೂ ತಂದಿದೆ ಎನ್ನಲಾಗಿದೆ. ಈ ಹಿಂದೆಯೂ ಮಾಜಿ ಸಿಎಂ, ಈಗಿನ ಕೇಂದ್ರ ಸಚಿವ ಕಮಾರಸ್ವಾಮಿ ಮತ್ತು ಜಿ.ಟಿ. ದೇವೇಗೌಡರ ನಡುವಿನ ಮನಸ್ತಾಪಗಳು ರಾಜಕೀಯವಾಗಿ ಭಾರಿ ಸುದ್ದಿಯಾಗಿದ್ದವು. ಆದ್ರೆ ಈ ವಿಚಾರದಲ್ಲಿ ಮಧ್ಯ ಪ್ರವೇಶಿಸಿದ್ದ ದೇವೇಗೌಡರು ಜಿಟಿಡಿ ಮನವೊಲಿಸಿದ್ದರು. ಈ ನಡುವೆ ಮತ್ತೆ ಜಿ.ಟಿ. ದೇವೇಗೌಡರ ವರ್ತನೆ ಬಗ್ಗೆ ಆಕ್ಷೇಪಗಳು ವ್ಯಕ್ತವಾಗುತ್ತಿರುವ ಹಿನ್ನೆಲೆ ದೊಡ್ಡ ಗೌಡರ ನಡೆ ಏನು ಎಂಬುದು ಸದ್ಯಕ್ಕಿರುವ ಕುತೂಹಲ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!