AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿ ಯೋಜನೆ ರಾಜಕೀಯ ಉದ್ದೇಶಕ್ಕಲ್ಲ, ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ: ಜಿ. ಪರಮೇಶ್ವರ್

ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್​, ಜನರಿಗೆ ಗ್ಯಾರಂಟಿ ತಲುಪಿದೆ, ಎಲ್ಲಾ ಯೋಜನೆ ಅನುಷ್ಠಾನ ಆಗಿದೆ. ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ, ಅದು ರಾಜಕೀಯ ಉದ್ದೇಶಕ್ಕಲ್ಲ. ಪಟ್ಟಣ ಪ್ರದೇಶದಲ್ಲಿ ಗ್ಯಾರಂಟಿ ಅವಶ್ಯಕತೆ ಇದೆಯೋ ಇಲ್ವೋ ಗೊತ್ತಿಲ್ಲ. ಈ ಬಗ್ಗೆ ಸಿಎಂ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನಾನು ಈ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದಿದ್ದಾರೆ.

ಗ್ಯಾರಂಟಿ ಯೋಜನೆ ರಾಜಕೀಯ ಉದ್ದೇಶಕ್ಕಲ್ಲ, ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ: ಜಿ. ಪರಮೇಶ್ವರ್
ಗ್ಯಾರಂಟಿ ಯೋಜನೆ ರಾಜಕೀಯ ಉದ್ದೇಶಕ್ಕಲ್ಲ, ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ: ಜಿ. ಪರಮೇಶ್ವರ್
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Jun 08, 2024 | 4:22 PM

Share

ಉಡುಪಿ, ಜೂನ್​ 08: ಬಡತನ ನಿರ್ಮೂಲನೆಗೆ ಗ್ಯಾರಂಟಿ ಯೋಜನೆ (guarantee scheme) ಜಾರಿ ಮಾಡಿದ್ದೇವೆ. ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ. ಗ್ಯಾರಂಟಿ ರಾಜಕೀಯ ಉದ್ದೇಶಕ್ಕಲ್ಲ ಎಂದು ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್ (G. Parameshwara) ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರಿಗೆ ಗ್ಯಾರಂಟಿ ತಲುಪಿದೆ, ಎಲ್ಲಾ ಯೋಜನೆ ಅನುಷ್ಠಾನ ಆಗಿದೆ. ಪಟ್ಟಣ ಪ್ರದೇಶದಲ್ಲಿ ಗ್ಯಾರಂಟಿ ಅವಶ್ಯಕತೆ ಇದೆಯೋ ಇಲ್ವೋ ಗೊತ್ತಿಲ್ಲ. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಮತ್ತು ನಾನು ಈ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ಬಹಳಷ್ಟು ಕಡೆ ಸೋತಿದ್ದೇವೆ. ಸೋಲಿನ ಆತ್ಮಾವಲೋಕನ ಮಾಡಬೇಕಿದೆ. ಏಕೆ ಸೋತಿದ್ದೇವೆ, ಎಲ್ಲಿ ಎಡವಿದ್ದೇವೆ ಎಂಬ ಚರ್ಚೆ ಆಗಬೇಕಿದೆ ಎಂದಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಿಲ್ಲಿಸುವುದೇ ಒಳ್ಳೆಯದು: ಜನರಿಗೆ ಇಷ್ಟ ಆಗಿಲ್ಲ ಎಂದ ಎಂ.ಲಕ್ಷ್ಮಣ್​

ನಿನ್ನೆಯ ಸಭೆಯಲ್ಲಿ ಸಚಿವರಿಗೆ ರಾಹುಲ್ ಗಾಂಧಿ ತರಾಟೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಏಕೆ ಹಿನ್ನಡೆಯಾಗಿದೆ ಎಂದು ವಿಶ್ಲೇಷಣೆ ಮಾಡಿ ಅಂತಾ ತಿಳಿಸಿದ್ದಾರೆ. ನನ್ನನ್ನೂ ಸೇರಿ ಯಾವ ಜಿಲ್ಲೆಗಳಲ್ಲಿ ಹಿನ್ನಡೆಯಾಗಿದೆ ಅಂತಾ ವಿಶ್ಲೇಷಣೆ ಕೇಳಿದ್ದಾರೆ. ರಾಹುಲ್​ ಕೊಟ್ಟ ಸೂಚನೆಗೆ ಬದ್ಧರಾಗಿದ್ದೇವೆ, ಹಾಗೆ ನಡೆದುಕೊಳ್ತೇವೆ ಎಂದರು.

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ‌‌ ನಿಲ್ಲಿಸುವ ಪ್ರಶ್ನೆ ಇಲ್ಲ: ಕಾಂಗ್ರೆಸ್ ಎಂಎಲ್‌ಸಿ ಐವನ್ ಡಿಸೋಜ

ಮಂಗಳೂರಿನಲ್ಲಿ ಕಾಂಗ್ರೆಸ್ ಎಂಎಲ್‌ಸಿ ಐವನ್ ಡಿಸೋಜ ಪ್ರತಿಕ್ರಿಯಿಸಿದ್ದು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ‌‌ ನಿಲ್ಲಿಸುವ ಪ್ರಶ್ನೆ ಇಲ್ಲ. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಗ್ಯಾರಂಟಿ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸ್ಥಗಿತವಾಗುತ್ತಾ ಗ್ಯಾರಂಟಿ ಯೋಜನೆಗಳು? ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಮತ್ತೆ ಶಾಕಿಂಗ್ ಹೇಳಿಕೆ

ಗ್ಯಾರಂಟಿ ಯೋಜನೆ ವಿಧಾನಸಭೆ ಚುನಾವಣೆಯಲ್ಲಿ ಜನರಿಗೆ ಕೊಟ್ಟ ವಾಗ್ದಾನ. ಯಾರಿಗೆ ಸಿಕ್ಕಿಲ್ಲವೋ ಅವರಿಗೆ ಹುಡುಕಿ ಕೊಡಲು ಗ್ಯಾರಂಟಿ ಸಮಿತಿ ರಚನೆ ಮಾಡಿದ್ದೇವೆ. ಮುಂದೆ ಗ್ಯಾರಂಟಿ ಆಫೀಸ್ ಸಹ ಓಪನ್ ಆಗುತ್ತೆ. ಅರ್ಹರು ದಕ್ಷಿಣ ಕನ್ನಡ ಜಿ.ಪಂ ಕಚೇರಿಯ ಗ್ಯಾರಂಟಿ ಆಫೀಸ್‌ಗೆ ಬರಬಹುದು. ಮನವಿ ಸಲ್ಲಿಸಿದರೆ ತಕ್ಷಣ ಸಮಸ್ಯೆ ಪರಿಹಾರ ಮಾಡಿಕೊಡಲಾಗುತ್ತೆ ಎಂದಿದ್ದಾರೆ.

ಬಿಜೆಪಿಯವರಿಗೆ ಹೊಟ್ಟೆ ಕಿಚ್ಚು, ಹೀಗಾಗಿ ಅಪಪ್ರಚಾರ ಮಾಡ್ತಿದ್ದಾರೆ. ಗ್ಯಾರಂಟಿ ಯೋಜನೆ ನಿಲ್ಲಿಸುತ್ತಾರೆಂಬ ಅಪಪ್ರಚಾರ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ