AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗುಲಾಬಿ ಗ್ಯಾಂಗ್’ ಘರ್ಜನೆಗೆ ರಾಜಧಾನಿ ತತ್ತರ, ಟ್ರಾಫಿಕ್ ಏರುಪೇರು

ಬೆಂಗಳೂರು: ನಗರದಲ್ಲಿ ಇಂದು 30 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಪ್ರತಿಭಟನೆಗೆ ಇಳಿದಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಬಂದು ಸೇರಿರುವ ಗುಲಾಬಿ ಗ್ಯಾಂಗ್ ಘರ್ಜನೆಗೆ ರಾಜಧಾನಿ ತತ್ತರಿಸಿದೆ. ಮೆಜೆಸ್ಟಿಕ್ ಸುತ್ತಮುತ್ತ ಭಾರಿ ಟ್ರಾಫಿಕ್ ಜಾಮ್ ನಿರ್ಮಾಣವಾಗಿದೆ. ನಗರದ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್​ವರೆಗೂ ಆಶಾ ಕಾರ್ಯಕರ್ತೆಯರಿಂದ ಸಾಗರೋಪಾದಿಯಲ್ಲಿ ಪ್ರತಿಭಟನಾ ಱಲಿ ಸಾಗುತ್ತಿದೆ. ಸಿಲಿಕಾನ್ ಸಿಟಿ ಆಯ್ತು ಪಿಂಕ್ ಸಿಟಿ: ಸಂಬಳ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗೆ ಸಿಲಿಕಾನ್ ಸಿಟಿ ‘ಗುಲಾಬಿ’ಮಯವಾಗಿದೆ. ರಾಜಧಾನಿ ಅಂಗಳದಲ್ಲಿ […]

‘ಗುಲಾಬಿ ಗ್ಯಾಂಗ್’ ಘರ್ಜನೆಗೆ ರಾಜಧಾನಿ ತತ್ತರ, ಟ್ರಾಫಿಕ್ ಏರುಪೇರು
ಸಾಧು ಶ್ರೀನಾಥ್​
|

Updated on:Jan 03, 2020 | 1:56 PM

Share

ಬೆಂಗಳೂರು: ನಗರದಲ್ಲಿ ಇಂದು 30 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಪ್ರತಿಭಟನೆಗೆ ಇಳಿದಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಬಂದು ಸೇರಿರುವ ಗುಲಾಬಿ ಗ್ಯಾಂಗ್ ಘರ್ಜನೆಗೆ ರಾಜಧಾನಿ ತತ್ತರಿಸಿದೆ. ಮೆಜೆಸ್ಟಿಕ್ ಸುತ್ತಮುತ್ತ ಭಾರಿ ಟ್ರಾಫಿಕ್ ಜಾಮ್ ನಿರ್ಮಾಣವಾಗಿದೆ. ನಗರದ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್​ವರೆಗೂ ಆಶಾ ಕಾರ್ಯಕರ್ತೆಯರಿಂದ ಸಾಗರೋಪಾದಿಯಲ್ಲಿ ಪ್ರತಿಭಟನಾ ಱಲಿ ಸಾಗುತ್ತಿದೆ.

ಸಿಲಿಕಾನ್ ಸಿಟಿ ಆಯ್ತು ಪಿಂಕ್ ಸಿಟಿ: ಸಂಬಳ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗೆ ಸಿಲಿಕಾನ್ ಸಿಟಿ ‘ಗುಲಾಬಿ’ಮಯವಾಗಿದೆ. ರಾಜಧಾನಿ ಅಂಗಳದಲ್ಲಿ ಅಶಾ ಕಾರ್ಯಕರ್ತೆಯರ ಸುನಾಮಿ ಎದ್ದಿದೆ. ರಾಜ್ಯದ ಮೂಲೆ ಮೂಲೆಯಿಂದ ಜನಸಾಗರ ಹರಿದು ಬಂದಿದೆ. ಆಶಾ ಕಾರ್ಯಕರ್ತೆಯರ ಬೃಹತ್ ಹೋರಾಟ ನಡೆಯುತ್ತಿದೆ. 15 ತಿಂಗಳಿಂದ ಪ್ರೋತ್ಸಾಹ ಧನ ಬಿಡುಗಡೆಯಾಗಿಲ್ಲ. ಈ ಬಾರಿ ಅನಿರ್ದಿಷ್ಟಾವಧಿ ಧರಣಿಗೆ ನಾವು ಸಿದ್ಧರಾಗಿದ್ದೇವೆ ಎಂದು ಆಶಾ ಕಾರ್ಯಕರ್ತೆಯರ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ತಿಳಿಸಿದ್ದಾರೆ.

ರಾಜಧಾನಿಯಲ್ಲಿ ಟ್ರಾಫಿಕ್ ಜಾಮ್: ಆಶಾ ಕಾರ್ಯಕರ್ತೆಯರ ಪ್ರತಿಭಟನೆಯಿಂದ ಬೆಂಗಳೂರಿನ ವಿವಿಧೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್​ವರೆಗೂ ಆಶಾ ಕಾರ್ಯಕರ್ತೆಯರು ಸಾಗರೋಪಾದಿಯಲ್ಲಿ ಪ್ರತಿಭಟನಾ ಜಾಥಾ ನಡೆಸುತ್ತಿದ್ದಾರೆ. ಹೀಗಾಗಿ ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್, ಕಾರ್ಪೊರೇಷನ್, ಫ್ರೀಡಂಪಾರ್ಕ್​ ಸುತ್ತಮುತ್ತ ಭಾರಿ ಟ್ರಾಫಿಕ್ ಜಾಮ್ ನಿರ್ಮಾಣವಾಗಿದೆ. ಇದರಿಂದ ವಾಹನ ಸವಾರರು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ.

Published On - 1:44 pm, Fri, 3 January 20

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ