AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಲದಲ್ಲಿ ಪ್ರಾಣಿಗಳ ನೆರವಿಗೆ ನಿಂತ ಕಾರವಾರದ ಸೇವಾ ಸಂಘ; ಹಸಿದ ಶ್ವಾನಗಳಿಗೆ ಊಟ ನೀಡಿ ಸಹಾಯ

ಸರಿಯಾಗಿ ಆಹಾರ ಸಿಗದೆ ಶ್ವಾನಗಳು ಪರಿತಪಿಸುವ ದೃಶ್ಯ ಈಗ ಸಾಮಾನ್ಯವಾಗಿದೆ. ಹೀಗಾಗಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಗುರುಪದ್ಮನಾಭ ಸೇವಾ ಸಂಘ ಶ್ವಾನಗಳಿಗೆ ಆಹಾರ ನೀಡಲು ಮುಂದಾಗಿದೆ. ಆ ಮೂಲಕ ಕಾರವಾರ ನಗರದ ಬೀದಿಬದಿಗಳಲ್ಲಿರುವ ಶ್ವಾನಗಳಿಗೆ ಪ್ರತಿನಿತ್ಯ ಆಹಾರವನ್ನ ಶ್ವಾನ ಪ್ರೇಮ ಮೆರೆಯುತ್ತಿದ್ದಾರೆ.

ಕೊರೊನಾ ಕಾಲದಲ್ಲಿ ಪ್ರಾಣಿಗಳ ನೆರವಿಗೆ ನಿಂತ ಕಾರವಾರದ ಸೇವಾ ಸಂಘ; ಹಸಿದ ಶ್ವಾನಗಳಿಗೆ ಊಟ ನೀಡಿ ಸಹಾಯ
ಹಸಿದ ಶ್ವಾನಗಳಿಗೆ ಊಟ ನೀಡಿ ಸಹಾಯ
TV9 Web
| Edited By: |

Updated on: Jun 02, 2021 | 5:17 PM

Share

ಉತ್ತರ ಕನ್ನಡ: ಕೊರೊನಾ ಎರಡನೇ ಅಲೆಯ ಪರಿಣಾಮ ತೀವ್ರವಾಗಿದ್ದು, ಪರಿಸ್ಥಿತಿಯನ್ನು ಸುಧಾರಿಸಲು ಸರ್ಕಾರ ಲಾಕ್​ಡೌನ್ ಜಾರಿ ಮಾಡಿದ ಇದರಿಂದಾಗಿ ಬಡವರು,ನಿರ್ಗತಿಕರು ನಿತ್ಯದ ಒಂದು ಹೊತ್ತಿನ ಊಟಕ್ಕೆ ಪರದಾಡುವಂತಾಗಿದೆ. ಇಂತಹವರ ನೆರವಿಗಾಗಿ ಧಾವಿಸಿದ ಅದೆಷ್ಟೋ ಘಟನೆಗಳ ಬಗ್ಗೆ ನಾವು ಓದಿದ್ದೇವೆ ಆದರೆ ಈ ಪ್ರಕೃತಿಯಲ್ಲಿರುವ ಪ್ರಾಣಿಪಕ್ಷಿಗಳ ಪರಿಸ್ಥಿತಿ ಈಗ ಚಿಂತಾಜನಕವಾಗಿದೆ. ಅಂಗಡಿಗಳು, ಹೊಟೇಲುಗಳು ಬಂದ್ ಆಗಿದ್ದರಿಂದ ಶ್ವಾನಗಳ ಪರಿಸ್ಥಿತಿ ಶೋಚನೀಯವಾಗಿದೆ. ಇದನ್ನು ಮನಗಂಡ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೇವಾ ಸಂಘವೊಂದು ಶ್ವಾನಗಳಿಗೆ ಆಹಾರ ನೀಡಿ ಮಾನವೀಯತೆ ಮೆರೆದಿದ್ದಾರೆ.

ಈಗಾಗಲೇ ಕರೋನಾ ನಿಯಂತ್ರಣದ ಸಲುವಾಗಿ ಕಟ್ಟುನಿಟ್ಟಿನ ಕ್ರಮ ಜಾರಿಯಲ್ಲಿದೆ. ಶ್ವಾನಗಳು ಮನುಷ್ಯ ನೀಡಿದ ಅನ್ನವನ್ನ ನಂಬಿಕೊಂಡಿವೆ. ಬೇರೆ ಪ್ರಾಣಿ ಪಕ್ಷಿಗಳಾದರೂ, ಬೇರೆ ಯಾವುದಾದರೂ ಆಹಾರವನ್ನಾದರೂ ಹುಡುಕಿ ತಿನ್ನಬಹುದು. ಆದರೆ ನಿಯತ್ತಿಗೆ ಹೆಸರಾದ ಶ್ವಾನಕ್ಕೆ ಮನುಷ್ಯ ಆಹಾರ ನೀಡಿದರಷ್ಟೆ ಅವುಗಳ ಹೊಟ್ಟೆ ತುಂಬಬಹುದು.

ಸರಿಯಾಗಿ ಆಹಾರ ಸಿಗದೆ ಶ್ವಾನಗಳು ಪರಿತಪಿಸುವ ದೃಶ್ಯ ಈಗ ಸಾಮಾನ್ಯವಾಗಿದೆ. ಹೀಗಾಗಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಗುರುಪದ್ಮನಾಭ ಸೇವಾ ಸಂಘ ಶ್ವಾನಗಳಿಗೆ ಆಹಾರ ನೀಡಲು ಮುಂದಾಗಿದೆ. ಆ ಮೂಲಕ ಕಾರವಾರ ನಗರದ ಬೀದಿಬದಿಗಳಲ್ಲಿರುವ ಶ್ವಾನಗಳಿಗೆ ಪ್ರತಿನಿತ್ಯ ಆಹಾರವನ್ನ ಶ್ವಾನ ಪ್ರೇಮ ಮೆರೆಯುತ್ತಿದ್ದಾರೆ.

ಇಂದು ಮನುಷ್ಯರಿಗೆ ಸರಿಯಾಗಿ ಊಟ ಸಿಗುತ್ತಿಲ್ಲ. ಅಂತದರಲ್ಲಿ ಪ್ರಾಣಿಗಳಿಗೆ ಆಹಾರ ಸಿಗುವುದು ಹೇಗೆ. ಹೀಗಅಗಿ ಸಂಘದ 22 ಜನರು ಸದಸ್ಯರು ಒಂದೊಂದು ವಸ್ತುವನ್ನ ಸಂಗ್ರಹಿಸಿ ಶ್ವಾನಗಳಿಗೆ ಆಹಾರ ತಯಾರಿಸುತ್ತಿದ್ದೇವೆ. ಮಧ್ಯಾಹ್ನ ಕಾರವಾರದ ವಿವಿಧ ಭಾಗಗಳಿಗೆ ಆಟೋದಲ್ಲಿ ಬಂದು ಆಹಾರ ನೀಡಿ, ಶ್ವಾನಗಳು ಆಹಾರಕ್ಕಾಗಿ ಪರಿತಪಿಸುವ ಸ್ಥಿತಿಯನ್ನು ತಪ್ಪಿಸುತ್ತಿದ್ದೇವೆ. ಇದರಿಂದ ನಮ್ಮ ಮನಸ್ಸಿಗೆ ಖುಷಿಯಾಗುತ್ತಿದೆ ಎಂದು ಗುರುಪದ್ಮನಾಭ ಸೇವಾ ಸಂಘದ ಸದಸ್ಯೆ ಸರಸ್ವತಿ ತಿಳಿಸಿದ್ದಾರೆ.

ಒಟ್ಟಿನಲ್ಲಿ ಕೊರೊನಾ ಸಂಕಷ್ಟದ ಈ ಕಾಲದಲ್ಲಿ ಇಡೀ ಮನುಕುಲವೇ ಸಂಕಷ್ಟದ ಸ್ಥಿತಿಯಲ್ಲಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಬೀದಿ ಪ್ರಾಣಿಗಳಿಗೆ ಅನ್ನ ಆಹಾರವನ್ನ ನೀಡಿ ಮಾನವೀಯತೆ ಮೆರೆಯುತ್ತಿರುವುದು ನಿಜಕ್ಕೂ ಪ್ರಶಂಸನೀಯವಾಗಿದೆ.

ಇದನ್ನೂ ಓದಿ:

ದೇವನಹಳ್ಳಿ ಇಂದಿರಾ ಕ್ಯಾಂಟೀನ್​ಗೆ ಬಾರದ ಜನ; ಸಾರ್ವಜನಿಕರ ಬಳಿಯೇ ಊಟ ಕೊಂಡೊಯ್ದ ಅಧಿಕಾರಿಗಳು

ಬಳ್ಳಾರಿಯಿಂದ ಕೆನಡಾಕ್ಕೆ ಹೊರಟ ಬೀದಿ ನಾಯಿ! ನಾಯಿಮರಿಯನ್ನು ದತ್ತು ಪಡೆದ ಕೆನಡಾದ ಮಹಿಳೆ

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?