AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBI Probe: ಗುರುರಾಘವೇಂದ್ರ ಬ್ಯಾಂಕ್ ಹಗರಣದ ತನಿಖೆ ಸಿಬಿಐಗೆ ರವಾನೆ: ಪರಿಷತ್​ನಲ್ಲಿ ಸಹಕಾರ ಸಚಿವರ ಹೇಳಿಕೆ

ST Somashekhar In Vidhana Parishat- ಶ್ರೀ ಗುರುರಾಘವೇಂದ್ರ ಕೋಆಪರೇಟಿವ್ ಬ್ಯಾಂಕ್​ನ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲಾಗುವುದು ಎಂದು ವಿಧಾನಪರಿಷತ್​ನಲ್ಲಿ ಸಹಕಾರ ಸಚಿವ ಎಸ್​ಟಿ ಸೋಮಶೇಖರ್ ತಿಳಿಸಿದ್ದಾರೆ.

CBI Probe: ಗುರುರಾಘವೇಂದ್ರ ಬ್ಯಾಂಕ್ ಹಗರಣದ ತನಿಖೆ ಸಿಬಿಐಗೆ ರವಾನೆ: ಪರಿಷತ್​ನಲ್ಲಿ ಸಹಕಾರ ಸಚಿವರ ಹೇಳಿಕೆ
ಗುರುರಾಘವೇಂದ್ರ ಸಹಕಾರ ಬ್ಯಾಂಕ್‌
TV9 Web
| Edited By: |

Updated on:Feb 15, 2023 | 11:40 AM

Share

ಬೆಂಗಳೂರು: ಸಾವಿರಾರು ಕೋಟಿ ರೂ ಅಕ್ರಮ, ವಂಚನೆ ಎಸಗಿದ ಆರೋಪ ಎದುರಿಸುತ್ತಿರುವ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಸಂಸ್ಥೆ (SGRSBN- Sri Guru Raghavendra Sahakari Bank Niyamita) ಹಗರಣದ ತನಿಖೆಯನ್ನು ಸಿಬಿಐಗೆ (CBI Probe) ಹಸ್ತಾಂತರಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ (Minister ST Somashekhar) ಪುನರುಚ್ಚರಿಸಿದ್ದಾರೆ. ವಿಧಾನಪರಿಷತ್​ನಲ್ಲಿ ಕಾಂಗ್ರೆಸ್ ಸದಸ್ಯ ಯುಬಿ ವೆಂಕಟೇಶ್ ಅವರ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಿದ್ದ ಸಹಕಾರ ಸಚಿವರು, ಈ ಬ್ಯಾಂಕ್ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವ ನಿಟ್ಟಿನಲ್ಲಿ ಎಲ್ಲಾ ಸಿದ್ಧತೆ ನಡೆದಿದೆ. ಶೀಘ್ರದಲ್ಲೇ ಗೃಹ ಸಚಿವಾಲಯ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ.

ಶ್ರಿ ಗುರುರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಸಂಸ್ಥೆಯಿಂದ 1290 ಕೋಟಿ ರೂ ಅಕ್ರಮ ನಡೆದಿರುವುದು ಇಲ್ಲಿಯವರೆಗೆ ಸಹಕಾರ ಇಲಾಖೆ ಮತ್ತು ಜಾರಿ ನಿರ್ದೇಶನಾಲಯ ಮಾಡಿರುವ ತನಿಖೆಯಿಂದ ಗೊತ್ತಾಗಿದೆ ಎಂಬ ವಿಚಾರವನ್ನು ಸಚಿವ ಎಸ್ ಟಿ ಸೋಮಶೇಖರ್ ವಿಧಾನಪರಿಷತ್​ಗೆ ತಿಳಿಸಿದ್ದಾರೆ.

ಬ್ಯಾಂಕ್​ನಿಂದ ಸಾಲ ಪಡೆದವ ಅಡಮಾನವಾಗಿ ಇಟ್ಟಿರುವ ದಾಖಲೆ ಬೇರೆಯವರಿಗೆ ಸೇರಿದ್ದರಿಂದ ಸಾಲ ಪಡೆದವನ ದಾಖಲೆಯನ್ನು ಜಪ್ತಿ ಮಾಡಲು ಆಗುವುದಿಲ್ಲ ಎಂದು ಇದೇ ವೇಳೆ ಕಾಂಗ್ರೆಸ್ ಶಾಸಕ ಯುಬಿ ವೆಂಕಟೇಶ್ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: How To: ಮೊಬೈಲ್ ಕಳೆದುಹೋಗಿದೆಯೇ? ತಪ್ಪದೇ ಈ ಕೆಲಸ ಮಾಡಿ; ವಿಡಿಯೋ ಶೇರ್ ಮಾಡಿದ ಡಿಜಿಪಿ

ಈ ಹಗರಣವನ್ನು ಸಿಬಿಐಗೆ ವಹಿಸಬೇಕೆಂದು ಬಹಳ ದಿನಗಳಿಂದಲೂ ಕೂಗು ಇದೆ. ಆದರೆ, ಇಡಿ ಮತ್ತು ಸಿಐಡಿಯಿಂದ ತನಿಖೆ ನಡೆಯುತ್ತಿದೆ. ಸಿಬಿಐಗೆ ತನಿಖೆಯನ್ನು ವಹಿಸಲಾಗುವುದು ಎಂದು ಸರ್ಕಾರ ಕೆಲ ತಿಂಗಳ ಹಿಂದೆಯೇ ಹೇಳಿತ್ತಾದರೂ ವಿಳಂಬಗೊಳ್ಳುತ್ತಾ ಬಂದಿದೆ. ಈ ಬಗ್ಗೆ ಸ್ಪಷ್ಟನೆ ಪರಿಷತ್​ನಲ್ಲಿ ಸ್ಪಷ್ಟನೆ ನೀಡಿದ ಎಸ್.ಟಿ. ಸೋಮಶೇಖರ್, ಸಿಐಡಿ ತನಿಖೆ ನಡೆಸುತ್ತಿದ್ದರಿಂದ ಸಿಬಿಐಗೆ ಹಸ್ತಾಂತರಿಸುವುದು ವಿಳಂಬವಾಯಿತು ಎಂದಿದ್ದಾರೆ.

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಜೊತೆಗೆ ವಸಿಷ್ಠ ಸಹಕಾರ ಸೊಸೈಟಿ, ಗುರುರಾಘವೇಂದ್ರ ಸೌಹಾರ್ದ ಸೊಸೈಟಿಯ ಹಗರಣಗಳನ್ನೂ ಸಿಬಿಐ ತನಿಖೆಗೆ ವಹಿಸುವ ಸಾಧ್ಯತೆ ಇದೆ. ಇಲ್ಲ್ಲೆಲ್ಲಾ ಸಾವಿರಾರು ಕೋಟಿ ರೂ ಮೊತ್ತದಷ್ಟು ಅಕ್ರಮಗಳಾಗಿರುವ ಆರೋಪ ಇದೆ.

ಒಂದು ವರ್ಷದ ಹಿಂದೆ ಗುರುರಾಘವೇಂದ್ರ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ ರಾಮಕೃಷ್ಣ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು.

Published On - 11:40 am, Wed, 15 February 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ