AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದನದಲ್ಲಿ ಉತ್ತಮ ಚರ್ಚೆಯೇ ನಡೆಯುತ್ತಿಲ್ಲ ಹಾಗಾಗಿ ಅಧಿವೇಶನದಲ್ಲಿ ಭಾಗವಹಿಸುತ್ತಿಲ್ಲ: ಹೆಚ್.ಡಿ ಕುಮಾರಸ್ವಾಮಿ

ಸದನದಲ್ಲಿ ಉತ್ತಮ ಚರ್ಚೆಯೇ ನಡೆಯುತ್ತಿಲ್ಲ ಹಾಗಾಗಿ ಅಧಿವೇಶನದಲ್ಲಿ ಭಾಗಿಯಾಗುತ್ತಿಲ್ಲ ಎಂದು ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಸದನದಲ್ಲಿ ಉತ್ತಮ ಚರ್ಚೆಯೇ ನಡೆಯುತ್ತಿಲ್ಲ ಹಾಗಾಗಿ ಅಧಿವೇಶನದಲ್ಲಿ ಭಾಗವಹಿಸುತ್ತಿಲ್ಲ: ಹೆಚ್.ಡಿ ಕುಮಾರಸ್ವಾಮಿ
ಹೆಚ್.​ಡಿ ಕುಮಾರಸ್ವಾಮಿ
shruti hegde
|

Updated on: Mar 11, 2021 | 2:54 PM

Share

ಮೈಸೂರು: ಸದನದ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಸಕ್ರಿಯವಾಗಿ ಭಾಗವಹಿಸದ ವಿಚಾರಕ್ಕೆ ಸಂಬಂಧಿಸಿ, ಸದನದಲ್ಲಿ ಉತ್ತಮ ಚರ್ಚೆಯೇ ನಡೆಯುತ್ತಿಲ್ಲ. ಸದನದ ಅಧಿವೇಶನದಲ್ಲಿ ಭಾಗಿಯಾಗುವುದರಿಂದ ಏನೂ ಪ್ರಯೋಜನವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರಿನಲ್ಲಿ ಈ ಕುರಿತಂತೆ ಮಾತನಾಡಿದ ಹೆಚ್​.ಡಿ ಕುಮಾರಸ್ವಾಮಿ, ನಾನು ಟಿಎ-ಡಿಎ ತೆಗೆದುಕೊಳ್ಳಲೆಂದು ಸದನಕ್ಕೆ ಹಾಜರಾಗಲ್ಲ. ಸದನದಲ್ಲಿ ಒಳ್ಳೆಯ ವಿಷಯದ ಕುರಿತು ಚರ್ಚೆಗಳಿದ್ದರೆ ಭಾಗಿಯಾಗುತ್ತೇನೆ. ಸದನದಲ್ಲಿ ಅಧಿಕೃತ ವಿಪಕ್ಷದವರು ಸಮಯವನ್ನು ಹಾಳು ಮಾಡುತ್ತಿದ್ದಾರೆ. ಇಲ್ಲಾ ಶರ್ಟ್‌ ಬಿಚ್ಚಿ ನಿಂತುಕೊಳ್ಳುತ್ತಾರೆ. ಇದಕ್ಕಾಗಿ ನಾವು ಅಧಿವೇಶನದಲ್ಲಿ ಭಾಗಿಯಾಗಬೇಕಾ? ಎಂದು ಪ್ರಶ್ನಿಸಿದ್ದಾರೆ.

ಸೋಮವಾರ ಸದನಕ್ಕೆ ಹೋಗುತ್ತೇನೆ. ಆದರೆ ಕಚೇರಿಯಲ್ಲಿರುತ್ತೇನೆ. ಸದನದಲ್ಲಿ ನಡೆಯುವ ಚರ್ಚೆಯನ್ನ ಟಿವಿಯಲ್ಲಿ ನೋಡಿ ಒಳ್ಳೆ ವಿಷಯ ಇದ್ದರೆ ಚರ್ಚೆಯಲ್ಲಿ ಭಾಗಿಯಾಗುತ್ತೇನೆ ಎಂದು ಉತ್ತರಿಸಿದ್ದಾರೆ.

ಇನ್ನು, ಒಕ್ಕಲಿಗರಿಗೆ ಹಣ ಬಿಡುಗಡೆ ಕುರಿತಾಗಿ ಪ್ರತಿಕ್ರಿಯಿಸಿದ ಹೆಚ್​.ಡಿ ಕುಮಾರಸ್ವಾಮಿ, ಒಕ್ಕಲಿಗರಿಗೆ 500 ಕೋಟಿ ಅಲ್ಲ, 5 ರೂಪಾಯಿ ಸಹ ಕೊಡಲ್ಲ. ಕೇವಲ ಬಜೆಟ್ ಪುಸ್ತಕದಲ್ಲಿ ಬರೆದು ಓದಿದ್ದಾರೆ ಅಷ್ಟೇ. ಪುಸ್ತಕದಲ್ಲಿ ಬರೆದಿರುವ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಈ ವರ್ಷವೇ ಒಕ್ಕಲಿಗರಿಗೆ ಹಣ ಬಿಡುಗಡೆ ಬಗ್ಗೆ ಮಾಹಿತಿ ಇದೆಯಾ? ಹೀಗಾಗಿ ಬಜೆಟ್‌ನಲ್ಲಿ ಒಕ್ಕಲಿಗರಿಗೆ 5 ರೂಪಾಯಿ ಕೂಡ ಸಿಗಲ್ಲ ಎಂದು ಮಾತನಾಡಿದ್ದಾರೆ.

ಇದನ್ನೂ ಓದಿ: ಜೆಡಿಎಸ್​​ನಿಂದ ಹೊರ ಹೋಗುವವರಿಗೆ ಬಾಗಿಲು ತೆರೆದಿದೆ: ಹೆಚ್​​.ಡಿ. ಕುಮಾರಸ್ವಾಮಿ

ಇದನ್ನೂ ಓದಿ: ಹೆಚ್‌ಡಿ ಕುಮಾರಸ್ವಾಮಿಗೆ ರಮೇಶ್ ಜಾರಕಿಹೊಳಿ ಧನ್ಯವಾದ ಹೇಳಿದ್ದೇಕೆ? ಬಾಂಬೆಗೆ ಹೋಗಿದ್ದವರ ಸಿಡಿ ಬಿಜೆಪಿ ಬಳಿಯೇ ಇದೆ -ಮೈಸೂರು ಕಾಂಗ್ರೆಸ್ ವಕ್ತಾರ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?