AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದನದಲ್ಲಿ ಉತ್ತಮ ಚರ್ಚೆಯೇ ನಡೆಯುತ್ತಿಲ್ಲ ಹಾಗಾಗಿ ಅಧಿವೇಶನದಲ್ಲಿ ಭಾಗವಹಿಸುತ್ತಿಲ್ಲ: ಹೆಚ್.ಡಿ ಕುಮಾರಸ್ವಾಮಿ

ಸದನದಲ್ಲಿ ಉತ್ತಮ ಚರ್ಚೆಯೇ ನಡೆಯುತ್ತಿಲ್ಲ ಹಾಗಾಗಿ ಅಧಿವೇಶನದಲ್ಲಿ ಭಾಗಿಯಾಗುತ್ತಿಲ್ಲ ಎಂದು ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಸದನದಲ್ಲಿ ಉತ್ತಮ ಚರ್ಚೆಯೇ ನಡೆಯುತ್ತಿಲ್ಲ ಹಾಗಾಗಿ ಅಧಿವೇಶನದಲ್ಲಿ ಭಾಗವಹಿಸುತ್ತಿಲ್ಲ: ಹೆಚ್.ಡಿ ಕುಮಾರಸ್ವಾಮಿ
ಹೆಚ್.​ಡಿ ಕುಮಾರಸ್ವಾಮಿ
shruti hegde
|

Updated on: Mar 11, 2021 | 2:54 PM

Share

ಮೈಸೂರು: ಸದನದ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಸಕ್ರಿಯವಾಗಿ ಭಾಗವಹಿಸದ ವಿಚಾರಕ್ಕೆ ಸಂಬಂಧಿಸಿ, ಸದನದಲ್ಲಿ ಉತ್ತಮ ಚರ್ಚೆಯೇ ನಡೆಯುತ್ತಿಲ್ಲ. ಸದನದ ಅಧಿವೇಶನದಲ್ಲಿ ಭಾಗಿಯಾಗುವುದರಿಂದ ಏನೂ ಪ್ರಯೋಜನವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರಿನಲ್ಲಿ ಈ ಕುರಿತಂತೆ ಮಾತನಾಡಿದ ಹೆಚ್​.ಡಿ ಕುಮಾರಸ್ವಾಮಿ, ನಾನು ಟಿಎ-ಡಿಎ ತೆಗೆದುಕೊಳ್ಳಲೆಂದು ಸದನಕ್ಕೆ ಹಾಜರಾಗಲ್ಲ. ಸದನದಲ್ಲಿ ಒಳ್ಳೆಯ ವಿಷಯದ ಕುರಿತು ಚರ್ಚೆಗಳಿದ್ದರೆ ಭಾಗಿಯಾಗುತ್ತೇನೆ. ಸದನದಲ್ಲಿ ಅಧಿಕೃತ ವಿಪಕ್ಷದವರು ಸಮಯವನ್ನು ಹಾಳು ಮಾಡುತ್ತಿದ್ದಾರೆ. ಇಲ್ಲಾ ಶರ್ಟ್‌ ಬಿಚ್ಚಿ ನಿಂತುಕೊಳ್ಳುತ್ತಾರೆ. ಇದಕ್ಕಾಗಿ ನಾವು ಅಧಿವೇಶನದಲ್ಲಿ ಭಾಗಿಯಾಗಬೇಕಾ? ಎಂದು ಪ್ರಶ್ನಿಸಿದ್ದಾರೆ.

ಸೋಮವಾರ ಸದನಕ್ಕೆ ಹೋಗುತ್ತೇನೆ. ಆದರೆ ಕಚೇರಿಯಲ್ಲಿರುತ್ತೇನೆ. ಸದನದಲ್ಲಿ ನಡೆಯುವ ಚರ್ಚೆಯನ್ನ ಟಿವಿಯಲ್ಲಿ ನೋಡಿ ಒಳ್ಳೆ ವಿಷಯ ಇದ್ದರೆ ಚರ್ಚೆಯಲ್ಲಿ ಭಾಗಿಯಾಗುತ್ತೇನೆ ಎಂದು ಉತ್ತರಿಸಿದ್ದಾರೆ.

ಇನ್ನು, ಒಕ್ಕಲಿಗರಿಗೆ ಹಣ ಬಿಡುಗಡೆ ಕುರಿತಾಗಿ ಪ್ರತಿಕ್ರಿಯಿಸಿದ ಹೆಚ್​.ಡಿ ಕುಮಾರಸ್ವಾಮಿ, ಒಕ್ಕಲಿಗರಿಗೆ 500 ಕೋಟಿ ಅಲ್ಲ, 5 ರೂಪಾಯಿ ಸಹ ಕೊಡಲ್ಲ. ಕೇವಲ ಬಜೆಟ್ ಪುಸ್ತಕದಲ್ಲಿ ಬರೆದು ಓದಿದ್ದಾರೆ ಅಷ್ಟೇ. ಪುಸ್ತಕದಲ್ಲಿ ಬರೆದಿರುವ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಈ ವರ್ಷವೇ ಒಕ್ಕಲಿಗರಿಗೆ ಹಣ ಬಿಡುಗಡೆ ಬಗ್ಗೆ ಮಾಹಿತಿ ಇದೆಯಾ? ಹೀಗಾಗಿ ಬಜೆಟ್‌ನಲ್ಲಿ ಒಕ್ಕಲಿಗರಿಗೆ 5 ರೂಪಾಯಿ ಕೂಡ ಸಿಗಲ್ಲ ಎಂದು ಮಾತನಾಡಿದ್ದಾರೆ.

ಇದನ್ನೂ ಓದಿ: ಜೆಡಿಎಸ್​​ನಿಂದ ಹೊರ ಹೋಗುವವರಿಗೆ ಬಾಗಿಲು ತೆರೆದಿದೆ: ಹೆಚ್​​.ಡಿ. ಕುಮಾರಸ್ವಾಮಿ

ಇದನ್ನೂ ಓದಿ: ಹೆಚ್‌ಡಿ ಕುಮಾರಸ್ವಾಮಿಗೆ ರಮೇಶ್ ಜಾರಕಿಹೊಳಿ ಧನ್ಯವಾದ ಹೇಳಿದ್ದೇಕೆ? ಬಾಂಬೆಗೆ ಹೋಗಿದ್ದವರ ಸಿಡಿ ಬಿಜೆಪಿ ಬಳಿಯೇ ಇದೆ -ಮೈಸೂರು ಕಾಂಗ್ರೆಸ್ ವಕ್ತಾರ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!