AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದನದಲ್ಲಿ ಉತ್ತಮ ಚರ್ಚೆಯೇ ನಡೆಯುತ್ತಿಲ್ಲ ಹಾಗಾಗಿ ಅಧಿವೇಶನದಲ್ಲಿ ಭಾಗವಹಿಸುತ್ತಿಲ್ಲ: ಹೆಚ್.ಡಿ ಕುಮಾರಸ್ವಾಮಿ

ಸದನದಲ್ಲಿ ಉತ್ತಮ ಚರ್ಚೆಯೇ ನಡೆಯುತ್ತಿಲ್ಲ ಹಾಗಾಗಿ ಅಧಿವೇಶನದಲ್ಲಿ ಭಾಗಿಯಾಗುತ್ತಿಲ್ಲ ಎಂದು ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಸದನದಲ್ಲಿ ಉತ್ತಮ ಚರ್ಚೆಯೇ ನಡೆಯುತ್ತಿಲ್ಲ ಹಾಗಾಗಿ ಅಧಿವೇಶನದಲ್ಲಿ ಭಾಗವಹಿಸುತ್ತಿಲ್ಲ: ಹೆಚ್.ಡಿ ಕುಮಾರಸ್ವಾಮಿ
ಹೆಚ್.​ಡಿ ಕುಮಾರಸ್ವಾಮಿ
shruti hegde
|

Updated on: Mar 11, 2021 | 2:54 PM

Share

ಮೈಸೂರು: ಸದನದ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಸಕ್ರಿಯವಾಗಿ ಭಾಗವಹಿಸದ ವಿಚಾರಕ್ಕೆ ಸಂಬಂಧಿಸಿ, ಸದನದಲ್ಲಿ ಉತ್ತಮ ಚರ್ಚೆಯೇ ನಡೆಯುತ್ತಿಲ್ಲ. ಸದನದ ಅಧಿವೇಶನದಲ್ಲಿ ಭಾಗಿಯಾಗುವುದರಿಂದ ಏನೂ ಪ್ರಯೋಜನವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರಿನಲ್ಲಿ ಈ ಕುರಿತಂತೆ ಮಾತನಾಡಿದ ಹೆಚ್​.ಡಿ ಕುಮಾರಸ್ವಾಮಿ, ನಾನು ಟಿಎ-ಡಿಎ ತೆಗೆದುಕೊಳ್ಳಲೆಂದು ಸದನಕ್ಕೆ ಹಾಜರಾಗಲ್ಲ. ಸದನದಲ್ಲಿ ಒಳ್ಳೆಯ ವಿಷಯದ ಕುರಿತು ಚರ್ಚೆಗಳಿದ್ದರೆ ಭಾಗಿಯಾಗುತ್ತೇನೆ. ಸದನದಲ್ಲಿ ಅಧಿಕೃತ ವಿಪಕ್ಷದವರು ಸಮಯವನ್ನು ಹಾಳು ಮಾಡುತ್ತಿದ್ದಾರೆ. ಇಲ್ಲಾ ಶರ್ಟ್‌ ಬಿಚ್ಚಿ ನಿಂತುಕೊಳ್ಳುತ್ತಾರೆ. ಇದಕ್ಕಾಗಿ ನಾವು ಅಧಿವೇಶನದಲ್ಲಿ ಭಾಗಿಯಾಗಬೇಕಾ? ಎಂದು ಪ್ರಶ್ನಿಸಿದ್ದಾರೆ.

ಸೋಮವಾರ ಸದನಕ್ಕೆ ಹೋಗುತ್ತೇನೆ. ಆದರೆ ಕಚೇರಿಯಲ್ಲಿರುತ್ತೇನೆ. ಸದನದಲ್ಲಿ ನಡೆಯುವ ಚರ್ಚೆಯನ್ನ ಟಿವಿಯಲ್ಲಿ ನೋಡಿ ಒಳ್ಳೆ ವಿಷಯ ಇದ್ದರೆ ಚರ್ಚೆಯಲ್ಲಿ ಭಾಗಿಯಾಗುತ್ತೇನೆ ಎಂದು ಉತ್ತರಿಸಿದ್ದಾರೆ.

ಇನ್ನು, ಒಕ್ಕಲಿಗರಿಗೆ ಹಣ ಬಿಡುಗಡೆ ಕುರಿತಾಗಿ ಪ್ರತಿಕ್ರಿಯಿಸಿದ ಹೆಚ್​.ಡಿ ಕುಮಾರಸ್ವಾಮಿ, ಒಕ್ಕಲಿಗರಿಗೆ 500 ಕೋಟಿ ಅಲ್ಲ, 5 ರೂಪಾಯಿ ಸಹ ಕೊಡಲ್ಲ. ಕೇವಲ ಬಜೆಟ್ ಪುಸ್ತಕದಲ್ಲಿ ಬರೆದು ಓದಿದ್ದಾರೆ ಅಷ್ಟೇ. ಪುಸ್ತಕದಲ್ಲಿ ಬರೆದಿರುವ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಈ ವರ್ಷವೇ ಒಕ್ಕಲಿಗರಿಗೆ ಹಣ ಬಿಡುಗಡೆ ಬಗ್ಗೆ ಮಾಹಿತಿ ಇದೆಯಾ? ಹೀಗಾಗಿ ಬಜೆಟ್‌ನಲ್ಲಿ ಒಕ್ಕಲಿಗರಿಗೆ 5 ರೂಪಾಯಿ ಕೂಡ ಸಿಗಲ್ಲ ಎಂದು ಮಾತನಾಡಿದ್ದಾರೆ.

ಇದನ್ನೂ ಓದಿ: ಜೆಡಿಎಸ್​​ನಿಂದ ಹೊರ ಹೋಗುವವರಿಗೆ ಬಾಗಿಲು ತೆರೆದಿದೆ: ಹೆಚ್​​.ಡಿ. ಕುಮಾರಸ್ವಾಮಿ

ಇದನ್ನೂ ಓದಿ: ಹೆಚ್‌ಡಿ ಕುಮಾರಸ್ವಾಮಿಗೆ ರಮೇಶ್ ಜಾರಕಿಹೊಳಿ ಧನ್ಯವಾದ ಹೇಳಿದ್ದೇಕೆ? ಬಾಂಬೆಗೆ ಹೋಗಿದ್ದವರ ಸಿಡಿ ಬಿಜೆಪಿ ಬಳಿಯೇ ಇದೆ -ಮೈಸೂರು ಕಾಂಗ್ರೆಸ್ ವಕ್ತಾರ

Follow Us
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ