AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದನದಲ್ಲಿ ಉತ್ತಮ ಚರ್ಚೆಯೇ ನಡೆಯುತ್ತಿಲ್ಲ ಹಾಗಾಗಿ ಅಧಿವೇಶನದಲ್ಲಿ ಭಾಗವಹಿಸುತ್ತಿಲ್ಲ: ಹೆಚ್.ಡಿ ಕುಮಾರಸ್ವಾಮಿ

ಸದನದಲ್ಲಿ ಉತ್ತಮ ಚರ್ಚೆಯೇ ನಡೆಯುತ್ತಿಲ್ಲ ಹಾಗಾಗಿ ಅಧಿವೇಶನದಲ್ಲಿ ಭಾಗಿಯಾಗುತ್ತಿಲ್ಲ ಎಂದು ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಸದನದಲ್ಲಿ ಉತ್ತಮ ಚರ್ಚೆಯೇ ನಡೆಯುತ್ತಿಲ್ಲ ಹಾಗಾಗಿ ಅಧಿವೇಶನದಲ್ಲಿ ಭಾಗವಹಿಸುತ್ತಿಲ್ಲ: ಹೆಚ್.ಡಿ ಕುಮಾರಸ್ವಾಮಿ
ಹೆಚ್.​ಡಿ ಕುಮಾರಸ್ವಾಮಿ
shruti hegde
|

Updated on: Mar 11, 2021 | 2:54 PM

Share

ಮೈಸೂರು: ಸದನದ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಸಕ್ರಿಯವಾಗಿ ಭಾಗವಹಿಸದ ವಿಚಾರಕ್ಕೆ ಸಂಬಂಧಿಸಿ, ಸದನದಲ್ಲಿ ಉತ್ತಮ ಚರ್ಚೆಯೇ ನಡೆಯುತ್ತಿಲ್ಲ. ಸದನದ ಅಧಿವೇಶನದಲ್ಲಿ ಭಾಗಿಯಾಗುವುದರಿಂದ ಏನೂ ಪ್ರಯೋಜನವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರಿನಲ್ಲಿ ಈ ಕುರಿತಂತೆ ಮಾತನಾಡಿದ ಹೆಚ್​.ಡಿ ಕುಮಾರಸ್ವಾಮಿ, ನಾನು ಟಿಎ-ಡಿಎ ತೆಗೆದುಕೊಳ್ಳಲೆಂದು ಸದನಕ್ಕೆ ಹಾಜರಾಗಲ್ಲ. ಸದನದಲ್ಲಿ ಒಳ್ಳೆಯ ವಿಷಯದ ಕುರಿತು ಚರ್ಚೆಗಳಿದ್ದರೆ ಭಾಗಿಯಾಗುತ್ತೇನೆ. ಸದನದಲ್ಲಿ ಅಧಿಕೃತ ವಿಪಕ್ಷದವರು ಸಮಯವನ್ನು ಹಾಳು ಮಾಡುತ್ತಿದ್ದಾರೆ. ಇಲ್ಲಾ ಶರ್ಟ್‌ ಬಿಚ್ಚಿ ನಿಂತುಕೊಳ್ಳುತ್ತಾರೆ. ಇದಕ್ಕಾಗಿ ನಾವು ಅಧಿವೇಶನದಲ್ಲಿ ಭಾಗಿಯಾಗಬೇಕಾ? ಎಂದು ಪ್ರಶ್ನಿಸಿದ್ದಾರೆ.

ಸೋಮವಾರ ಸದನಕ್ಕೆ ಹೋಗುತ್ತೇನೆ. ಆದರೆ ಕಚೇರಿಯಲ್ಲಿರುತ್ತೇನೆ. ಸದನದಲ್ಲಿ ನಡೆಯುವ ಚರ್ಚೆಯನ್ನ ಟಿವಿಯಲ್ಲಿ ನೋಡಿ ಒಳ್ಳೆ ವಿಷಯ ಇದ್ದರೆ ಚರ್ಚೆಯಲ್ಲಿ ಭಾಗಿಯಾಗುತ್ತೇನೆ ಎಂದು ಉತ್ತರಿಸಿದ್ದಾರೆ.

ಇನ್ನು, ಒಕ್ಕಲಿಗರಿಗೆ ಹಣ ಬಿಡುಗಡೆ ಕುರಿತಾಗಿ ಪ್ರತಿಕ್ರಿಯಿಸಿದ ಹೆಚ್​.ಡಿ ಕುಮಾರಸ್ವಾಮಿ, ಒಕ್ಕಲಿಗರಿಗೆ 500 ಕೋಟಿ ಅಲ್ಲ, 5 ರೂಪಾಯಿ ಸಹ ಕೊಡಲ್ಲ. ಕೇವಲ ಬಜೆಟ್ ಪುಸ್ತಕದಲ್ಲಿ ಬರೆದು ಓದಿದ್ದಾರೆ ಅಷ್ಟೇ. ಪುಸ್ತಕದಲ್ಲಿ ಬರೆದಿರುವ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಈ ವರ್ಷವೇ ಒಕ್ಕಲಿಗರಿಗೆ ಹಣ ಬಿಡುಗಡೆ ಬಗ್ಗೆ ಮಾಹಿತಿ ಇದೆಯಾ? ಹೀಗಾಗಿ ಬಜೆಟ್‌ನಲ್ಲಿ ಒಕ್ಕಲಿಗರಿಗೆ 5 ರೂಪಾಯಿ ಕೂಡ ಸಿಗಲ್ಲ ಎಂದು ಮಾತನಾಡಿದ್ದಾರೆ.

ಇದನ್ನೂ ಓದಿ: ಜೆಡಿಎಸ್​​ನಿಂದ ಹೊರ ಹೋಗುವವರಿಗೆ ಬಾಗಿಲು ತೆರೆದಿದೆ: ಹೆಚ್​​.ಡಿ. ಕುಮಾರಸ್ವಾಮಿ

ಇದನ್ನೂ ಓದಿ: ಹೆಚ್‌ಡಿ ಕುಮಾರಸ್ವಾಮಿಗೆ ರಮೇಶ್ ಜಾರಕಿಹೊಳಿ ಧನ್ಯವಾದ ಹೇಳಿದ್ದೇಕೆ? ಬಾಂಬೆಗೆ ಹೋಗಿದ್ದವರ ಸಿಡಿ ಬಿಜೆಪಿ ಬಳಿಯೇ ಇದೆ -ಮೈಸೂರು ಕಾಂಗ್ರೆಸ್ ವಕ್ತಾರ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!