AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೆಂಗಳೂರಿಗಾಗಿ ಒಕ್ಕಲಿಗರು ಭೂಮಿ ತ್ಯಾಗ ಮಾಡಿದ್ದಾರೆ.. ಮೊದ್ಲು ಒಕ್ಕಲಿಗ ಪ್ರಾಧಿಕಾರ ಮಾಡ್ಬೇಕಿತ್ತು’

ಬೆಂಗಳೂರು: ಸರ್ಕಾರದಿಂದ ಮರಾಠ ಅಭಿವೃದ್ಧಿ ನಿಗಮಕ್ಕೆ ನನ್ನ ವಿರೋಧವಿಲ್ಲವೆಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ನಿಗಮ ರಚನೆ ಬಗ್ಗೆ ಸರ್ಕಾರ ಸರಿಯಾದ ಮಾಹಿತಿ ಕೊಟ್ಟಿದ್ದರೆ ಈ ಗೊಂದಲ ಆಗ್ತಿರಲಿಲ್ಲ ಎಂದಿರುವ ಹೆಚ್​.ಡಿ.ಕೆ, ಅಭಿವೃದ್ಧಿಗೆ ಹಣ ಸಂಗ್ರಹ ಆಗ್ತಿರೋದು ಬೆಂಗಳೂರಿನ ಒಕ್ಕಲಿಗ ಸಮುದಾಯದಿಂದ. ಒಕ್ಕಲಿಗ ಸಮುದಾಯ ತಮ್ಮ ಕೃಷಿ ಭೂಮಿ ಬಿಟ್ಕೊಟ್ಟು ಕಾರ್ಮಿಕರಾಗಿದ್ದಾರೆ. ಬೆಂಗಳೂರು‌ ನಗರಕ್ಕೆ ಒಕ್ಕಲಿಗ ಸಮುದಾಯ ಭೂಮಿ ಕೊಟ್ಟು ತ್ಯಾಗ ಮಾಡಿದ್ದಾರೆ. ಹಾಗೆ ನೋಡಿದ್ರೆ, ಮೊದ್ಲು ಒಕ್ಕಲಿಗ ‌ಪ್ರಾಧಿಕಾರ ಮಾಡ್ಬೇಕಿತ್ತುಎಂದು ಕುಮಾರಸ್ವಾಮಿ ಹೇಳಿದರು. ಆದ್ರೆ, […]

‘ಬೆಂಗಳೂರಿಗಾಗಿ ಒಕ್ಕಲಿಗರು ಭೂಮಿ ತ್ಯಾಗ ಮಾಡಿದ್ದಾರೆ.. ಮೊದ್ಲು ಒಕ್ಕಲಿಗ ಪ್ರಾಧಿಕಾರ ಮಾಡ್ಬೇಕಿತ್ತು’
ಪೃಥ್ವಿಶಂಕರ
|

Updated on:Nov 22, 2020 | 2:48 PM

Share

ಬೆಂಗಳೂರು: ಸರ್ಕಾರದಿಂದ ಮರಾಠ ಅಭಿವೃದ್ಧಿ ನಿಗಮಕ್ಕೆ ನನ್ನ ವಿರೋಧವಿಲ್ಲವೆಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ನಿಗಮ ರಚನೆ ಬಗ್ಗೆ ಸರ್ಕಾರ ಸರಿಯಾದ ಮಾಹಿತಿ ಕೊಟ್ಟಿದ್ದರೆ ಈ ಗೊಂದಲ ಆಗ್ತಿರಲಿಲ್ಲ ಎಂದಿರುವ ಹೆಚ್​.ಡಿ.ಕೆ, ಅಭಿವೃದ್ಧಿಗೆ ಹಣ ಸಂಗ್ರಹ ಆಗ್ತಿರೋದು ಬೆಂಗಳೂರಿನ ಒಕ್ಕಲಿಗ ಸಮುದಾಯದಿಂದ. ಒಕ್ಕಲಿಗ ಸಮುದಾಯ ತಮ್ಮ ಕೃಷಿ ಭೂಮಿ ಬಿಟ್ಕೊಟ್ಟು ಕಾರ್ಮಿಕರಾಗಿದ್ದಾರೆ. ಬೆಂಗಳೂರು‌ ನಗರಕ್ಕೆ ಒಕ್ಕಲಿಗ ಸಮುದಾಯ ಭೂಮಿ ಕೊಟ್ಟು ತ್ಯಾಗ ಮಾಡಿದ್ದಾರೆ. ಹಾಗೆ ನೋಡಿದ್ರೆ, ಮೊದ್ಲು ಒಕ್ಕಲಿಗ ‌ಪ್ರಾಧಿಕಾರ ಮಾಡ್ಬೇಕಿತ್ತುಎಂದು ಕುಮಾರಸ್ವಾಮಿ ಹೇಳಿದರು.

ಆದ್ರೆ, ನಿಗಮ, ಪ್ರಾಧಿಕಾರಗಳಿಂದ ಏನು ಪ್ರಯೋಜನವಿಲ್ಲ. ನಮ್ಮ ಕಾಲದಲ್ಲೂ ಬ್ರಾಹ್ಮಣ, ಆರ್ಯ ವೈಶ್ಯ ನಿಗಮ ಮಾಡಿದ್ದೇವೆ. ಆದ್ರೆ ನಿಗಮಗಳಿಂದ ಅನುಕೂಲ ಇಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ ಟೀಕೆಗೆ ತಿರುಗೇಟು ಮಂಡ್ಯ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆ ಸಿದ್ದರಾಮಯ್ಯ ಟೀಕೆ ಮಾಡಿರುವುದಕ್ಕೆ ಮಾಜಿ ಸಿಎಂ HDK ಪ್ರತಿಕ್ರಿಯಿಸಿದ್ದು, ಚಾಮರಾಜನಗರ, ಮೈಸೂರು, ನವಲಗುಂದದಲ್ಲಿ ಕಾಂಗ್ರೆಸ್ ಕೂಡ ಮೈತ್ರಿ ಮಾಡಿಕೊಂಡಿದೆ ಎಂದು ತಿರುಗೇಟು ನೀಡಿದ್ದಾರೆ.

ಹಾಗಾಗಿ, ಸಿದ್ದರಾಮಯ್ಯನವರದ್ದೂ ಸಮಯ ಸಾಧಕ ರಾಜಕಾರಣ ಅಲ್ವಾ? ಕಾಂಗ್ರೆಸ್ ಸಹ ಅಧಿಕಾರ ಹಿಡ್ಕೊಂಡು ಹೋಗೋ ಪಕ್ಷ, ಎಲ್ಲರದ್ದೂ ಅನುಕೂಲ ರಾಜಕಾರಣವೇ. ನಾವೇ ಪರಿಶುದ್ಧರು, ಸ್ವಚ್ಛವಾಗಿರೋರು ಅನ್ನೋದೆಲ್ಲ ಸುಳ್ಳು. ಅಲ್ಲದೆ ಕಾಂಗ್ರೆಸ್​ನವರ ತಟ್ಟೆಯಲ್ಲೇ ಹೆಗ್ಗಣ ಇದೆ. ಹೀಗಾಗಿ ಇನ್ನೊಂದು ಪಕ್ಷದ ಬಗ್ಗೆ ಸಿದ್ದರಾಮಯ್ಯ ಚರ್ಚೆ ಮಾಡೋದು ಬೇಡ ಎಂದು ತಿರುಗೇಟು ಕೊಟ್ಟರು.

‘ಉಪಚುನಾವಣೆಯಲ್ಲಿ ಬಿಜೆಪಿ ಎದುರು ಗೆಲ್ಲೋದು ಕಷ್ಟ’ ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಕ್ಷೇತ್ರಗಳ ಉಪಚುನಾವಣೆ ವಿಚಾರದ ಬಗ್ಗೆ ಮಾತಾನಾಡಿರುವ ಹೆಚ್​ಡಿಕೆ, ರಾಜ್ಯದಲ್ಲಿ ಇನ್ನೂ ಜೆಡಿಎಸ್ ಬದುಕಿದೆ. ನಾವು ಮುಂದೆ ಬರುವ ಚುನಾವಣೆಗೆ ಮಸ್ಕಿ, ಬಸವ ಕಲ್ಯಾಣದಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಹಾಕೋದು ವ್ಯರ್ಥ.. ಆದರೂ ಆ ಎರಡೂ ಕ್ಷೇತ್ರಗಳ ಮುಖಂಡರು, ಕಾರ್ಯಕರ್ತರ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಹೇಳಿದರು.

ಅಲ್ಲದೆ, ಉಪಚುನಾವಣೆಗಳಲ್ಲಿ ವ್ಯರ್ಥ ಕಸರತ್ತು ಸರಿಯಲ್ಲ. ನಮ್ಮ ಪಕ್ಷದ ಸಂಘಟನೆ ಚೆನ್ನಾಗಿದೆ. ಉಪಚುನಾವಣೆಗಳಲ್ಲಿ ಈಗ ಬಿಜೆಪಿಯ ವಿಧಾನವೇ ಬೇರೆ ಇದೆ. ಇಂಥ ಸಂದರ್ಭದಲ್ಲಿ ನಾವು ಉಪಚುನಾವಣೆ ಗೆಲ್ಲೋದು ಕಷ್ಟವೇ ಎಂದು ಹೆಚ್​ಡಿಕೆ ತಮ್ಮ ಅಭಿಪ್ರಾಯ ಹೊರ ಹಾಕಿದ್ದಾರೆ.

Published On - 2:46 pm, Sun, 22 November 20

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?