Sign In

By signing in or creating an account, you agree with Associated Broadcasting Company's Terms & Conditions and Privacy Policy.

H Vishwanath: ನಮ್ಮದು 3 ಪಕ್ಷಗಳ ಸರ್ಕಾರ; ಸಚಿವ ಯೋಗೇಶ್ವರ್ ಮಾತಿಗೆ ಧ್ವನಿಗೂಡಿಸಿದ ಹೆಚ್ ವಿಶ್ವನಾಥ್

ಯಡಿಯೂರಪ್ಪರನ್ನ ಜೈಲಿಗೆ ಕಳಿಸಿದ್ದೇ ಪುತ್ರ ವಿಜಯೇಂದ್ರ. ಅವರ ನಕಲಿ ಸಹಿ ಮಾಡಿ ಬಿಎಸ್​​ವೈರನ್ನ ಜೈಲಿಗೆ ಕಳಿಸಿದ್ದ. ಇದೀಗ ಇಡೀ ಕುಟುಂಬವನ್ನೇ ಜೈಲಿಗೆ ಕಳುಹಿಸುತ್ತಾನೆ ಎಂದು ವಿಜಯೇಂದ್ರ ವಿರುದ್ಧ ಹೆಚ್.ವಿಶ್ವನಾಥ್ ಗಂಭೀರ​ ಆರೋಪ ಮಾಡಿದ್ದಾರೆ.

H Vishwanath: ನಮ್ಮದು 3 ಪಕ್ಷಗಳ ಸರ್ಕಾರ; ಸಚಿವ ಯೋಗೇಶ್ವರ್ ಮಾತಿಗೆ ಧ್ವನಿಗೂಡಿಸಿದ ಹೆಚ್ ವಿಶ್ವನಾಥ್
ಹೆಚ್ ವಿಶ್ವನಾಥ್
Follow us
TV9 Web
| Updated By: ganapathi bhat

Updated on: Jul 05, 2021 | 8:13 PM

ಮೈಸೂರು: ನಮ್ಮದು 3 ಪಕ್ಷಗಳ ಸರ್ಕಾರ. ಸರ್ಕಾರದ ಯಾವುದೇ ಭ್ರಷ್ಟಾಚಾರದ ಬಗ್ಗೆ ವಿರೋಧ ಪಕ್ಷದವರು ಮಾತನಾಡುತ್ತಿಲ್ಲ. ಕುಮಾರಸ್ವಾಮಿ, ಸಿದ್ದರಾಮಯ್ಯ ಧ್ವನಿ ಎತ್ತುತ್ತಿಲ್ಲ. ಜಿಂದಾಲ್ ಭೂಮಿ ಪರಭಾರೆ ವಿಚಾರ ನಾನು ವಿರೋಧಿಸಿದೆ. ಬೇರೆ ಯಾರು ಇದನ್ನು ಕೇಳಲಿಲ್ಲ, ಇದರಿಂದ ಸ್ಪಷ್ಟವಾಗುತ್ತೆ. ರಾಜ್ಯದಲ್ಲಿರುವುದು 3 ಪಾರ್ಟಿ ಸರ್ಕಾರವೆಂಬುದು ಗೊತ್ತಾಗುತ್ತೆ ಎಂದು ಸಚಿವ ಯೋಗೇಶ್ವರ್ ಮಾತಿಗೆ ಮೈಸೂರಿನಲ್ಲಿ ಬಿಜೆಪಿ ಎಂಎಲ್​ಸಿ ಹೆಚ್. ವಿಶ್ವನಾಥ್ ಧ್ವನಿಗೂಡಿಸಿದ್ದಾರೆ.

‘ಸಿಎಂ ವಿರುದ್ಧ ಮಾತಾಡುವವರು ಅವರ ಧೂಳಿಗೂ ಸಮರಲ್ಲ’ ಎಂಬ ಸಚಿವ ಸೋಮಶೇಖರ್ ಹೇಳಿಕೆಗೆ ಹೆಚ್.ವಿಶ್ವನಾಥ್ ಟಾಂಗ್ ಕೊಟ್ಟಿದ್ದಾರೆ. ಸೋಮಶೇಖರ್ ನೀನು ಬೇಕಾದರೆ ಬಿಎಸ್​ವೈ ಪಾದ ನೆಕ್ಕು. ಸಿಎಂ ಪುತ್ರನ ಭ್ರಷ್ಟಾಚಾರ ಅವ್ಯವಹಾರ ನಿಮಗೆ ಕಾಣುತ್ತಿಲ್ವಾ? ರಾಜ್ಯದಲ್ಲಿ ಬಿಜೆಪಿಗೆ 104 ಸ್ಥಾನ ಬಂದಿದ್ದು ಬಿಎಸ್​​ವೈರಿಂದಲ್ಲ. 25 ಸಂಸದರು ಗೆದ್ದಿದ್ದು ಸಿಎಂ ಬಿ.ಎಸ್. ಯಡಿಯೂರಪ್ಪರಿಂದಲ್ಲ. ಇದೆಲ್ಲಾ ಆಗಿದ್ದು ಪ್ರಧಾನಿ ನರೇಂದ್ರ ಮೋದಿಯವರಿಂದ ಎಂದು ಹೆಚ್. ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಮೋದಿ ಹೆಸರನ್ನೇ ಯಡಿಯೂರಪ್ಪ ಮರೆಸಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾಗಲೇ ಬೇಕು, ಆ ಪ್ರಕ್ರಿಯೆ ನಡೆದಿದೆ. ಫಲ ತಡವಾಗಬಹುದು ಆದ್ರೆ ಖಂಡಿತ ಬದಲಾವಣೆ ಆಗಲಿದೆ ಎಂದು ಮೈಸೂರಿನಲ್ಲಿ ಬಿಜೆಪಿ ಎಂಎಲ್​ಸಿ ಹೆಚ್.ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಯಡಿಯೂರಪ್ಪರನ್ನ ಜೈಲಿಗೆ ಕಳಿಸಿದ್ದೇ ಪುತ್ರ ವಿಜಯೇಂದ್ರ. ಅವರ ನಕಲಿ ಸಹಿ ಮಾಡಿ ಬಿಎಸ್​​ವೈರನ್ನ ಜೈಲಿಗೆ ಕಳಿಸಿದ್ದ. ಇದೀಗ ಇಡೀ ಕುಟುಂಬವನ್ನೇ ಜೈಲಿಗೆ ಕಳುಹಿಸುತ್ತಾನೆ ಎಂದು ವಿಜಯೇಂದ್ರ ವಿರುದ್ಧ ಹೆಚ್.ವಿಶ್ವನಾಥ್ ಗಂಭೀರ​ ಆರೋಪ ಮಾಡಿದ್ದಾರೆ.

ಸಿಎಂ ಪುತ್ರ ವಿಜಯೇಂದ್ರನ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಹಿಂದುಳಿದ ನಾಯಕರನ್ನು ತುಳಿಯುವ ಕೆಲಸ ನಡೆಯುತ್ತಿದೆ. ನನ್ನನ್ನು ರಾಜಕೀಯವಾಗಿ ಮುಗಿಸಿದ್ದೇ ಬಿ.ವೈ.ವಿಜಯೇಂದ್ರ. ರಮೇಶ್ ಜಾರಕಿಹೋಳಿ, ಶ್ರೀರಾಮುಲು ಮುಗಿಸಲು ಯತ್ನ ನಡೆದಿದೆ. ಶ್ರೀರಾಮುಲು ಮುಗಿಸಲು ಹೊರಟಿರುವುದು ವಿಜಯೇಂದ್ರನೇ. ರಮೇಶ್​ ಸಿಡಿ ಪ್ರಕರಣದಲ್ಲಿ ಬಿ.ವೈ.ವಿಜಯೇಂದ್ರ ಪಾತ್ರವಿದೆ. ಎಷ್ಟು ದಿನ ನಿಮ್ಮದು ನಡೆಯುತ್ತೆ ಎಂದು ನಾವು ನೋಡ್ತೇವೆ. ರಾಜಕಾರಣದಲ್ಲಿ ಇದು ಸರಿಯಲ್ಲ ಎಂದು ಹೆಚ್.ವಿಶ್ವನಾಥ್​ ಹೇಳಿದ್ದಾರೆ.

ಕೆಆರ್​ಎಸ್ ಡ್ಯಾಂ​ ಬಾಗಿಲಿಗೆ ಸುಮಲತಾರನ್ನು ಮಲಗಿಸಬೇಕು ಎಂಬ ಹೇಳಿಕೆಗೆ ಟೀಕಿಸಿದ್ದಾರೆ. ಮಿಸ್ಟರ್ ಕುಮಾರಸ್ವಾಮಿ ಮೈಂಡ್ ಯುವರ್ ಲಾಂಗ್ವೇಜ್ ಎಂದು ಮಾಜಿ ಸಿಎಂ ಹೆಚ್​ಡಿಕೆ ಹೇಳಿಕೆಗೆ ಹೆಚ್.ವಿಶ್ವನಾಥ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಮ್ಮ ಪುತ್ರನ ಸೋಲಿನ ಸೇಡನ್ನು ಈ ರೀತಿ ತೀರಿಸಿಕೊಳ್ತಿದ್ದೀರಾ? ಸುಮಲತಾ ರೆಬೆಲ್ ಌಕ್ಟರ್, ರೆಬೆಲ್ ಸಂಸದೆ ಎಂದು ವಿಶ್ವನಾಥ್ ಹೇಳಿದ್ದಾರೆ.

ಸುಮಲತಾ ಮಂಡ್ಯದ ಸೊಸೆ ರೆಬೆಲ್​ಸ್ಟಾರ್​ ಅಂಬರೀಶ್​ ಪತ್ನಿ ಆಗಿದ್ದಾರೆ. ಅಂತಹ ಹೆಣ್ಣುಮಗಳಿಗೆ ಅವಮಾನ ಮಾಡುತ್ತೀರಾ ಎಂದು ಕಿಡಿಕಾರಿದ್ದಾರೆ. 2 ಬಾರಿ ಸಿಎಂ ಆದವರ ಬಾಯಲ್ಲಿ ಈ ಮಾತು ಬರಬಾರದು. ಕೆಆರ್​ಎಸ್ ಡ್ಯಾಂ ಸಮಸ್ಯೆಯಿದ್ದರೆ ಪರಿಶೀಲಿಸೋಣ ಎಂದು ಹೇಳಿ. ಅದನ್ನು ಬಿಟ್ಟು ಹೆಣ್ಣುಮಗಳನ್ನು ಮಲಗಿಸಿ ಅಂದರೆ ಏನರ್ಥ. ಕುಮಾರಸ್ವಾಮಿಯವರೇ ಏನು ನಿಮ್ಮ ಭಾಷೆಯ ಅರ್ಥ ಎಂದು ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಹೆಚ್.ವಿಶ್ವನಾಥ್​ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಎಸ್ಎಸ್ಎಲ್​ಸಿ ಪರೀಕ್ಷೆ ನಡೆಸಲು ಬಿಜೆಪಿ ಎಂಎಲ್​ಸಿ ಹೆಚ್.ವಿಶ್ವನಾಥ್ ವಿರೋಧ

H Vishwanath Press Meet ಮಹಾನುಭಾವ ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ -ಹೆಚ್. ವಿಶ್ವನಾಥ್

ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ