AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾ.ರಾ.ಮಹೇಶ್ ವಿರುದ್ಧ ಭೂ ಒತ್ತುವರಿ ಆರೋಪ; ಕಳಂಕಿತರನ್ನು ರಕ್ಷಿಸುವ ಕೆಲಸ ನಡೆಯುತ್ತಿದೆ: ಹೆಚ್.ವಿಶ್ವನಾಥ್ ಗಂಭೀರ ಆರೋಪ

ಹಿಂದಿನ ಡಿಸಿ ಆಗಿದ್ದ ರೋಹಿಣಿ ಮಾಡಿದ ಆದೇಶ ಎಲ್ಲಾ ಬಿಟ್ಟು ನಿಮಗೆ ಅನುಕೂಲಕವಾದ ಭಾಗದ ತನಿಖೆಗೆ ಮಾತ್ರ ಆಗ್ರಹ ಮಾಡಲಾಗಿದೆ. ಡಿಸಿ ಮಾಡಿದ ಆದೇಶ ಬಿಟ್ಟು ಪಾಸಿಂಗ್ ರೀಮಾರ್ಕ್ ಅಷ್ಟನ್ನೆ ಹಿಡಿದು ಕೊಂಡು ಯಾಕೆ ಎಳೆದಾಡಲಾಗುತ್ತಿದೆ. ಪ್ರಾದೇಶಿಕ ಆಯುಕ್ತರು ಸೋಮವಾರ ಕೊಡುವ ವರದಿಗೆ ಯಾವ ಬೆಲೆಯೂ ಇಲ್ಲ...

ಸಾ.ರಾ.ಮಹೇಶ್ ವಿರುದ್ಧ ಭೂ ಒತ್ತುವರಿ ಆರೋಪ; ಕಳಂಕಿತರನ್ನು ರಕ್ಷಿಸುವ ಕೆಲಸ ನಡೆಯುತ್ತಿದೆ: ಹೆಚ್.ವಿಶ್ವನಾಥ್ ಗಂಭೀರ ಆರೋಪ
ಹೆಚ್ ವಿಶ್ವನಾಥ್
TV9 Web
| Edited By: ಸಾಧು ಶ್ರೀನಾಥ್​|

Updated on: Jun 11, 2021 | 2:34 PM

Share

ಮೈಸೂರು: ಶಾಸಕ ಸಾ.ರಾ.ಮಹೇಶ್ ವಿರುದ್ಧ ಭೂ ಒತ್ತುವರಿ ಆರೋಪಕ್ಕೆ ಸಂಬಂಧಿಸಿ ಕಳಂಕಿತರನ್ನು ರಕ್ಷಿಸುವ ಕೆಲಸ ನಡೆಯುತ್ತಿದೆ ಎಂದು ಮೈಸೂರಲ್ಲಿ ಬಿಜೆಪಿ ಎಂಎಲ್ಸಿ ಹೆಚ್.ವಿಶ್ವನಾಥ್ ಗಂಭೀರವಾಗಿ ಆರೋಪಿಸಿದ್ದಾರೆ.

ನಿನ್ನೆ ಪ್ರಾದೇಶಿಕ ಆಯುಕ್ತರ ಕಚೇರಿ ಆವರಣದಲ್ಲಿ ಹೈಡ್ರಾಮಾ ನಡೆಯಿತು. ಶಾಸಕರು ಪ್ರತಿಭಟನೆ ಮಾಡಿದಂತೆ, ಆರ್.ಸಿ. ಮನವಿ ಸ್ವೀಕರಿಸಿದಂತೆ, ತನಿಖೆ ಮಾಡುವುದಾಗಿ ಆರ್‌.ಸಿ. ಹೇಳಿದಂತೆ ಹೈಡ್ರಾಮಾ ಮಾಡಲಾಗಿದೆ. ಸಾಮಾನ್ಯವಾಗಿ ಪ್ರತಿಭಟನೆ ಮಾಡಿ ಮನವಿ ಸಲ್ಲಿಸಲಾಗುತ್ತೆ. ಮನವಿ ಪರಿಶೀಲನೆ ಮಾಡುವುದಾಗಿ ಅಧಿಕಾರಿ ಹೇಳುತ್ತಾರೆ. ಆದರೆ ಪ್ರಾದೇಶಿಕ ಆಯುಕ್ತರು ತನಿಖೆಗಾಗಿ ಸಮಿತಿ ರಚನೆ ಮಾಡಿದ್ದಾರೆ. ವರದಿ ಕೊಡುವ ಟೈಮ್ ಕೂಡ ಫಿಕ್ಸ್ ಮಾಡಿಬಿಟ್ಟಿದ್ದಾರೆ. ಪ್ರಾದೇಶಿಕ ಆಯುಕ್ತರ ಸ್ಪೀಡ್ ನೋಡಿ ನಾವೆಲ್ಲ ಗಾಬರಿಯಾಗಿದ್ದೇವೆ. ಪ್ರಾದೇಶಿಕ ಆಯುಕ್ತರು ಮತ್ತು ಕಳಂಕಿತರ ನಡುವೆ ಒಪ್ಪಂದ ಆಗಿದೆ. ಈಗಾಗಲೇ ವರದಿ ಸಿದ್ಧವಾಗಿದೆ. ಸೋಮವಾರ ಅದನ್ನು ಬಿಡುಗಡೆ ಮಾಡುತ್ತಾರೆ. ಆರ್.ಸಿ. ಏನು ವರದಿ ಕೊಡುತ್ತಾರೆ ಎಂಬುದೂ ಗೊತ್ತಿದೆ ಎಂದು ಹೆಚ್‌.ವಿಶ್ವನಾಥ್ ಆರೋಪಿಸಿದ್ದಾರೆ.

ಹಿಂದಿನ ಡಿಸಿ ಆಗಿದ್ದ ರೋಹಿಣಿ ಮಾಡಿದ ಆದೇಶ ಎಲ್ಲಾ ಬಿಟ್ಟು ನಿಮಗೆ ಅನುಕೂಲಕವಾದ ಭಾಗದ ತನಿಖೆಗೆ ಮಾತ್ರ ಆಗ್ರಹ ಮಾಡಲಾಗಿದೆ. ಡಿಸಿ ಮಾಡಿದ ಆದೇಶ ಬಿಟ್ಟು ಪಾಸಿಂಗ್ ರೀಮಾರ್ಕ್ ಅಷ್ಟನ್ನೆ ಹಿಡಿದು ಕೊಂಡು ಯಾಕೆ ಎಳೆದಾಡಲಾಗುತ್ತಿದೆ. ಪ್ರಾದೇಶಿಕ ಆಯುಕ್ತರು ಸೋಮವಾರ ಕೊಡುವ ವರದಿಗೆ ಯಾವ ಬೆಲೆಯೂ ಇಲ್ಲ. ಕಣ್ಣಿಗೆ ಮಣ್ಣೆರೆಚಿ, ರೋಹಿಣಿ ಸಿಂಧೂರಿ ಮೇಲೆ ಕೆಟ್ಟ ಅಭಿಪ್ರಾಯ ಮೂಡಿಸುವ ಯತ್ನ ಈ ವರದಿ ಮೂಲಕ ನಡೆದಿದೆ. ಪ್ರಾದೇಶಿಕ ಆಯುಕ್ತರಿಗೆ ಒಳ್ಳೆಯ ಹೆಸರಿಲ್ಲ. ಪ್ರಾದೇಶಿಕ ಆಯುಕ್ತರು ಕಳಂಕಿತರ ಬಗ್ಗೆ ಸೋಮವಾರ ನೀಡುವ ವರದಿ ಜನ ನಂಬಬಾರದು. ಒಂಟಿ ಧ್ವನಿಗೆ ಗಟ್ಟಿಧ್ವನಿ. ಒಂಟಿಯಾದರೂ ಪರವಾಗಿಲ್ಲ ನಾನು ಹೋರಾಡುತ್ತೇನೆ ಎಂದು ಹೆಚ್ ವಿಶ್ವನಾಥ್ ಹೇಳಿದ್ರು.

ಇದನ್ನೂ ಓದಿ: Sa Ra Mahesh on Rohini : ಸಿಂಧೂರಿಗೆ ಸಾರಾ ಮಹೇಶ್ ಸವಾಲ್..! ರಾಜಕೀಯಕ್ಕೆ ಗುಡ್​ಬೈ ಹೇಳ್ತೀನಿ!

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ