Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾ.ರಾ.ಮಹೇಶ್ ವಿರುದ್ಧ ಭೂ ಒತ್ತುವರಿ ಆರೋಪ; ಕಳಂಕಿತರನ್ನು ರಕ್ಷಿಸುವ ಕೆಲಸ ನಡೆಯುತ್ತಿದೆ: ಹೆಚ್.ವಿಶ್ವನಾಥ್ ಗಂಭೀರ ಆರೋಪ

ಹಿಂದಿನ ಡಿಸಿ ಆಗಿದ್ದ ರೋಹಿಣಿ ಮಾಡಿದ ಆದೇಶ ಎಲ್ಲಾ ಬಿಟ್ಟು ನಿಮಗೆ ಅನುಕೂಲಕವಾದ ಭಾಗದ ತನಿಖೆಗೆ ಮಾತ್ರ ಆಗ್ರಹ ಮಾಡಲಾಗಿದೆ. ಡಿಸಿ ಮಾಡಿದ ಆದೇಶ ಬಿಟ್ಟು ಪಾಸಿಂಗ್ ರೀಮಾರ್ಕ್ ಅಷ್ಟನ್ನೆ ಹಿಡಿದು ಕೊಂಡು ಯಾಕೆ ಎಳೆದಾಡಲಾಗುತ್ತಿದೆ. ಪ್ರಾದೇಶಿಕ ಆಯುಕ್ತರು ಸೋಮವಾರ ಕೊಡುವ ವರದಿಗೆ ಯಾವ ಬೆಲೆಯೂ ಇಲ್ಲ...

ಸಾ.ರಾ.ಮಹೇಶ್ ವಿರುದ್ಧ ಭೂ ಒತ್ತುವರಿ ಆರೋಪ; ಕಳಂಕಿತರನ್ನು ರಕ್ಷಿಸುವ ಕೆಲಸ ನಡೆಯುತ್ತಿದೆ: ಹೆಚ್.ವಿಶ್ವನಾಥ್ ಗಂಭೀರ ಆರೋಪ
ಹೆಚ್ ವಿಶ್ವನಾಥ್
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jun 11, 2021 | 2:34 PM

ಮೈಸೂರು: ಶಾಸಕ ಸಾ.ರಾ.ಮಹೇಶ್ ವಿರುದ್ಧ ಭೂ ಒತ್ತುವರಿ ಆರೋಪಕ್ಕೆ ಸಂಬಂಧಿಸಿ ಕಳಂಕಿತರನ್ನು ರಕ್ಷಿಸುವ ಕೆಲಸ ನಡೆಯುತ್ತಿದೆ ಎಂದು ಮೈಸೂರಲ್ಲಿ ಬಿಜೆಪಿ ಎಂಎಲ್ಸಿ ಹೆಚ್.ವಿಶ್ವನಾಥ್ ಗಂಭೀರವಾಗಿ ಆರೋಪಿಸಿದ್ದಾರೆ.

ನಿನ್ನೆ ಪ್ರಾದೇಶಿಕ ಆಯುಕ್ತರ ಕಚೇರಿ ಆವರಣದಲ್ಲಿ ಹೈಡ್ರಾಮಾ ನಡೆಯಿತು. ಶಾಸಕರು ಪ್ರತಿಭಟನೆ ಮಾಡಿದಂತೆ, ಆರ್.ಸಿ. ಮನವಿ ಸ್ವೀಕರಿಸಿದಂತೆ, ತನಿಖೆ ಮಾಡುವುದಾಗಿ ಆರ್‌.ಸಿ. ಹೇಳಿದಂತೆ ಹೈಡ್ರಾಮಾ ಮಾಡಲಾಗಿದೆ. ಸಾಮಾನ್ಯವಾಗಿ ಪ್ರತಿಭಟನೆ ಮಾಡಿ ಮನವಿ ಸಲ್ಲಿಸಲಾಗುತ್ತೆ. ಮನವಿ ಪರಿಶೀಲನೆ ಮಾಡುವುದಾಗಿ ಅಧಿಕಾರಿ ಹೇಳುತ್ತಾರೆ. ಆದರೆ ಪ್ರಾದೇಶಿಕ ಆಯುಕ್ತರು ತನಿಖೆಗಾಗಿ ಸಮಿತಿ ರಚನೆ ಮಾಡಿದ್ದಾರೆ. ವರದಿ ಕೊಡುವ ಟೈಮ್ ಕೂಡ ಫಿಕ್ಸ್ ಮಾಡಿಬಿಟ್ಟಿದ್ದಾರೆ. ಪ್ರಾದೇಶಿಕ ಆಯುಕ್ತರ ಸ್ಪೀಡ್ ನೋಡಿ ನಾವೆಲ್ಲ ಗಾಬರಿಯಾಗಿದ್ದೇವೆ. ಪ್ರಾದೇಶಿಕ ಆಯುಕ್ತರು ಮತ್ತು ಕಳಂಕಿತರ ನಡುವೆ ಒಪ್ಪಂದ ಆಗಿದೆ. ಈಗಾಗಲೇ ವರದಿ ಸಿದ್ಧವಾಗಿದೆ. ಸೋಮವಾರ ಅದನ್ನು ಬಿಡುಗಡೆ ಮಾಡುತ್ತಾರೆ. ಆರ್.ಸಿ. ಏನು ವರದಿ ಕೊಡುತ್ತಾರೆ ಎಂಬುದೂ ಗೊತ್ತಿದೆ ಎಂದು ಹೆಚ್‌.ವಿಶ್ವನಾಥ್ ಆರೋಪಿಸಿದ್ದಾರೆ.

ಹಿಂದಿನ ಡಿಸಿ ಆಗಿದ್ದ ರೋಹಿಣಿ ಮಾಡಿದ ಆದೇಶ ಎಲ್ಲಾ ಬಿಟ್ಟು ನಿಮಗೆ ಅನುಕೂಲಕವಾದ ಭಾಗದ ತನಿಖೆಗೆ ಮಾತ್ರ ಆಗ್ರಹ ಮಾಡಲಾಗಿದೆ. ಡಿಸಿ ಮಾಡಿದ ಆದೇಶ ಬಿಟ್ಟು ಪಾಸಿಂಗ್ ರೀಮಾರ್ಕ್ ಅಷ್ಟನ್ನೆ ಹಿಡಿದು ಕೊಂಡು ಯಾಕೆ ಎಳೆದಾಡಲಾಗುತ್ತಿದೆ. ಪ್ರಾದೇಶಿಕ ಆಯುಕ್ತರು ಸೋಮವಾರ ಕೊಡುವ ವರದಿಗೆ ಯಾವ ಬೆಲೆಯೂ ಇಲ್ಲ. ಕಣ್ಣಿಗೆ ಮಣ್ಣೆರೆಚಿ, ರೋಹಿಣಿ ಸಿಂಧೂರಿ ಮೇಲೆ ಕೆಟ್ಟ ಅಭಿಪ್ರಾಯ ಮೂಡಿಸುವ ಯತ್ನ ಈ ವರದಿ ಮೂಲಕ ನಡೆದಿದೆ. ಪ್ರಾದೇಶಿಕ ಆಯುಕ್ತರಿಗೆ ಒಳ್ಳೆಯ ಹೆಸರಿಲ್ಲ. ಪ್ರಾದೇಶಿಕ ಆಯುಕ್ತರು ಕಳಂಕಿತರ ಬಗ್ಗೆ ಸೋಮವಾರ ನೀಡುವ ವರದಿ ಜನ ನಂಬಬಾರದು. ಒಂಟಿ ಧ್ವನಿಗೆ ಗಟ್ಟಿಧ್ವನಿ. ಒಂಟಿಯಾದರೂ ಪರವಾಗಿಲ್ಲ ನಾನು ಹೋರಾಡುತ್ತೇನೆ ಎಂದು ಹೆಚ್ ವಿಶ್ವನಾಥ್ ಹೇಳಿದ್ರು.

ಇದನ್ನೂ ಓದಿ: Sa Ra Mahesh on Rohini : ಸಿಂಧೂರಿಗೆ ಸಾರಾ ಮಹೇಶ್ ಸವಾಲ್..! ರಾಜಕೀಯಕ್ಕೆ ಗುಡ್​ಬೈ ಹೇಳ್ತೀನಿ!

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ