AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವನಾಥ್‌ರ ‘Bombay Days’ ಬಾಂಬಿಗೆ BJP ಯಲ್ಲಿ ಶಾಕ್, JDS ‌ಗೆ ಆತಂಕ ಯಾಕೆ?

ಮೈಸೂರು: ರಾಜಕಾರಣಿ ಹೆಚ್ ವಿಶ್ವನಾಥ್‌ರಿಗೂ, ವಿವಾದಗಳಿಗೂ ಬಿಡದ ನಂಟು. ಸದಾ ಒಂದಿಲ್ಲೊಂದು ವಿವಾದಗಳಲ್ಲಿ ಇರುವ ಈ ನಾಯಕ ಈಗ ಮತ್ತೊಂದು ವಿವಾದ ಮೈಮೈಲೆ ಎಳೆದುಕೊಳ್ಳೋಕೆ ರೆಡಿಯಾಗಿದ್ದಾರೆ. ಹೌದು ಮೈಸೂರಿನ ಬಿಜಿಪಿ ನಾಯಕ ಹೆಚ್ ವಿಶ್ವನಾಥ್ ಇತ್ತೀಚೆಗಷ್ಟೆ ಬಿಜಿಪಿಯಿಂದ ವಿಧಾನಪರಿಷತ್ತಿಗೆ ನಾಮಕರಣಗೊಂಡಿದ್ದಾರೆ. ಈಗ ಅವರ ಕಣ್ಣು ಮಂತ್ರಿ ಸ್ಥಾನದ ಮೇಲೆ ನೆಟ್ಟಿದೆ. ಇದಕ್ಕಾಗಿ ಅವರು ಪಕ್ಷಾಂತರ ಮಾಡಿಯೂ ಆಗಿದೆ. ಅದಕ್ಕಾಗಿ ವಿಶ್ವನಾಥ್ ಪಟ್ಟ ಪಾಡು ಮಾತ್ರ ಯಾರಿಗೂ ಹೇಳತೀರದು. ಬೆಂಗಳೂರಿನಿಂದ ಮುಂಬೈ, ಮುಂಬೈನಿಂದ ದೆಹಲಿ, ದೆಹಲಿಯಿಂದ ಮತ್ತೆ ಮುಂಬೈ […]

ವಿಶ್ವನಾಥ್‌ರ ‘Bombay Days’ ಬಾಂಬಿಗೆ BJP ಯಲ್ಲಿ ಶಾಕ್, JDS ‌ಗೆ ಆತಂಕ ಯಾಕೆ?
Guru
Guru| Edited By: |

Updated on:Jul 30, 2020 | 3:11 PM

Share

ಮೈಸೂರು: ರಾಜಕಾರಣಿ ಹೆಚ್ ವಿಶ್ವನಾಥ್‌ರಿಗೂ, ವಿವಾದಗಳಿಗೂ ಬಿಡದ ನಂಟು. ಸದಾ ಒಂದಿಲ್ಲೊಂದು ವಿವಾದಗಳಲ್ಲಿ ಇರುವ ಈ ನಾಯಕ ಈಗ ಮತ್ತೊಂದು ವಿವಾದ ಮೈಮೈಲೆ ಎಳೆದುಕೊಳ್ಳೋಕೆ ರೆಡಿಯಾಗಿದ್ದಾರೆ.

ಹೌದು ಮೈಸೂರಿನ ಬಿಜಿಪಿ ನಾಯಕ ಹೆಚ್ ವಿಶ್ವನಾಥ್ ಇತ್ತೀಚೆಗಷ್ಟೆ ಬಿಜಿಪಿಯಿಂದ ವಿಧಾನಪರಿಷತ್ತಿಗೆ ನಾಮಕರಣಗೊಂಡಿದ್ದಾರೆ. ಈಗ ಅವರ ಕಣ್ಣು ಮಂತ್ರಿ ಸ್ಥಾನದ ಮೇಲೆ ನೆಟ್ಟಿದೆ. ಇದಕ್ಕಾಗಿ ಅವರು ಪಕ್ಷಾಂತರ ಮಾಡಿಯೂ ಆಗಿದೆ. ಅದಕ್ಕಾಗಿ ವಿಶ್ವನಾಥ್ ಪಟ್ಟ ಪಾಡು ಮಾತ್ರ ಯಾರಿಗೂ ಹೇಳತೀರದು. ಬೆಂಗಳೂರಿನಿಂದ ಮುಂಬೈ, ಮುಂಬೈನಿಂದ ದೆಹಲಿ, ದೆಹಲಿಯಿಂದ ಮತ್ತೆ ಮುಂಬೈ ನಂತರ ಬೆಂಗಳೂರು ಹೀಗೆ ಅಲೆಯಬೇಕಾಯಿತು.

ಈ ಸಮಯದಲ್ಲಿ ಅವರು ಸಾಕಷ್ಟು ಮುಜಗರವನ್ನ ಅನುಭವಿಸಬೇಕಾಯಿತು. ಈಗ ಅದನ್ನೇ ಪುಸ್ತಕ ರೂಪದಲ್ಲಿ ಜಗತ್ತಿನ ಮುಂದೆ ತೆರೆದಿಡಲು ಮುಂದಾಗಿದ್ದಾರೆ. ಈ ಪುಸ್ತಕಕ್ಕೆ ಬಾಂಬೇ ಡೇಸ್ ಎಂದು ಹೆಸರಿಡಲು ಮುಂದಾಗಿದ್ದಾರೆಂದು ತಿಳಿದು ಬಂದಿದೆ. ಇದರಲ್ಲಿ ಜೇಡಿಎಸ್‌ನಿಂದ ಬಿಜೆಪಿಗೆ ಹೋದ ವಿವರಗಳನ್ನು ಬರೆಯಲಿದ್ದಾರಂತೆ.

ಈ ಸಂಬಂಧ ಮೈಸೂರಿನ ಸಂವಾದದಲ್ಲಿ ಮಾತನಾಡಿದ ವಿಶ್ವನಾಥ್, ಬಾಂಬೆ ಡೇಸ್ ಪುಸ್ತಕ ಬರೆಯುವುದು ಮತ್ತು ಅದನ್ನು ಬಿಡುಗಡೆ ಮಾಡುವುದು ಎರಡು ಖಚಿತ ಎಂದಿದ್ದಾರೆ. ಅಷ್ಟೆ ಅಲ್ಲ ಸರ್ಕಾರದಿಂದ ನನ್ನ ಕೈ ಮತ್ತು ಬರಹ ಕಟ್ಟಿ ಹಾಕಲು ಸಾಧ್ಯವಿಲ್ಲ ಎಂದು ಗುಟುರು ಹಾಕಿದ್ದಾರೆ.

ಹಾಗೇನೆ ಸರ್ಕಾರಕ್ಕೆ ಮುಜುಗರ ಥರವಂತಹದು ಅದರಲ್ಲಿ ಏನೂ ಇರಲ್ಲ, ಆದ್ರೆ ಯಾವ ಕಾರಣಕ್ಕೆ ನಾವು ಬಂಡೆದ್ದು ಹೋದೆವು, ಕೆಲವರು ಕಾನೂನನ್ನು ಹೇಗೆ ದುರುಪಯೋಗ ಪಡಿಸಿಕೊಂಡರು ಅನ್ನೋ ಡಿಟೇಲ್ಸ್ ಮಾಹಿತಿ ಪುಸ್ತಕದಲ್ಲಿ ಇರುತ್ತೆ ಎಂದು ವಿಶ್ವನಾಥ್ ತಿಳಿಸಿದ್ದಾರೆ.

Published On - 6:23 pm, Tue, 28 July 20

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ