AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

H1N1ನಿಂದ ಬೆಚ್ಚಿಬಿತ್ತಾ ಬೆಂಗಳೂರು ಸಾಫ್ಟ್​ವೇರ್​ ವಲಯ?

ಬೆಂಗಳೂರು: ಕೊರೊನಾ ಆತಂಕದ ನಡುವೆ ಹಂದಿ ಜ್ವರ ನಗರದಲ್ಲಿ ಕಾಣಿಸಿಕೊಂಡಿದೆ. ಈಗಾಗಲೇ ಇಬ್ಬರು ಎಸ್​ಎಪಿ ಕಂಪನಿಯ ಉದ್ಯೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ ಈ ಹಿನ್ನೆಲೆ ಮನೆಯಿಂದಲೇ ಕೆಲಸ ಮಾಡಲು ಐಟಿ ಕಂಪನಿಯಿಂದ ಟೆಕ್ಕಿಗಳಿಗೆ ಸೂಚನೆ ನೀಡಲಾಗಿದೆ. ಭಾರತದಲ್ಲಿರುವ ಕಚೇರಿಗಳಲ್ಲಿ ಶುದ್ಧೀಕರಣ ಕಾರ್ಯ ಮುಂದುವರೆದಿದ್ದು, ಬೆಂಗಳೂರು, ಗುರುಗ್ರಾಮ, ಮುಂಬೈನಲ್ಲಿರುವ ಕಚೇರಿಗಳನ್ನು ತಾತ್ಕಾಲಿಕವಾಗಿ ಕ್ಲೋಸ್ ಮಾಡಲಾಗಿದೆ. ಇನ್ನು ಇಕೋ ವರ್ಲ್ಡ್​​ ಕ್ಯಾಂಪಸ್​ನಲ್ಲಿರುವ ಎಸ್​ಎಪಿ, ವಾಲ್​ಮಾರ್ಟ್, ಸಿಸ್ಕೋ ಸೇರಿದಂತೆ ಹಲವು ಸಾಫ್ಟ್​ವೇರ್​ ಕಂಪನಿಗಳು ಉದ್ಯೋಗಿಗಳಿಗೆ ಫೆಬ್ರವರಿ 20ರಿಂದ 28ರವರೆಗೆ ಮನೆಯಿಂದಲೇ ಕೆಲಸ ಮಾಡಲು […]

H1N1ನಿಂದ ಬೆಚ್ಚಿಬಿತ್ತಾ ಬೆಂಗಳೂರು ಸಾಫ್ಟ್​ವೇರ್​ ವಲಯ?
ಸಾಧು ಶ್ರೀನಾಥ್​
|

Updated on: Feb 21, 2020 | 10:37 AM

Share

ಬೆಂಗಳೂರು: ಕೊರೊನಾ ಆತಂಕದ ನಡುವೆ ಹಂದಿ ಜ್ವರ ನಗರದಲ್ಲಿ ಕಾಣಿಸಿಕೊಂಡಿದೆ. ಈಗಾಗಲೇ ಇಬ್ಬರು ಎಸ್​ಎಪಿ ಕಂಪನಿಯ ಉದ್ಯೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ ಈ ಹಿನ್ನೆಲೆ ಮನೆಯಿಂದಲೇ ಕೆಲಸ ಮಾಡಲು ಐಟಿ ಕಂಪನಿಯಿಂದ ಟೆಕ್ಕಿಗಳಿಗೆ ಸೂಚನೆ ನೀಡಲಾಗಿದೆ.

ಭಾರತದಲ್ಲಿರುವ ಕಚೇರಿಗಳಲ್ಲಿ ಶುದ್ಧೀಕರಣ ಕಾರ್ಯ ಮುಂದುವರೆದಿದ್ದು, ಬೆಂಗಳೂರು, ಗುರುಗ್ರಾಮ, ಮುಂಬೈನಲ್ಲಿರುವ ಕಚೇರಿಗಳನ್ನು ತಾತ್ಕಾಲಿಕವಾಗಿ ಕ್ಲೋಸ್ ಮಾಡಲಾಗಿದೆ. ಇನ್ನು ಇಕೋ ವರ್ಲ್ಡ್​​ ಕ್ಯಾಂಪಸ್​ನಲ್ಲಿರುವ ಎಸ್​ಎಪಿ, ವಾಲ್​ಮಾರ್ಟ್, ಸಿಸ್ಕೋ ಸೇರಿದಂತೆ ಹಲವು ಸಾಫ್ಟ್​ವೇರ್​ ಕಂಪನಿಗಳು ಉದ್ಯೋಗಿಗಳಿಗೆ ಫೆಬ್ರವರಿ 20ರಿಂದ 28ರವರೆಗೆ ಮನೆಯಿಂದಲೇ ಕೆಲಸ ಮಾಡಲು ಇ-ಮೇಲ್ ಮೂಲಕ ಸೂಚಿಸಲಾಗಿದೆ.

ನಿಮ್ಮ ಮನೆಯಲ್ಲಿ ಸಂಬಂಧಿಕರಿಗೆ ಶೀತ, ಕೆಮ್ಮು, ಜ್ವರ ಇದ್ದರೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುವಂತೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಆದ್ರೆ ಇದರ ಬಗ್ಗೆ ಆರೋಗ್ಯ ಇಲಾಖೆ ಮಾತ್ರ ಕನ್ ಫ್ಯೂಸ್ ಆಗಿದೆ. ಈ ಸುದ್ದಿ ನಿಖರತೆ ತಿಳಿಯಲು ಕಂಪನಿಯವರನ್ನ ಸಂಪರ್ಕಿಸಲು ಪ್ರಯತ್ನಿಸಿದ್ರೂ ಸಾಧ್ಯವಾಗಿಲ್ಲ ಎಂದು ಆರೋಗ್ಯ ಇಲಾಖೆ ಜಂಟಿ ನಿರ್ದೇಶಕ ಡಾ.ಪ್ರಕಾಶ್ ಕುಮಾರ್ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಜನವರಿ ಇಂದ ಇಲ್ಲಿಯವರೆಗೂ 66 H1N1 ಪಾಸಿಟೀವ್ ಪ್ರಕರಣ ಪತ್ತೆಯಾಗಿದೆ. ಹಾಗೂ ರಾಜ್ಯದಲ್ಲಿ ಒಟ್ಟು 171 H1N1 ಪಾಸಿಟೀವ್ ಪ್ರಕರಣಗಳು ಪತ್ತೆಯಾಗಿದೆ. ದಿನದಿಂದ ದಿನಕ್ಕೆ H1N1 ಪ್ರಕರಣಗಳು ಹೆಚ್ಚಾಗ್ತಿದೆ. ಆದ್ರೆ ಅತ್ತ ಆರೋಗ್ಯ ಇಲಾಖೆಗೆ ಇದರ ಬಗ್ಗೆ ಕನ್ ಫ್ಯೂಸ್ ಶುರುವಾಗಿದೆ.

ನಾವೂ ಕೂಡ ಆ ಕಂಪನಿಯನ್ನ ಸಂಪರ್ಕಿಸಲು ಪ್ರಯತ್ನಿಸಿದ್ದೇವೆ ಆದರೆ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. H1N1 ಕಳೆದ ವರ್ಷಕ್ಕಿಂತ ನಾರ್ಮಲ್ ಆಗಿದೆ, ಆಗಿದ್ರು ಯಾಕೆ ಈ ರೀತಿ ಹಬ್ಬಿದೆ ಅನ್ನೋದು ಗೊತ್ತಾಗ್ತಿಲ್ಲ ನಾಳೆ ಆ ಕಂಪನಿಗಳನ್ನ ಸಂಪರ್ಕಿಸುತ್ತೇವೆ. ಕಂಪನಿಗಳಿಂದ ಯಾವುದೇ ರೀತಿಯ ಅಧಿಕೃತ ಮಾಹಿತಿ ಇಲ್ಲ ಎಂದು ಡಾ. ಪ್ರಕಾಶ್ ಕುಮಾರ್ ತಿಳಿಸಿದ್ದಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!