AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

H1N1ನಿಂದ ಬೆಚ್ಚಿಬಿತ್ತಾ ಬೆಂಗಳೂರು ಸಾಫ್ಟ್​ವೇರ್​ ವಲಯ?

ಬೆಂಗಳೂರು: ಕೊರೊನಾ ಆತಂಕದ ನಡುವೆ ಹಂದಿ ಜ್ವರ ನಗರದಲ್ಲಿ ಕಾಣಿಸಿಕೊಂಡಿದೆ. ಈಗಾಗಲೇ ಇಬ್ಬರು ಎಸ್​ಎಪಿ ಕಂಪನಿಯ ಉದ್ಯೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ ಈ ಹಿನ್ನೆಲೆ ಮನೆಯಿಂದಲೇ ಕೆಲಸ ಮಾಡಲು ಐಟಿ ಕಂಪನಿಯಿಂದ ಟೆಕ್ಕಿಗಳಿಗೆ ಸೂಚನೆ ನೀಡಲಾಗಿದೆ. ಭಾರತದಲ್ಲಿರುವ ಕಚೇರಿಗಳಲ್ಲಿ ಶುದ್ಧೀಕರಣ ಕಾರ್ಯ ಮುಂದುವರೆದಿದ್ದು, ಬೆಂಗಳೂರು, ಗುರುಗ್ರಾಮ, ಮುಂಬೈನಲ್ಲಿರುವ ಕಚೇರಿಗಳನ್ನು ತಾತ್ಕಾಲಿಕವಾಗಿ ಕ್ಲೋಸ್ ಮಾಡಲಾಗಿದೆ. ಇನ್ನು ಇಕೋ ವರ್ಲ್ಡ್​​ ಕ್ಯಾಂಪಸ್​ನಲ್ಲಿರುವ ಎಸ್​ಎಪಿ, ವಾಲ್​ಮಾರ್ಟ್, ಸಿಸ್ಕೋ ಸೇರಿದಂತೆ ಹಲವು ಸಾಫ್ಟ್​ವೇರ್​ ಕಂಪನಿಗಳು ಉದ್ಯೋಗಿಗಳಿಗೆ ಫೆಬ್ರವರಿ 20ರಿಂದ 28ರವರೆಗೆ ಮನೆಯಿಂದಲೇ ಕೆಲಸ ಮಾಡಲು […]

H1N1ನಿಂದ ಬೆಚ್ಚಿಬಿತ್ತಾ ಬೆಂಗಳೂರು ಸಾಫ್ಟ್​ವೇರ್​ ವಲಯ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 21, 2020 | 10:37 AM

Share

ಬೆಂಗಳೂರು: ಕೊರೊನಾ ಆತಂಕದ ನಡುವೆ ಹಂದಿ ಜ್ವರ ನಗರದಲ್ಲಿ ಕಾಣಿಸಿಕೊಂಡಿದೆ. ಈಗಾಗಲೇ ಇಬ್ಬರು ಎಸ್​ಎಪಿ ಕಂಪನಿಯ ಉದ್ಯೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ ಈ ಹಿನ್ನೆಲೆ ಮನೆಯಿಂದಲೇ ಕೆಲಸ ಮಾಡಲು ಐಟಿ ಕಂಪನಿಯಿಂದ ಟೆಕ್ಕಿಗಳಿಗೆ ಸೂಚನೆ ನೀಡಲಾಗಿದೆ.

ಭಾರತದಲ್ಲಿರುವ ಕಚೇರಿಗಳಲ್ಲಿ ಶುದ್ಧೀಕರಣ ಕಾರ್ಯ ಮುಂದುವರೆದಿದ್ದು, ಬೆಂಗಳೂರು, ಗುರುಗ್ರಾಮ, ಮುಂಬೈನಲ್ಲಿರುವ ಕಚೇರಿಗಳನ್ನು ತಾತ್ಕಾಲಿಕವಾಗಿ ಕ್ಲೋಸ್ ಮಾಡಲಾಗಿದೆ. ಇನ್ನು ಇಕೋ ವರ್ಲ್ಡ್​​ ಕ್ಯಾಂಪಸ್​ನಲ್ಲಿರುವ ಎಸ್​ಎಪಿ, ವಾಲ್​ಮಾರ್ಟ್, ಸಿಸ್ಕೋ ಸೇರಿದಂತೆ ಹಲವು ಸಾಫ್ಟ್​ವೇರ್​ ಕಂಪನಿಗಳು ಉದ್ಯೋಗಿಗಳಿಗೆ ಫೆಬ್ರವರಿ 20ರಿಂದ 28ರವರೆಗೆ ಮನೆಯಿಂದಲೇ ಕೆಲಸ ಮಾಡಲು ಇ-ಮೇಲ್ ಮೂಲಕ ಸೂಚಿಸಲಾಗಿದೆ.

ನಿಮ್ಮ ಮನೆಯಲ್ಲಿ ಸಂಬಂಧಿಕರಿಗೆ ಶೀತ, ಕೆಮ್ಮು, ಜ್ವರ ಇದ್ದರೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುವಂತೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಆದ್ರೆ ಇದರ ಬಗ್ಗೆ ಆರೋಗ್ಯ ಇಲಾಖೆ ಮಾತ್ರ ಕನ್ ಫ್ಯೂಸ್ ಆಗಿದೆ. ಈ ಸುದ್ದಿ ನಿಖರತೆ ತಿಳಿಯಲು ಕಂಪನಿಯವರನ್ನ ಸಂಪರ್ಕಿಸಲು ಪ್ರಯತ್ನಿಸಿದ್ರೂ ಸಾಧ್ಯವಾಗಿಲ್ಲ ಎಂದು ಆರೋಗ್ಯ ಇಲಾಖೆ ಜಂಟಿ ನಿರ್ದೇಶಕ ಡಾ.ಪ್ರಕಾಶ್ ಕುಮಾರ್ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಜನವರಿ ಇಂದ ಇಲ್ಲಿಯವರೆಗೂ 66 H1N1 ಪಾಸಿಟೀವ್ ಪ್ರಕರಣ ಪತ್ತೆಯಾಗಿದೆ. ಹಾಗೂ ರಾಜ್ಯದಲ್ಲಿ ಒಟ್ಟು 171 H1N1 ಪಾಸಿಟೀವ್ ಪ್ರಕರಣಗಳು ಪತ್ತೆಯಾಗಿದೆ. ದಿನದಿಂದ ದಿನಕ್ಕೆ H1N1 ಪ್ರಕರಣಗಳು ಹೆಚ್ಚಾಗ್ತಿದೆ. ಆದ್ರೆ ಅತ್ತ ಆರೋಗ್ಯ ಇಲಾಖೆಗೆ ಇದರ ಬಗ್ಗೆ ಕನ್ ಫ್ಯೂಸ್ ಶುರುವಾಗಿದೆ.

ನಾವೂ ಕೂಡ ಆ ಕಂಪನಿಯನ್ನ ಸಂಪರ್ಕಿಸಲು ಪ್ರಯತ್ನಿಸಿದ್ದೇವೆ ಆದರೆ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. H1N1 ಕಳೆದ ವರ್ಷಕ್ಕಿಂತ ನಾರ್ಮಲ್ ಆಗಿದೆ, ಆಗಿದ್ರು ಯಾಕೆ ಈ ರೀತಿ ಹಬ್ಬಿದೆ ಅನ್ನೋದು ಗೊತ್ತಾಗ್ತಿಲ್ಲ ನಾಳೆ ಆ ಕಂಪನಿಗಳನ್ನ ಸಂಪರ್ಕಿಸುತ್ತೇವೆ. ಕಂಪನಿಗಳಿಂದ ಯಾವುದೇ ರೀತಿಯ ಅಧಿಕೃತ ಮಾಹಿತಿ ಇಲ್ಲ ಎಂದು ಡಾ. ಪ್ರಕಾಶ್ ಕುಮಾರ್ ತಿಳಿಸಿದ್ದಾರೆ.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ