AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಆರೋಪಿ ಶ್ರವಣ್​ ಸಹೋದರ ನಾಪತ್ತೆ ಪ್ರಕರಣ: ಹೇಬಿಯಸ್​ ಕಾರ್ಪಸ್​ ಅರ್ಜಿ ಸುಖಾಂತ್ಯ

ಅಕ್ರಮ ಬಂಧನದಲ್ಲಿ ಇಲ್ಲವೆಂದು ಅರ್ಜಿದಾರರೇ ಹೇಳಿರುವ ಕಾರಣ ಹೇಬಿಯಸ್​ ಕಾರ್ಪಸ್​ ಪ್ರಕರಣ ಸುಖಾಂತ್ಯಗೊಂಡಿದೆ.

ಸಿಡಿ ಆರೋಪಿ ಶ್ರವಣ್​ ಸಹೋದರ ನಾಪತ್ತೆ ಪ್ರಕರಣ: ಹೇಬಿಯಸ್​ ಕಾರ್ಪಸ್​ ಅರ್ಜಿ ಸುಖಾಂತ್ಯ
ಕರ್ನಾಟಕ ಹೈಕೋರ್ಟ್​
Skanda
| Edited By: |

Updated on: Mar 20, 2021 | 11:38 AM

Share

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಪ್ರಮುಖ ಆರೋಪಿ ಎನ್ನಲಾಗಿರುವ ಶ್ರವಣ್​ ಸೋದರ ಚೇತನ್​ ನಾಪತ್ತೆಗೆ ಸಂಬಂಧಿಸಿದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಕರ್ನಾಟಕ ಉಚ್ಛ ನ್ಯಾಯಾಲಯ ವಿಚಾರಣೆ ಮಾಡಿ, ಇತ್ಯರ್ಥ ಪಡಿಸಿದೆ. ಶ್ರವಣ್ ತಂದೆ ಸೂರ್ಯಕುಮಾರ್ ಅವರು ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ವಿಚಾರಣೆ ಮಾಡಿದ್ದು, ಅರ್ಜಿದಾರ ಸೂರ್ಯಕುಮಾರ್ ಉಪಸ್ಥಿತಿಯಲ್ಲಿ ಪ್ರಕರಣ ಇತ್ಯರ್ಥಗೊಂಡಿದೆ.

ಈ ವೇಳೆ, ನಾಪತ್ತೆಯಾಗಿರುವ ಚೇತನ್​ ಸಂಬಂಧಿಯೊಂದಿಗೆ ತಿರುಪತಿಗೆ ತೆರಳಿದ್ದಾನೆ, ಆತ ನನ್ನ ಸಂಪರ್ಕದಲ್ಲಿದ್ದಾನೆ ಎಂದು ಸೂರ್ಯಕುಮಾರ್​ ಹೇಳಿಕೆ ನೀಡಿದ್ದಾರೆ. ಅದಕ್ಕೂ ಮುನ್ನ ಚೇತನ್​ನನ್ನು ನಿನ್ನೆ 1.30ರ ಸುಮಾರಿಗೆ ವಕೀಲರು ಸಂಪರ್ಕಿಸಿದ್ದಾರೆ, ಅವರ ಸೂಚನೆ ಮೇರೆಗೆ ಮೊಬೈಲ್​ ಸ್ವಿಚ್​ ಆಫ್​ ಆಗಿದೆ ಎಂದು ಸರ್ಕಾರಿ ವಕೀಲರು ಆರೋಪ ಮಾಡಿದ್ದಾರೆ. ಆದರೂ, ಅಕ್ರಮ ಬಂಧನದಲ್ಲಿ ಇಲ್ಲವೆಂದು ಅರ್ಜಿದಾರರೇ ಹೇಳಿರುವ ಕಾರಣ ಹೇಬಿಯಸ್​ ಕಾರ್ಪಸ್​ ಪ್ರಕರಣ ಸುಖಾಂತ್ಯಗೊಂಡಿದೆ.

ಈ ಮಧ್ಯೆ, ಸರ್ಕಾರಿ ವಕೀಲರ ಆರೋಪಕ್ಕೆ ಹಿರಿಯ ವಕೀಲ ಎ.ಎಸ್​.ಪೊನ್ನಣ್ಣ ಆಕ್ಷೇಪ ವ್ಯಕ್ತಪಡಿಸಿದ್ದು, ಪೊಲೀಸರಿಂದ ಕಾನೂನುಬಾಹಿರವಾಗಿ ಮೊಬೈಲ್ ಕದ್ದಾಲಿಕೆ ಆಗಿದೆ ಎಂಬ ಆರೋಪವೂ ಕೇಳಿಬಂದಿತು.

ಮಾರ್ಚ್​ 16ರಿಂದ ನನ್ನ ಪುತ್ರ ಚೇತನ್ ನಾಪತ್ತೆಯಾಗಿದ್ದಾನೆ. ಚೇತನ್​ನನ್ನು ಪೊಲೀಸರು ಅಕ್ರಮ ಬಂಧನದಲ್ಲಿ ಇರಿಸಿದ್ದಾರೆ. ಕಬ್ಬನ್​ ಪಾರ್ಕ್​ ಠಾಣೆಗೆ ಹೋಗಿದ್ದ ಚೇತನ್​ ಮಾರ್ಚ್​ 16ರಿಂದ ಮರಳಿ ಬಂದಿಲ್ಲವೆಂದು ಆತನ ತಂದೆ ಸೂರ್ಯಕುಮಾರ್ ಕೋರ್ಟ್​ ಮೊರೆ ಹೋಗಿದ್ದರು. ನಿನ್ನೆ ಏನಾಗಿತ್ತು.. ಇಲ್ಲಿದೆ ವರದಿ: ಜಾರಕಿಹೊಳಿ ಸಿಡಿ ಪ್ರಕರಣ: ಎಸ್​ಐಟಿ ಪೊಲೀಸರಿಗೆ ಬಿಸಿ ಮುಟ್ಟಿಸಿದ ಕೋರ್ಟ್, ಯುವಕನನ್ನು ಶನಿವಾರ ಹಾಜರು ಪಡಿಸುವಂತೆ ಆದೇಶ

24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್
ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್