AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಆರೋಪಿ ಶ್ರವಣ್​ ಸಹೋದರ ನಾಪತ್ತೆ ಪ್ರಕರಣ: ಹೇಬಿಯಸ್​ ಕಾರ್ಪಸ್​ ಅರ್ಜಿ ಸುಖಾಂತ್ಯ

ಅಕ್ರಮ ಬಂಧನದಲ್ಲಿ ಇಲ್ಲವೆಂದು ಅರ್ಜಿದಾರರೇ ಹೇಳಿರುವ ಕಾರಣ ಹೇಬಿಯಸ್​ ಕಾರ್ಪಸ್​ ಪ್ರಕರಣ ಸುಖಾಂತ್ಯಗೊಂಡಿದೆ.

ಸಿಡಿ ಆರೋಪಿ ಶ್ರವಣ್​ ಸಹೋದರ ನಾಪತ್ತೆ ಪ್ರಕರಣ: ಹೇಬಿಯಸ್​ ಕಾರ್ಪಸ್​ ಅರ್ಜಿ ಸುಖಾಂತ್ಯ
ಕರ್ನಾಟಕ ಹೈಕೋರ್ಟ್​
Skanda
| Updated By: ಸಾಧು ಶ್ರೀನಾಥ್​|

Updated on: Mar 20, 2021 | 11:38 AM

Share

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಪ್ರಮುಖ ಆರೋಪಿ ಎನ್ನಲಾಗಿರುವ ಶ್ರವಣ್​ ಸೋದರ ಚೇತನ್​ ನಾಪತ್ತೆಗೆ ಸಂಬಂಧಿಸಿದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಕರ್ನಾಟಕ ಉಚ್ಛ ನ್ಯಾಯಾಲಯ ವಿಚಾರಣೆ ಮಾಡಿ, ಇತ್ಯರ್ಥ ಪಡಿಸಿದೆ. ಶ್ರವಣ್ ತಂದೆ ಸೂರ್ಯಕುಮಾರ್ ಅವರು ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ವಿಚಾರಣೆ ಮಾಡಿದ್ದು, ಅರ್ಜಿದಾರ ಸೂರ್ಯಕುಮಾರ್ ಉಪಸ್ಥಿತಿಯಲ್ಲಿ ಪ್ರಕರಣ ಇತ್ಯರ್ಥಗೊಂಡಿದೆ.

ಈ ವೇಳೆ, ನಾಪತ್ತೆಯಾಗಿರುವ ಚೇತನ್​ ಸಂಬಂಧಿಯೊಂದಿಗೆ ತಿರುಪತಿಗೆ ತೆರಳಿದ್ದಾನೆ, ಆತ ನನ್ನ ಸಂಪರ್ಕದಲ್ಲಿದ್ದಾನೆ ಎಂದು ಸೂರ್ಯಕುಮಾರ್​ ಹೇಳಿಕೆ ನೀಡಿದ್ದಾರೆ. ಅದಕ್ಕೂ ಮುನ್ನ ಚೇತನ್​ನನ್ನು ನಿನ್ನೆ 1.30ರ ಸುಮಾರಿಗೆ ವಕೀಲರು ಸಂಪರ್ಕಿಸಿದ್ದಾರೆ, ಅವರ ಸೂಚನೆ ಮೇರೆಗೆ ಮೊಬೈಲ್​ ಸ್ವಿಚ್​ ಆಫ್​ ಆಗಿದೆ ಎಂದು ಸರ್ಕಾರಿ ವಕೀಲರು ಆರೋಪ ಮಾಡಿದ್ದಾರೆ. ಆದರೂ, ಅಕ್ರಮ ಬಂಧನದಲ್ಲಿ ಇಲ್ಲವೆಂದು ಅರ್ಜಿದಾರರೇ ಹೇಳಿರುವ ಕಾರಣ ಹೇಬಿಯಸ್​ ಕಾರ್ಪಸ್​ ಪ್ರಕರಣ ಸುಖಾಂತ್ಯಗೊಂಡಿದೆ.

ಈ ಮಧ್ಯೆ, ಸರ್ಕಾರಿ ವಕೀಲರ ಆರೋಪಕ್ಕೆ ಹಿರಿಯ ವಕೀಲ ಎ.ಎಸ್​.ಪೊನ್ನಣ್ಣ ಆಕ್ಷೇಪ ವ್ಯಕ್ತಪಡಿಸಿದ್ದು, ಪೊಲೀಸರಿಂದ ಕಾನೂನುಬಾಹಿರವಾಗಿ ಮೊಬೈಲ್ ಕದ್ದಾಲಿಕೆ ಆಗಿದೆ ಎಂಬ ಆರೋಪವೂ ಕೇಳಿಬಂದಿತು.

ಮಾರ್ಚ್​ 16ರಿಂದ ನನ್ನ ಪುತ್ರ ಚೇತನ್ ನಾಪತ್ತೆಯಾಗಿದ್ದಾನೆ. ಚೇತನ್​ನನ್ನು ಪೊಲೀಸರು ಅಕ್ರಮ ಬಂಧನದಲ್ಲಿ ಇರಿಸಿದ್ದಾರೆ. ಕಬ್ಬನ್​ ಪಾರ್ಕ್​ ಠಾಣೆಗೆ ಹೋಗಿದ್ದ ಚೇತನ್​ ಮಾರ್ಚ್​ 16ರಿಂದ ಮರಳಿ ಬಂದಿಲ್ಲವೆಂದು ಆತನ ತಂದೆ ಸೂರ್ಯಕುಮಾರ್ ಕೋರ್ಟ್​ ಮೊರೆ ಹೋಗಿದ್ದರು. ನಿನ್ನೆ ಏನಾಗಿತ್ತು.. ಇಲ್ಲಿದೆ ವರದಿ: ಜಾರಕಿಹೊಳಿ ಸಿಡಿ ಪ್ರಕರಣ: ಎಸ್​ಐಟಿ ಪೊಲೀಸರಿಗೆ ಬಿಸಿ ಮುಟ್ಟಿಸಿದ ಕೋರ್ಟ್, ಯುವಕನನ್ನು ಶನಿವಾರ ಹಾಜರು ಪಡಿಸುವಂತೆ ಆದೇಶ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು