AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಲಸಿಕೆ ಹಾಕಿಸಿಕೊಳ್ಳೋದಿಲ್ಲ; ಇಲ್ಲಿ ಬಂದು ಕೊರೊನಾ ಹಬ್ಬಿಸಬೇಡಿ ಎಂದು ವಿಶ್ವನಾಥ್‌ ವಿರುದ್ಧ ಗರಂ ಆದ ಹಾಡಿ ಜನ

ಕೊವಿಡ್ ಲಸಿಕೆ ಪಡೆಯಲು ಹಾಡಿ ಜನ ಹಿಂದೇಟು ಹಾಕಿದ್ದಾರೆ. ಶಾಸಕ ಮಂಜುನಾಥ್, MLC ವಿಶ್ವನಾಥ್‌ ಲಸಿಕೆ ಪಡೆಯುವಂತೆ ಮನವೊಲಿಸಲು ಹಾಡಿ ಜನರನ್ನು ಭೇಟಿಯಾದರು. ಈ ವೇಳೆ ತಾವು ಲಸಿಕೆ ಪಡೆಯಲ್ಲ....

ನಾವು ಲಸಿಕೆ ಹಾಕಿಸಿಕೊಳ್ಳೋದಿಲ್ಲ; ಇಲ್ಲಿ ಬಂದು ಕೊರೊನಾ ಹಬ್ಬಿಸಬೇಡಿ ಎಂದು ವಿಶ್ವನಾಥ್‌ ವಿರುದ್ಧ ಗರಂ ಆದ ಹಾಡಿ ಜನ
ಹಾಡಿ ಜನರಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಿದ ವಿಶ್ವನಾಥ್
ಆಯೇಷಾ ಬಾನು
| Edited By: |

Updated on:Apr 22, 2021 | 9:21 AM

Share

ಮೈಸೂರು: ಮಹಾಮಾರಿ ಕೊರೊನಾದ 2ನೇ ಅಲೆಯ ಭೀಕರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಶಾಸಕ ಮಂಜುನಾಥ್, MLC ವಿಶ್ವನಾಥ್‌ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬಿಲ್ಲೇನಹೊಸಹಳ್ಳಿ ಹಾಡಿ ಜನರನ್ನು ಭೇಟಿ ಮಾಡಿ ಲಸಿಕೆ ಪಡೆಯುವಂತೆ ಮನವಿ ಮಾಡಿಕೊಂಡಿದ್ದಾರೆ. ಆದ್ರೆ ಮನವಿಯನ್ನು ತಿರಸ್ಕರಿಸಿದ ಹಾಡಿ ಜನ ಮಂಜುನಾಥ್ ಹಾಗೂ ವಿಶ್ವನಾಥ್‌ ವಿರುದ್ಧ ಗರಂ ಆಗಿದ್ದಾರೆ.

ಕೊವಿಡ್ ಲಸಿಕೆ ಪಡೆಯಲು ಹಾಡಿ ಜನ ಹಿಂದೇಟು ಹಾಕಿದ್ದಾರೆ. ಶಾಸಕ ಮಂಜುನಾಥ್, MLC ವಿಶ್ವನಾಥ್‌ ಲಸಿಕೆ ಪಡೆಯುವಂತೆ ಮನವೊಲಿಸಲು ಹಾಡಿ ಜನರನ್ನು ಭೇಟಿಯಾದರು. ಈ ವೇಳೆ ತಾವು ಲಸಿಕೆ ಪಡೆಯಲ್ಲ. ನಮಗೆ ಯಾವ ಕಾಯಿಲೆ ಬರಲ್ಲ, ಅದು ಸಿಟಿ ಕಡೆಯವರಿಗೆ ಬರುವುದು. ನಾವಂತೂ ಇಂಜೆಕ್ಷನ್ ತಕೊಳ್ಳಲ್ಲಾ. ನಿಮ್ಮಂಥವರು ಬಂದು ಕೊರೊನಾ ಹಬ್ಬಿಸ್ತೀರಾ ಎಂದು H.P.ಮಂಜುನಾಥ್, ವಿಶ್ವನಾಥ್‌ ವಿರುದ್ಧ ಗರಂ ಆಗಿದ್ದಾರೆ.

ಹಾಡಿಯವರು ಕಡ್ಡಾಯವಾಗಿ ಕೊರೊನಾ ಲಸಿಕೆ ಹಾಕಿಸಿಕೊಳ್ಳಬೇಕು ಇದರಿಂದ ಕೊರೊನಾ ಬರಲ್ಲವೆಂದು ಎಷ್ಟೇ ಮನವೊಲಿಸಲು ಯತ್ನಿಸಿದ್ರೂ ಹಾಡಿ ಜನ ಮಾತ್ರ ಲಸಿಕೆ ಹಾಕಿಸಿಕೊಳ್ಳಲು ಒಪ್ಪಿಲ್ಲ. ನಾವೆಲ್ಲಾ ಲಸಿಕೆ ಹಾಕಿಸಿಕೊಂಡಿದೀವಿ. ನೀವು ಪಡೆಯದಿದ್ದರೆ ಪೊಲೀಸರು ಅರೆಸ್ಟ್ ಮಾಡ್ತಾರೆ ಎಂದು ವಿಶ್ವನಾಥ್ ಹಾಡಿ ಜನರನ್ನು ಒಪ್ಪಿಸಲು ಖಡಕ್ ಎಚ್ಚರಿಕೆ ನೀಡಿದ್ರು.ಈ ವೇಳೆ ನಿಧಾನವಾಗಿ ಹಾಕಿಸ್ಕೊತೀವಿ ಎಂದು ಹಾಡಿ ಜನ ಸಬೂಬು ನೀಡಿದ್ರು. H.P.ಮಂಜುನಾಥ್, ವಿಶ್ವನಾಥ್ ತೆರಳುತ್ತಿದ್ದಂತೆ ನಾವ್ಯಾರು ಲಸಿಕೆ ತಕೊಳ್ಳಲ್ಲ, ನಿಮ್ಮಂತೋರ್ ನಮ್ ಹಾಡಿಗೆ ಬಂದು ಕೊರೊನಾ ಹಬ್ಬಿಸ್ತೀರಾ. ನೀವ್ ಬರೋದು ಬೇಡ ನಮ್ ಪಾಡಿಗೆ ಬಿಟ್ಟು ಬಿಡಿ ಅಂತಾ ಅಲ್ಲಿಂದ ಹಾಡಿವಾಸಿಗಳು ಹೊರಟು ಹೋಗಿದ್ದಾರೆ.

H Vishwanath

ವಿಶ್ವನಾಥ್ ಮನವಿ ತಿರಸ್ಕರಿಸಿದ ಹಾಡಿ ಜನ

ಇದನ್ನೂ ಓದಿ: ನನ್ನ ಪ್ಲೇಸ್‌ನಲ್ಲಿ ಆ ವ್ಯಕ್ತಿ ಎಲಿಮಿನೇಟ್ ಆಗ್ಬೇಕಿತ್ತು: ಬಿಗ್ ಬಾಸ್ ಕಂಟೆಸ್ಟೆಂಟ್ ವಿಶ್ವನಾಥ್ ಹಾವೇರಿ

Published On - 8:48 am, Thu, 22 April 21

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ