AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಲಸಿಕೆ ಹಾಕಿಸಿಕೊಳ್ಳೋದಿಲ್ಲ; ಇಲ್ಲಿ ಬಂದು ಕೊರೊನಾ ಹಬ್ಬಿಸಬೇಡಿ ಎಂದು ವಿಶ್ವನಾಥ್‌ ವಿರುದ್ಧ ಗರಂ ಆದ ಹಾಡಿ ಜನ

ಕೊವಿಡ್ ಲಸಿಕೆ ಪಡೆಯಲು ಹಾಡಿ ಜನ ಹಿಂದೇಟು ಹಾಕಿದ್ದಾರೆ. ಶಾಸಕ ಮಂಜುನಾಥ್, MLC ವಿಶ್ವನಾಥ್‌ ಲಸಿಕೆ ಪಡೆಯುವಂತೆ ಮನವೊಲಿಸಲು ಹಾಡಿ ಜನರನ್ನು ಭೇಟಿಯಾದರು. ಈ ವೇಳೆ ತಾವು ಲಸಿಕೆ ಪಡೆಯಲ್ಲ....

ನಾವು ಲಸಿಕೆ ಹಾಕಿಸಿಕೊಳ್ಳೋದಿಲ್ಲ; ಇಲ್ಲಿ ಬಂದು ಕೊರೊನಾ ಹಬ್ಬಿಸಬೇಡಿ ಎಂದು ವಿಶ್ವನಾಥ್‌ ವಿರುದ್ಧ ಗರಂ ಆದ ಹಾಡಿ ಜನ
ಹಾಡಿ ಜನರಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಿದ ವಿಶ್ವನಾಥ್
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Apr 22, 2021 | 9:21 AM

ಮೈಸೂರು: ಮಹಾಮಾರಿ ಕೊರೊನಾದ 2ನೇ ಅಲೆಯ ಭೀಕರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಶಾಸಕ ಮಂಜುನಾಥ್, MLC ವಿಶ್ವನಾಥ್‌ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬಿಲ್ಲೇನಹೊಸಹಳ್ಳಿ ಹಾಡಿ ಜನರನ್ನು ಭೇಟಿ ಮಾಡಿ ಲಸಿಕೆ ಪಡೆಯುವಂತೆ ಮನವಿ ಮಾಡಿಕೊಂಡಿದ್ದಾರೆ. ಆದ್ರೆ ಮನವಿಯನ್ನು ತಿರಸ್ಕರಿಸಿದ ಹಾಡಿ ಜನ ಮಂಜುನಾಥ್ ಹಾಗೂ ವಿಶ್ವನಾಥ್‌ ವಿರುದ್ಧ ಗರಂ ಆಗಿದ್ದಾರೆ.

ಕೊವಿಡ್ ಲಸಿಕೆ ಪಡೆಯಲು ಹಾಡಿ ಜನ ಹಿಂದೇಟು ಹಾಕಿದ್ದಾರೆ. ಶಾಸಕ ಮಂಜುನಾಥ್, MLC ವಿಶ್ವನಾಥ್‌ ಲಸಿಕೆ ಪಡೆಯುವಂತೆ ಮನವೊಲಿಸಲು ಹಾಡಿ ಜನರನ್ನು ಭೇಟಿಯಾದರು. ಈ ವೇಳೆ ತಾವು ಲಸಿಕೆ ಪಡೆಯಲ್ಲ. ನಮಗೆ ಯಾವ ಕಾಯಿಲೆ ಬರಲ್ಲ, ಅದು ಸಿಟಿ ಕಡೆಯವರಿಗೆ ಬರುವುದು. ನಾವಂತೂ ಇಂಜೆಕ್ಷನ್ ತಕೊಳ್ಳಲ್ಲಾ. ನಿಮ್ಮಂಥವರು ಬಂದು ಕೊರೊನಾ ಹಬ್ಬಿಸ್ತೀರಾ ಎಂದು H.P.ಮಂಜುನಾಥ್, ವಿಶ್ವನಾಥ್‌ ವಿರುದ್ಧ ಗರಂ ಆಗಿದ್ದಾರೆ.

ಹಾಡಿಯವರು ಕಡ್ಡಾಯವಾಗಿ ಕೊರೊನಾ ಲಸಿಕೆ ಹಾಕಿಸಿಕೊಳ್ಳಬೇಕು ಇದರಿಂದ ಕೊರೊನಾ ಬರಲ್ಲವೆಂದು ಎಷ್ಟೇ ಮನವೊಲಿಸಲು ಯತ್ನಿಸಿದ್ರೂ ಹಾಡಿ ಜನ ಮಾತ್ರ ಲಸಿಕೆ ಹಾಕಿಸಿಕೊಳ್ಳಲು ಒಪ್ಪಿಲ್ಲ. ನಾವೆಲ್ಲಾ ಲಸಿಕೆ ಹಾಕಿಸಿಕೊಂಡಿದೀವಿ. ನೀವು ಪಡೆಯದಿದ್ದರೆ ಪೊಲೀಸರು ಅರೆಸ್ಟ್ ಮಾಡ್ತಾರೆ ಎಂದು ವಿಶ್ವನಾಥ್ ಹಾಡಿ ಜನರನ್ನು ಒಪ್ಪಿಸಲು ಖಡಕ್ ಎಚ್ಚರಿಕೆ ನೀಡಿದ್ರು.ಈ ವೇಳೆ ನಿಧಾನವಾಗಿ ಹಾಕಿಸ್ಕೊತೀವಿ ಎಂದು ಹಾಡಿ ಜನ ಸಬೂಬು ನೀಡಿದ್ರು. H.P.ಮಂಜುನಾಥ್, ವಿಶ್ವನಾಥ್ ತೆರಳುತ್ತಿದ್ದಂತೆ ನಾವ್ಯಾರು ಲಸಿಕೆ ತಕೊಳ್ಳಲ್ಲ, ನಿಮ್ಮಂತೋರ್ ನಮ್ ಹಾಡಿಗೆ ಬಂದು ಕೊರೊನಾ ಹಬ್ಬಿಸ್ತೀರಾ. ನೀವ್ ಬರೋದು ಬೇಡ ನಮ್ ಪಾಡಿಗೆ ಬಿಟ್ಟು ಬಿಡಿ ಅಂತಾ ಅಲ್ಲಿಂದ ಹಾಡಿವಾಸಿಗಳು ಹೊರಟು ಹೋಗಿದ್ದಾರೆ.

H Vishwanath

ವಿಶ್ವನಾಥ್ ಮನವಿ ತಿರಸ್ಕರಿಸಿದ ಹಾಡಿ ಜನ

ಇದನ್ನೂ ಓದಿ: ನನ್ನ ಪ್ಲೇಸ್‌ನಲ್ಲಿ ಆ ವ್ಯಕ್ತಿ ಎಲಿಮಿನೇಟ್ ಆಗ್ಬೇಕಿತ್ತು: ಬಿಗ್ ಬಾಸ್ ಕಂಟೆಸ್ಟೆಂಟ್ ವಿಶ್ವನಾಥ್ ಹಾವೇರಿ

Published On - 8:48 am, Thu, 22 April 21

ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?