AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಲಸಿಕೆ ಹಾಕಿಸಿಕೊಳ್ಳೋದಿಲ್ಲ; ಇಲ್ಲಿ ಬಂದು ಕೊರೊನಾ ಹಬ್ಬಿಸಬೇಡಿ ಎಂದು ವಿಶ್ವನಾಥ್‌ ವಿರುದ್ಧ ಗರಂ ಆದ ಹಾಡಿ ಜನ

ಕೊವಿಡ್ ಲಸಿಕೆ ಪಡೆಯಲು ಹಾಡಿ ಜನ ಹಿಂದೇಟು ಹಾಕಿದ್ದಾರೆ. ಶಾಸಕ ಮಂಜುನಾಥ್, MLC ವಿಶ್ವನಾಥ್‌ ಲಸಿಕೆ ಪಡೆಯುವಂತೆ ಮನವೊಲಿಸಲು ಹಾಡಿ ಜನರನ್ನು ಭೇಟಿಯಾದರು. ಈ ವೇಳೆ ತಾವು ಲಸಿಕೆ ಪಡೆಯಲ್ಲ....

ನಾವು ಲಸಿಕೆ ಹಾಕಿಸಿಕೊಳ್ಳೋದಿಲ್ಲ; ಇಲ್ಲಿ ಬಂದು ಕೊರೊನಾ ಹಬ್ಬಿಸಬೇಡಿ ಎಂದು ವಿಶ್ವನಾಥ್‌ ವಿರುದ್ಧ ಗರಂ ಆದ ಹಾಡಿ ಜನ
ಹಾಡಿ ಜನರಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಿದ ವಿಶ್ವನಾಥ್
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Apr 22, 2021 | 9:21 AM

Share

ಮೈಸೂರು: ಮಹಾಮಾರಿ ಕೊರೊನಾದ 2ನೇ ಅಲೆಯ ಭೀಕರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಶಾಸಕ ಮಂಜುನಾಥ್, MLC ವಿಶ್ವನಾಥ್‌ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬಿಲ್ಲೇನಹೊಸಹಳ್ಳಿ ಹಾಡಿ ಜನರನ್ನು ಭೇಟಿ ಮಾಡಿ ಲಸಿಕೆ ಪಡೆಯುವಂತೆ ಮನವಿ ಮಾಡಿಕೊಂಡಿದ್ದಾರೆ. ಆದ್ರೆ ಮನವಿಯನ್ನು ತಿರಸ್ಕರಿಸಿದ ಹಾಡಿ ಜನ ಮಂಜುನಾಥ್ ಹಾಗೂ ವಿಶ್ವನಾಥ್‌ ವಿರುದ್ಧ ಗರಂ ಆಗಿದ್ದಾರೆ.

ಕೊವಿಡ್ ಲಸಿಕೆ ಪಡೆಯಲು ಹಾಡಿ ಜನ ಹಿಂದೇಟು ಹಾಕಿದ್ದಾರೆ. ಶಾಸಕ ಮಂಜುನಾಥ್, MLC ವಿಶ್ವನಾಥ್‌ ಲಸಿಕೆ ಪಡೆಯುವಂತೆ ಮನವೊಲಿಸಲು ಹಾಡಿ ಜನರನ್ನು ಭೇಟಿಯಾದರು. ಈ ವೇಳೆ ತಾವು ಲಸಿಕೆ ಪಡೆಯಲ್ಲ. ನಮಗೆ ಯಾವ ಕಾಯಿಲೆ ಬರಲ್ಲ, ಅದು ಸಿಟಿ ಕಡೆಯವರಿಗೆ ಬರುವುದು. ನಾವಂತೂ ಇಂಜೆಕ್ಷನ್ ತಕೊಳ್ಳಲ್ಲಾ. ನಿಮ್ಮಂಥವರು ಬಂದು ಕೊರೊನಾ ಹಬ್ಬಿಸ್ತೀರಾ ಎಂದು H.P.ಮಂಜುನಾಥ್, ವಿಶ್ವನಾಥ್‌ ವಿರುದ್ಧ ಗರಂ ಆಗಿದ್ದಾರೆ.

ಹಾಡಿಯವರು ಕಡ್ಡಾಯವಾಗಿ ಕೊರೊನಾ ಲಸಿಕೆ ಹಾಕಿಸಿಕೊಳ್ಳಬೇಕು ಇದರಿಂದ ಕೊರೊನಾ ಬರಲ್ಲವೆಂದು ಎಷ್ಟೇ ಮನವೊಲಿಸಲು ಯತ್ನಿಸಿದ್ರೂ ಹಾಡಿ ಜನ ಮಾತ್ರ ಲಸಿಕೆ ಹಾಕಿಸಿಕೊಳ್ಳಲು ಒಪ್ಪಿಲ್ಲ. ನಾವೆಲ್ಲಾ ಲಸಿಕೆ ಹಾಕಿಸಿಕೊಂಡಿದೀವಿ. ನೀವು ಪಡೆಯದಿದ್ದರೆ ಪೊಲೀಸರು ಅರೆಸ್ಟ್ ಮಾಡ್ತಾರೆ ಎಂದು ವಿಶ್ವನಾಥ್ ಹಾಡಿ ಜನರನ್ನು ಒಪ್ಪಿಸಲು ಖಡಕ್ ಎಚ್ಚರಿಕೆ ನೀಡಿದ್ರು.ಈ ವೇಳೆ ನಿಧಾನವಾಗಿ ಹಾಕಿಸ್ಕೊತೀವಿ ಎಂದು ಹಾಡಿ ಜನ ಸಬೂಬು ನೀಡಿದ್ರು. H.P.ಮಂಜುನಾಥ್, ವಿಶ್ವನಾಥ್ ತೆರಳುತ್ತಿದ್ದಂತೆ ನಾವ್ಯಾರು ಲಸಿಕೆ ತಕೊಳ್ಳಲ್ಲ, ನಿಮ್ಮಂತೋರ್ ನಮ್ ಹಾಡಿಗೆ ಬಂದು ಕೊರೊನಾ ಹಬ್ಬಿಸ್ತೀರಾ. ನೀವ್ ಬರೋದು ಬೇಡ ನಮ್ ಪಾಡಿಗೆ ಬಿಟ್ಟು ಬಿಡಿ ಅಂತಾ ಅಲ್ಲಿಂದ ಹಾಡಿವಾಸಿಗಳು ಹೊರಟು ಹೋಗಿದ್ದಾರೆ.

H Vishwanath

ವಿಶ್ವನಾಥ್ ಮನವಿ ತಿರಸ್ಕರಿಸಿದ ಹಾಡಿ ಜನ

ಇದನ್ನೂ ಓದಿ: ನನ್ನ ಪ್ಲೇಸ್‌ನಲ್ಲಿ ಆ ವ್ಯಕ್ತಿ ಎಲಿಮಿನೇಟ್ ಆಗ್ಬೇಕಿತ್ತು: ಬಿಗ್ ಬಾಸ್ ಕಂಟೆಸ್ಟೆಂಟ್ ವಿಶ್ವನಾಥ್ ಹಾವೇರಿ

Published On - 8:48 am, Thu, 22 April 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ