AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಕ್ಕಾ ಹಜ್ ಯಾತ್ರೆಗೆ ತೆರಳಿದ್ದ ಬೆಂಗಳೂರು ಮೂಲದ ಇಬ್ಬರು ಸಾವು: ಸಚಿವ ರಹಿಂಖಾನ್ ಹೇಳಿದ್ದಿಷ್ಟು

ಹಜ್ ಯಾತ್ರೆಗೆ ತೆರಳಿದ್ದ ಬೆಂಗಳೂರು ಮೂಲದ ಇಬ್ಬರು ಸಾವನ್ನಪ್ಪಿದ್ದಾರೆ. ದುರಂತದ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಹಜ್ ಖಾತೆ ಸಚಿವ ರಹಿಂಖಾನ್​, ಘಟನೆ ಬಗ್ಗೆ ಮಾಹಿತಿ ಬಂದಿದೆ. ಸಚಿವ ಸಂಪುಟ ಸಭೆಯ ಬಳಿಕ ಅಧಿಕಾರಿಗಳ ಸಭೆ ನಡೆಸುತ್ತೇನೆ. ಮೃತದೇಹ ತರಲು ಎಲ್ಲಾ ಪ್ರಯತ್ನ ಶೀಘ್ರದಲ್ಲೇ ಮಾಡುತ್ತೇವೆ ಎಂದು ಹೇಳಿದ್ದಾರೆ.

ಮೆಕ್ಕಾ ಹಜ್ ಯಾತ್ರೆಗೆ ತೆರಳಿದ್ದ ಬೆಂಗಳೂರು ಮೂಲದ ಇಬ್ಬರು ಸಾವು: ಸಚಿವ ರಹಿಂಖಾನ್ ಹೇಳಿದ್ದಿಷ್ಟು
ಮೆಕ್ಕಾ ಹಜ್ ಯಾತ್ರೆಗೆ ತೆರಳಿದ್ದ ಬೆಂಗಳೂರು ಮೂಲದ ಇಬ್ಬರು ಸಾವು: ಸಚಿವ ರಹಿಂಖಾನ್ ಹೇಳಿದ್ದಿಷ್ಟು
ಪ್ರಸನ್ನ ಗಾಂವ್ಕರ್​
| Edited By: |

Updated on: Jun 20, 2024 | 2:57 PM

Share

ಬೆಂಗಳೂರು, ಜೂನ್​ 20: ಮುಸ್ಲಿಂರ ಪವಿತ್ರ ಹಜ್​ ಯಾತ್ರೆ (Hajj Pilgrimage) ವೇಳೆ ಮೆಕ್ಕಾದಲ್ಲಿ ಗರಿಷ್ಠ ಉಷ್ಣಾಂಶ 50 ಡಿಗ್ರಿ ಸೆಲ್ಸಿಯಸ್​ಗಿಂತ ಹೆಚ್ಚಿಗೆ ದಾಖಲಾದ ಪರಿಣಾಮ ಸುಮಾರು 600ಕ್ಕೂ ಯಾತ್ರಿಗಳ ಪೈಕಿ 68 ಮಂದಿ ಭಾರತೀಯರು ಸಾವನ್ನಪ್ಪಿದ್ದಾರೆ (death). ಆ ಪೈಕಿ ಬೆಂಗಳೂರು ಮೂಲದ ಇಬ್ಬರು ಯಾತ್ರಿಕರೂ ಸಹ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಬಕ್ರೀದ್​ ಹಬ್ಬ ಪ್ರಯುಕ್ತ ಹಜ್​ ಯಾತ್ರೆಗೆ ಹೋಗಿದ್ದರು ಎನ್ನಲಾಗಿದೆ.

ಬೆಂಗಳೂರು ಮೂಲದ ಇಬ್ಬರು ಯಾತ್ರಿಕರೂ ಮೆಕ್ಕಾದಿಂದ 8 ಕಿ.ಮೀ ದೂರವಿರುವಾಗಲೇ ಸಾನ್ನಪ್ಪಿದ್ದಾರೆ. ಮೃತರನ್ನು ಕೌಸರ್​ ರುಕ್ಸಾನ್​ (69) ಮತ್ತು ಮೊಹಮ್ಮದ್​ ಇಲಿಯಾಸ್​ (50) ಎಂದು ಗುರುತಿಸಲಾಗಿದೆ.

ಹಜ್ ಖಾತೆ ಸಚಿವ ರಹಿಂಖಾನ್ ಹೇಳಿದ್ದಿಷ್ಟು 

ದುರಂತದ ಬಗ್ಗೆ ಬೆಂಗಳೂರಿನಲ್ಲಿ ಹಜ್ ಖಾತೆ ಸಚಿವ ರಹಿಂಖಾನ್ ಪ್ರತಿಕ್ರಿಯಿಸಿದ್ದು, ಹಜ್ ಯಾತ್ರೆಗೆ ತೆರಳಿದ್ದ ಬೆಂಗಳೂರು ಮೂಲದ ಇಬ್ಬರು ಸಾವನ್ನಪ್ಪಿದ್ದಾರೆ. ದುರಂತದ ಬಗ್ಗೆ ಮಾಹಿತಿ ಬಂದಿದೆ. ಸಚಿವ ಸಂಪುಟ ಸಭೆಯ ಬಳಿಕ ಅಧಿಕಾರಿಗಳ ಸಭೆ ನಡೆಸುತ್ತೇನೆ. ಮೃತದೇಹ ತರಲು ಎಲ್ಲಾ ಪ್ರಯತ್ನ ಶೀಘ್ರದಲ್ಲೇ ಮಾಡುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: Hajj Pilgrimage: ಹಜ್​ ಯಾತ್ರೆಗೆ ತೆರಳಿದ್ದ 68 ಮಂದಿ ಭಾರತೀಯರು ಸಾವು

ಈ ಭಾರಿ ಹಜ್​ ಯಾತ್ರೆಗೆ ಕರ್ನಾಟಕದಿಂದ 10,300 ಮಂದಿ ತೆರಳಿದ್ದಾರೆ. ಮಹಾರಾಷ್ಟ್ರ ಹಜ್ ಕಮಿಟಿಯಿಂದ ಇನ್ನೂ ಮಾಹಿತಿ ಬರಬೇಕಿದೆ. ಕೇಂದ್ರ ಸರ್ಕಾರ, ಸ್ಥಳೀಯ ಸರ್ಕಾರದಿಂದಲೂ ಮಾಹಿತಿ ಸಂಗ್ರಹ ಮಾಡುತ್ತಿದ್ದೇವೆ. ಇಂತಹ ದುರಂತ ಇದೇ ಮೊದಲ ಬಾರಿಗೆ ಆಗಿರೋದು. ಸಮರೋಪಾದಿಯಲ್ಲಿ ನಾವು ಪರಿಹಾರ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Hajj Yatra: ಮೆಕ್ಕಾದಲ್ಲಿ 50 ಡಿಗ್ರಿ ಸೆಲ್ಸಿಯಸ್​ ದಾಟಿದ ತಾಪಮಾನ, ಹಜ್​ ಯಾತ್ರೆಗೆ ತೆರಳಿದ್ದ 550 ಮಂದಿ ಯಾತ್ರಿಕರು ಸಾವು

ಇಂಡೋನೇಷ್ಯಾ, ಇರಾನ್, ಸೆನೆಗಲ್, ಟುನೀಶಿಯಾ ಮತ್ತು ಇರಾಕ್​ ದೇಶಗಳು ಕೂಡ ಸಾವುನೋವುಗಳನ್ನು ದೃಢಪಡಿಸಿವೆ. ಆದರೂ ಅನೇಕ ಸಂದರ್ಭಗಳಲ್ಲಿ ಅಧಿಕಾರಿಗಳು ದುರಂತಕ್ಕೆ ಸ್ಪಷ್ಟ ಕಾರಣವನ್ನು ನೀಡಿಲ್ಲ. ಎಎಫ್‌ಪಿ ಲೆಕ್ಕಾಚಾರದ ಪ್ರಕಾರ ಇದುವರೆಗೆ ಒಟ್ಟು 645 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ