AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hajj Yatra: 2 ವರ್ಷಗಳ ಬಳಿಕ ಹಜ್ ಯಾತ್ರೆ ಪ್ರಕ್ರಿಯೆಗೆ ಚಾಲನೆ; ಜನವರಿ 31ರವರೆಗೆ ಆನ್​ಲೈನ್​ನಲ್ಲಿ ಅರ್ಜಿ ಸ್ವೀಕಾರ

ಈಗಾಗಲೇ ಹಜ್ ಯಾತ್ರೆಗೆ ಆನ್‍ಲೈನ್ ಅರ್ಜಿ ಸಲ್ಲಿಕೆ ಕಾರ್ಯ ಆರಂಭವಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಇರುವ ಜನರು ಆನ್‍ಲೈನ್ ಮೂಲಕವೇ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು. 2022ರ ಜನವರಿ 31ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಇರಲಿದೆ.

Hajj Yatra: 2 ವರ್ಷಗಳ ಬಳಿಕ ಹಜ್ ಯಾತ್ರೆ ಪ್ರಕ್ರಿಯೆಗೆ ಚಾಲನೆ; ಜನವರಿ 31ರವರೆಗೆ ಆನ್​ಲೈನ್​ನಲ್ಲಿ ಅರ್ಜಿ ಸ್ವೀಕಾರ
ಹಜ್ ಯಾತ್ರೆಯ ಪ್ರಕ್ರಿಯೆಗೆ ಚಾಲನೆ ನೀಡಿದ ಸಚಿವೆ ಶಶಿಕಲಾ ಜೊಲ್ಲೆ
TV9 Web
| Updated By: ಸುಷ್ಮಾ ಚಕ್ರೆ|

Updated on:Nov 10, 2021 | 6:55 PM

Share

ಬೆಂಗಳೂರು: ಕೊರೊನಾದಿಂದಾಗಿ ಎರಡು ವರ್ಷಗಳ ಕಾಲ ಸ್ಥಗಿತಗೊಂಡಿದ್ದ ಹಜ್ ಯಾತ್ರೆಯ (Haj Yatra) ಪ್ರಕ್ರಿಯೆಗೆ ಇಂದು ಬೆಂಗಳೂರಿನ ಹಜ್ ಭವನದಲ್ಲಿ ಚಾಲನೆ ನೀಡಲಾಗಿದೆ. ಹಜ್ ಯಾತ್ರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸ್ವೀಕಾರ ಪ್ರಕ್ರಿಯೆಗೆ ಹಜ್ ಖಾತೆಯ ಸಚಿವೆ ಶಶಿಕಲಾ ಜೊಲ್ಲೆ (Shashikala Jolle) ಇಂದು ಅಧಿಕೃತ ಚಾಲನೆ ನೀಡಿದರು. 2022ರ ಜನವರಿ ಅಂತ್ಯವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸ್ವೀಕಾರ ಮಾಡಲಾಗುವುದು.

ಸಿಎಂ ಸಮ್ಮುಖದಲ್ಲಿ ಖುರ್ರಾ ನಡೆಸಿ, 2022ರ ಜುಲೈನಲ್ಲಿ ಹಜ್ ಯಾತ್ರೆ ಅಯೋಜನೆ ಮಾಡಲಾಗುವುದು. ಹಜ್ ಯಾತ್ರೆಯ ಆನ್‍ಲೈನ್ ಅರ್ಜಿಗಳ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ, ಹಜ್ ಮುಸ್ಲಿಂ ಸಮುದಾಯದ ಪ್ರಮುಖ ಧಾರ್ಮಿಕ ಯಾತ್ರೆಯಾಗಿದೆ. ಕೊರೊನಾದಿಂದ 2 ವರ್ಷಗಳಿಂದ ಈ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿರುವುದರಿಂದ 2022ರಲ್ಲಿ ಹಜ್ ಯಾತ್ರೆಗೆ ಅವಕಾಶ ನೀಡಲು ಆನ್​ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ ಎಂದಿದ್ದಾರೆ.

ಈಗಾಗಲೇ ಹಜ್ ಯಾತ್ರೆಗೆ ಆನ್‍ಲೈನ್ ಅರ್ಜಿ ಸಲ್ಲಿಕೆ ಕಾರ್ಯ ಆರಂಭವಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಇರುವ ಜನರು ಆನ್‍ಲೈನ್ ಮೂಲಕವೇ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು. 2022ರ ಜನವರಿ 31ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಇರಲಿದೆ. ಮುಖ್ಯಮಂತ್ರಿ ಅವರ ಸಮ್ಮುಖದಲ್ಲಿ ಖುರ್ರಾ(ಲಾಟರಿ) ನಡೆಸಿ, ಜುಲೈ 2022 ರಲ್ಲಿ ಹಜ್ ಯಾತ್ರೆಯನ್ನು ಅಯೋಜಿಸಲಾಗುವುದು.

ಇದನ್ನೂ ಓದಿ: Haj 2021: ಹಜ್​ ಯಾತ್ರೆಗೆ ಸಲ್ಲಿಸಿದ್ದ ಎಲ್ಲ ಅರ್ಜಿ ರದ್ದು; ಭಾರತೀಯ ಹಜ್​ ಕಮಿಟಿಯಿಂದ ಮಾಹಿತಿ ಪ್ರಕಟ

Hajj 2021: ಪವಿತ್ರ ಹಜ್ ಯಾತ್ರೆಗೆ ವಿದೇಶಿಯರಿಗಿಲ್ಲ ಅವಕಾಶ, ಸ್ಥಳೀಯ 60 ಸಾವಿರ ಯಾತ್ರಾರ್ಥಿಗಳಿಗಷ್ಟೇ ದರ್ಶನ ಭಾಗ್ಯ

Published On - 6:53 pm, Wed, 10 November 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ