AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಬೈಕ್​ ಅಪಘಾತದಿಂದ ಹೊರ ಬಿತ್ತು ಲೈಂಗಿಕ ಕಿರುಕುಳ ಪ್ರಕರಣ!

ಯುವತಿಯನ್ನು ಹಳೇ ಹುಬ್ಬಳ್ಳಿಯ ದುರ್ಗದ ಬೈಲ್​​ಗೆ ಬಿಡುವ ಬದಲು ಕಾರವಾರ ರಸ್ತೆ ಕಡೆಗೆ ಕರೆದುಕೊಂಡು ಹೋಗಿದ್ದ.

ಹುಬ್ಬಳ್ಳಿ: ಬೈಕ್​ ಅಪಘಾತದಿಂದ ಹೊರ ಬಿತ್ತು ಲೈಂಗಿಕ ಕಿರುಕುಳ ಪ್ರಕರಣ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 13, 2020 | 7:02 PM

Share

ಹುಬ್ಬಳ್ಳಿ: ಡ್ರಾಪ್ ಕೊಡುವ ನೆಪದಲ್ಲಿ ಪರಿಚಯಸ್ಥ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಹುಬ್ಬಳ್ಳಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಹುಬ್ಬಳ್ಳಿ ಹೊರವಲಯದ ಕಾರವಾರ ರಸ್ತೆಯ ಹೇಸಿಗೆ ಮಡ್ಡಿ ಬಳಿ ಯುವತಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ನಂತರ ಯುವತಿಯನ್ನು ವಾಪಾಸು ಕರೆದುಕೊಂಡು ಬರುವ ವೇಳೆ ಬೈಕ್ ಅಪಘಾತ ಆಗಿದೆ. ಈ ವೇಳೆ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆಗ ಲೈಂಗಿಕ ಕಿರುಕುಳ ಬೆಳಕಿಗೆ ಬಂದಿದೆ.

ನ.30ರಂದು ಮಾವನೂರ ಗ್ರಾಮಕ್ಕೆ ತೆರಳಲೆಂದು ಹುಬ್ಬಳ್ಳಿಯ ಬಾಸಲ್ ಮಿಶನ್ ಚರ್ಚ್​​ ಬಳಿ ಯುವತಿ ನಿಂತಿದ್ದಳು. ಈ ವೇಳೆ ಬೈಕ್​​ನಲ್ಲಿ ಆಗಮಿಸಿದ ಮಲ್ಲಿಕಜಾನ್ ಬಗಡಗೇರಿ ಹಾಗೂ ಆಸೀಫ್ ಡ್ರಾಪ್ ಕೊಡುವುದಾಗಿ ಬೈಕ್​ನಲ್ಲಿ ಕರೆದುಕೊಂಡು ಹೋಗಿದ್ದರು. ಆಸೀಫ್​ ಬೇರೆ ಬೈಕ್​ ತರುತ್ತೇನೆಂದು ಹೋಗಿದ್ದ. ಈ ವೇಳೆ ಮಲ್ಲಿಕಜಾನ್​ ಯುವತಿಯನ್ನು ಹಳೇ ಹುಬ್ಬಳ್ಳಿಯ ದುರ್ಗದ ಬೈಲ್​​ಗೆ ಬಿಡುವ ಬದಲು ಕಾರವಾರ ರಸ್ತೆ ಕಡೆಗೆ ಕರೆದುಕೊಂಡು ಹೋಗಿದ್ದ.

ಮಲ್ಲಿಕಜಾನ್ ಯುವತಿಯನ್ನು ಹೇಸಿಗೆ ಮಡ್ಡಿ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದ. ನಂತರ ಯುವತಿಯನ್ನು ಮರಳಿ ಕರೆದುಕೊಂಡು ಬರುವಾಗ ಆಕೆ ಆಯತಪ್ಪಿ ಬೈಕ್​ನಿಂದ ಬಿದ್ದಿದ್ದಳು. ನಂತರ ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

ಹುಬ್ಬಳ್ಳಿ ತಾಲೂಕಿನ ಮಾವನೂರ ಗ್ರಾಮದ ಮಲ್ಲಿಕಜಾನ್ ಬಗಡಗೇರಯನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನೀಡಿದ ಬಗ್ಗೆ ಪ್ರಕರಣ ದಾಖಲು ಮಾಡಿದ್ದಾರೆ.

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಮಂಗಳೂರು ವಿವಿ ಪ್ರೊ. ಅರಬಿ ವಜಾ, ವರದಿ ಮುಚ್ಚಿಟ್ಟ ಖಾನ್ ವಿರುದ್ಧ ದೂರು

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!