AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕಿ ಮೇಲೆ ಅತ್ಯಾಚಾರ: ಸಹಾಯ ಮಾಡಿದ್ದ ಆರೋಪಿ ಸ್ನೇಹಿತನಿಗೂ ಶಿಕ್ಷೆ ವಿಧಿಸಿದ ಕೋರ್ಟ್​

ಯುವಕರು ಸ್ನೇಹಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾರೆ. ಸ್ನೇಹ ಅಂತಾ ಬಂದಾಗ ಸಹಾಯ ಮಾಡಲು ಹಿಂಜರಿಯಲ್ಲ. ಆದರೆ ಸ್ನೇಹಿತರಿಗೆ ಸಹಾಯ ಮಾಡುವುದಕ್ಕೂ ಮುಂಚೆ ಒಮ್ಮೆ ಯೋಚಿಸಿ. ಏಕೆಂದರೆ ಸ್ನೇಹಿತನಿಗೆ ಸಹಾಯ ಮಾಡಿದ್ದಕ್ಕೆ ಜೈಲು ಶಿಕ್ಷೆ ಅನುಭವಿಸುವಂತಾಗಿದೆ. ಇಂತಹದೊಂದು ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ನಡೆದಿದೆ.

ಬಾಲಕಿ ಮೇಲೆ ಅತ್ಯಾಚಾರ: ಸಹಾಯ ಮಾಡಿದ್ದ ಆರೋಪಿ ಸ್ನೇಹಿತನಿಗೂ ಶಿಕ್ಷೆ ವಿಧಿಸಿದ ಕೋರ್ಟ್​
ಬಾಲಕಿ ಮೇಲೆ ಅತ್ಯಾಚಾರ: ಸಹಾಯ ಮಾಡಿದ್ದ ಆರೋಪಿ ಸ್ನೇಹಿತನಿಗೂ ಶಿಕ್ಷೆ ವಿಧಿಸಿದ ಕೋರ್ಟ್​
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Dec 06, 2024 | 9:56 PM

Share

ದಾವಣಗೆರೆ, ಡಿಸೆಂಬರ್​ 06: ಅಪ್ರಾಪ್ತ ಬಾಲಕಿ ಅಪರಹಣ ಹಾಗೂ ಅತ್ಯಾಚಾರಕ್ಕೆ ಸಹಕರಿಸಿದ ಪ್ರಮುಖ ಆರೋಪಿಯ ಸ್ನೇಹಿತನಿಗೆ (friend) ಮೂರು ವರ್ಷ ಜೈಲು ಶಿಕ್ಷೆ ಹಾಗೂ 60 ಸಾವಿರ ರೂ. ದಂಡವನ್ನು ಕೋರ್ಟ್ ವಿಧಿಸಿದೆ. ಜಿಲ್ಲೆಯ ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2021 ಡಿಸೆಂಬರ್ 4ರಂದು ಘಟನೆ ನಡೆದಿತ್ತು.

ಪ್ರಮುಖ ಆರೋಪಿಯಿಂದ ಬಾಲಕಿಯನ್ನು ಅಪಹರಣ ಮಾಡಲಾಗಿದೆ. ಬಳಿಕ ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ಮಾಡಲಾಗಿದೆ. ಈ ಅತ್ಯಾಚಾರ ನಡೆಸಲು ಸ್ನೇಹಿತನಿಗೆ ಸಹಕಾರ ನೀಡಿದ ಆರೋಪಿಗೆ ಇದೀಗ ದಾವಣಗೆರೆ ಜಿಲ್ಲಾ ಮತ್ತು ಸತ್ರ ಎಫ್​ಟಿಎಸ್​ಸಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

ಇದನ್ನೂ ಓದಿ: ವಿಜಯಪುರದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಐವರು ದಾರುಣ ಸಾವು!

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿ ಹೊನ್ನಾಳಿ ಇನ್‌ಸ್ಪೆಕ್ಟರ್ ಟಿವಿ ದೇವರಾಜ್ ನ್ಯಾಯಾಲಯಕ್ಕೆ ಆರೋಪನ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಮನಾರಾಯಣ ಹೆಗಡೆ, ಸಂತ್ರಸ್ತ ಬಾಲಕಿಗೆ ನಾಲ್ಕು ಲಕ್ಷ ರೂ. ಪರಿಹಾರ ನೀಡುವಂತೆ ತೀರ್ಪು ನೀಡಿದೆ. ಬಾಲಕಿ ಪರ ಸರ್ಕಾರಿ ವಕೀಲೆ ಸುನಂದಾ ಮಡಿವಾಳರ ವಾದ ಮಂಡನೆ ಮಾಡಿದ್ದಾರೆ.

ಪೊಲೀಸ್, ಸಿಬಿಐ ಹೆಸರು ಹೇಳಿ ಲಕ್ಷಾಂತರ ರೂ. ವಂಚನೆ

ಇನ್ನು ದಾವಣಗೆರೆಯಲ್ಲಿ ಡಿಜಿಟಲ್ ಅರೆಸ್ಟ್ ಪ್ರಕರಣಗಳು ಹೆಚ್ಚಾಗಿವೆ. ಪೊಲೀಸ್, ಐಟಿ, ಸಿಬಿಐ ಹೆಸರು ಹೇಳಿ ವಂಚಕರು ಸುಲಿಗೆ ಮಾಡುತ್ತಿರುವಂತಹ ಘಟನೆ ನಡೆದಿದೆ. ಜಿಲ್ಲೆಯಲ್ಲಿ ಓರ್ವ ವ್ಯಕ್ತಿಯಿಂದ 20 ಲಕ್ಷ ರೂ., ಇನ್ನೊಬ್ಬ ಹರಿಹರದ ಇಂಜಿನಿಯರ್​ನಿಂದ 3 ಲಕ್ಷ ರೂ. ವಂಚಿಸಲಾಗಿದೆ.

ನಾನು ಆದಾಯ ತೆರಿಗೆ ಕಚೇರಿಯಿಂದ, ಇಡಿ ಕಚೇರಿಯಿಂದ ಎಂದು ಹೇಳಿ ಹಿಂದಿ, ಇಂಗ್ಲಿಷ್​ ನಲ್ಲಿ ಮಾತಾಡಿ ಅವರ ಖಾತೆಗೆಗಳಿಗೆ ವಂಚಕರು ಹಣ ಹಾಕಿಸಿಕೊಳ್ಳುತ್ತಿದ್ದಾರೆ. ಪೊಲೀಸ್, ಐಟಿ, ಇಡಿ ಸೇರಿದಂತೆ ಯಾರು ಕೂಡ ಪೋನ್ ಮಾಡಿ ಹಣಕ್ಕೆ ಬೇಡಿಕೆ ಇಡಲ್ಲ. ಅಂತಹ ವ್ಯಕ್ತಿಗಳ‌‌ ಖಾತೆಗೆ ಹಣ ಹಾಕಬೇಡಿ ಎಂದು ಸಾರ್ವಜನಿಕರಿಗೆ ದಾವಣಗೆರೆ ಎಸ್​ಪಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ ದಂಧೆ: ಬರೋಬ್ಬರಿ 1.5 ಮಾಂಸ ಪತ್ತೆ!

ಯಾರೇ ಫೋನ್ ಮೂಲಕ ಹಣ ಕೇಳಿದರೆ ಅದರ ಹಿಂದೆ ವಂಚನೆ ಇರುತ್ತದೆ ಎಂಬುದನ್ನ ಅರಿಯಬೇಕು. ಮೇಲಾಗಿ ಇಂತಹ ವಂಚನೆಗಳಾದರೆ ಭಯಗೊಳ್ಳದೆ ದಾವಣಗೆರೆ ವಿದ್ಯಾನಗರದಲ್ಲಿ ಇರುವ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿ ಎಂದಿದ್ದಾರೆ. ಆದರೆ ವಂಚನೆಗೊಳಗಾದವರು ದೂರು ನೀಡಲು ಹಿಂದೇಟು ಹಾಕುತ್ತಿದ್ದಾರೆ. ಸಾರ್ವಜನಿಕರು ಇಂತಹ ಫೋನ್ ಕರೆಗಳನ್ನ ನಂಬಿ ಹಣ ಹಾಕಬೇಡಿ ಎಂದಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ