AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರೀಶ್ ಪೂಂಜಾ ವಿರುದ್ಧ ಕೇಸ್​: ಬೆಂಗಳೂರಿನತ್ತ ಹೊರಟ ಶಾಸಕ, ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಸಾಧ್ಯತೆ

ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ನಿನ್ನೆ ಠಾಣಾ ಜಾಮೀನಿನ ಮೇಲೆ ಪೂಂಜಾ ಬಿಡುಗಡೆ ಮಾಡಲಾಗಿತ್ತು. ಮತ್ತೆ ವಿಚಾರಣೆಗೆ ಹಾಜರಾಗಲು ಪೊಲೀಸರು ನೋಟಿಸ್​ ಕೊಟ್ಟಿದ್ದರು. ಹೀಗಾಗಿ ನೋಟಿಸ್​ ಪ್ರಶ್ನಿಸಿ ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಕೆ ಸಾಧ್ಯತೆ ಇದೆ. ಈ ಹಿನ್ನೆಲೆ ಇದೀಗ ಹರೀಶ್ ಪೂಂಜಾ ಬೆಂಗಳೂರಿನತ್ತ ಹೊರಟಿದ್ದಾರೆ.  

ಹರೀಶ್ ಪೂಂಜಾ ವಿರುದ್ಧ ಕೇಸ್​: ಬೆಂಗಳೂರಿನತ್ತ ಹೊರಟ ಶಾಸಕ, ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಸಾಧ್ಯತೆ
ಹರೀಶ್ ಪೂಂಜಾ ವಿರುದ್ಧ ಕೇಸ್​: ಬೆಂಗಳೂರಿನತ್ತ ಹೊರಟ ಶಾಸಕ, ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಸಾಧ್ಯತೆ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: May 23, 2024 | 3:10 PM

Share

ಬೆಂಗಳೂರು, ಮೇ 23: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ (Harish Poonja) ಮೇಲೆ ಮತ್ತೆ ಎಫ್.ಐ‌.ಆರ್ ಆಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 353, 504ರಡಿ ಹರೀಶ್ ಪೂಂಜಾ ವಿರುದ್ಧ ಕರ್ತವ್ಯಕ್ಕೆ ಅಡ್ಡಿ ಮತ್ತು ಅವಾಚ್ಯ ಶಬ್ದಗಳಿಂದ ನಿಂದನೆ ಅಂತಾ ದೂರು ದಾಖಲಾಗಿದೆ‌. ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಹರೀಶ್ ಪೂಂಜಾ ನಿವಾಸದ ಬಳಿ ಹೈಡ್ರಾಮಾಮೇ ನಡೆದಿತ್ತು. ಬಂಧಿಸಲು ಆಗಮಿಸಿದ್ದ ಪೊಲೀಸರು ಕೊನೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಿ ತೆರಳಿದ್ದರು. ಇದೀಗ ಬೆಂಗಳೂರಿನತ್ತ ಹೊರಟಿರುವ ಹರೀಶ್ ಪೂಂಜಾ ಕೇಸ್​ ರದ್ದು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ನಿನ್ನೆ ಠಾಣಾ ಜಾಮೀನಿನ ಮೇಲೆ ಪೂಂಜಾ ಬಿಡುಗಡೆ ಮಾಡಲಾಗಿತ್ತು. ಮತ್ತೆ ವಿಚಾರಣೆಗೆ ಹಾಜರಾಗಲು ಪೊಲೀಸರು ನೋಟಿಸ್​ ಕೊಟ್ಟಿದ್ದರು. ಹೀಗಾಗಿ ನೋಟಿಸ್​ ಪ್ರಶ್ನಿಸಿ ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಕೆ ಸಾಧ್ಯತೆ ಇದೆ.

ಇದನ್ನೂ ಓದಿ: Harish Poonja: ಹೈಡ್ರಾಮಾಕ್ಕೆ ತೆರೆ: ಬಂಧಿಸದೆ ವಾಪಸಾದ ಪೊಲೀಸರು, ಹರೀಶ್ ಪೂಂಜಾ ಹೇಳಿದ್ದಿಷ್ಟು

ನಿನ್ನೆ ಇಡೀ ದಿನ ಹೈಡ್ರಾಮಾವೇ ನಡೆಯಿತು. ಪೊಲೀಸಿರುವ ಧಮ್ಕಿ ಹಾಕಿದ ಆರೋಪದಡಿ 2 FIR ದಾಖಲಿಸಿದ್ದ ಪೊಲೀಸರು ಹರೀಶ್ ಪೂಂಜಾ ಬಂಧಿಸಲು ನಿವಾಸಕ್ಕೆ ಬಂದಿದ್ದರು. ಆದರೆ ಇಡೀ ದಿನ ಬಿಜೆಪಿ ಕಾರ್ಯಕರ್ತರು, ಬೆಂಬಲಿಗರ ಪ್ರತಿಭಟನೆ ಹೈಡ್ರಾಮಾ ನಡೆದಿತ್ತು. ಕೊನೆಗೆ ಸಂಜೆ ನಂತರ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು.

ಪೂಂಜಾಗೆ ಶಾಸಕರಾದ ಸುನೀಲ್ ಕುಮಾರ್, ವೇದವ್ಯಾಸ ಕಾಮತ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲಾ ಸೇರಿದಂತೆ ಬಿಜೆಪಿ ನಾಯಕರು ವಕೀಲರು ಸಾಥ್ ನೀಡಿದ್ದರು. ಪೊಲೀಸರು ಸರ್ಕಾರದ ಕೈಗೊಂಬೆಯಾಗಿದ್ದಾರೆ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ತನ್ನನ್ನು ಬಂಧಿಸುವುದು ಕಾನೂನುಬಾಹಿರ ಅಂತ ಗೊತ್ತಿದ್ದ ಪೊಲೀಸರು ಮೇಲಿನವರ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದರು: ಹರೀಶ್ ಪೂಂಜಾ

ಇನ್ನು, ವಿಚಾರಣೆಗೆ ಹಾಜರಾಗಿದ್ದ ಹರೀಶ್ ಪೂಂಜಾಗೆ ಇವತ್ತು ಮಧ್ಯಾಹ್ನ 12ಗಂಟೆಗೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಬೆಳ್ತಂಗಡಿ ಠಾಣೆ ಇನ್ಸ್‌ಪೆಕ್ಟರ್‌ ನೋಟಿಸ್ ನೀಡಿದ್ದರು. ಆದರೆ ಸಾಧ್ಯವಿಲ್ಲ ಅಂತಾ ಮೌಖಿಕವಾಗಿ ತಿಳಿಸಿ ಬಂದ್ದರು. ಅಷ್ಟೇ ಅಲ್ಲ ದಕ್ಷಿಣ ಕನ್ನಡ ಎಸ್‌ಪಿ ಬಗ್ಗೆ ಮಾತನಾಡಿದ್ದಕ್ಕೆ ಸಮರ್ಥಿಸಿಕೊಂಡಿದ್ದರು. ಈ ವೇಳೆ ಮಾತನಾಡಿದ ಶಾಸಕ ಸುನೀಲ್ ಕುಮಾರ್ ಈ ವಿಚಾರವನ್ನ ಇಲ್ಲಿಗೆ ಬಿಡಲ್ಲ ಎಂದು ಹೇಳಿದ್ದರು.

ಪ್ರಕರಣದ ಹಿನ್ನೆಲೆ

ಈ ಪ್ರಕರಣದ ಹಿನ್ನೆಲೆ ನೋಡೋದಾದ್ರೆ ಹರೀಶ್ ಪೂಂಜಾ ಬೆಂಬಲಿಗರು ಮೆಲಂತಬೆಟ್ಟುವಿನಲ್ಲಿ ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಸುತ್ತಿದ್ದರು ಅಂತಾ ಆರೋಪಿಸಿ ಬೆಳ್ತಂಗಡಿ ತಹಶಿಲ್ದಾರ್ ದಾಳಿ ಮಾಡಿದ್ದರು. ಸ್ಫೋಟಕ ಬಳಸಿ ಅಕ್ರಮ ಗಣಿಗಾರಿಕೆ ಮಾಡಲಾಗುತ್ತಿದೆ ಎಂದು ಮೇ 18 ರಂದು ದೂರು ನೀಡಿದ್ದರು.

ಶಾಸಕ ಹರೀಶ್ ಪೂಂಜಾ ಆಪ್ತರಾದ ಪ್ರಮೋದ್ ಉಜಿರೆ ಮತ್ತು ಶಶಿರಾಜ್ ಶೆಟ್ಟಿ ಮೇಲೆ ದೂರು ದಾಖಲಾಗಿತ್ತು‌. ಬಿಜೆಪಿ ತಾಲೂಕು ಯುವಮೋರ್ಚಾ ಅಧ್ಯಕ್ಷ, ರೌಡಿಶೀಟರ್ ಆಗಿದ್ದ ಶಶಿರಾಜ್ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದರು. ಈ ವಿಚಾರ ತಿಳಿದ ಪೂಂಜಾ ಪೊಲೀಸರ ವಿರುದ್ಧ ಕೆಂಡಮಂಡಲರಾಗಿದ್ದರು. ಮದ್ಯರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ್ದರು. ಈ ವೇಳೆ ಪಿಎಸ್‌ಐಗೆ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ