AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರೀಶ್ ಪೂಂಜಾ ವಿರುದ್ಧ ಕೇಸ್​: ಬೆಂಗಳೂರಿನತ್ತ ಹೊರಟ ಶಾಸಕ, ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಸಾಧ್ಯತೆ

ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ನಿನ್ನೆ ಠಾಣಾ ಜಾಮೀನಿನ ಮೇಲೆ ಪೂಂಜಾ ಬಿಡುಗಡೆ ಮಾಡಲಾಗಿತ್ತು. ಮತ್ತೆ ವಿಚಾರಣೆಗೆ ಹಾಜರಾಗಲು ಪೊಲೀಸರು ನೋಟಿಸ್​ ಕೊಟ್ಟಿದ್ದರು. ಹೀಗಾಗಿ ನೋಟಿಸ್​ ಪ್ರಶ್ನಿಸಿ ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಕೆ ಸಾಧ್ಯತೆ ಇದೆ. ಈ ಹಿನ್ನೆಲೆ ಇದೀಗ ಹರೀಶ್ ಪೂಂಜಾ ಬೆಂಗಳೂರಿನತ್ತ ಹೊರಟಿದ್ದಾರೆ.  

ಹರೀಶ್ ಪೂಂಜಾ ವಿರುದ್ಧ ಕೇಸ್​: ಬೆಂಗಳೂರಿನತ್ತ ಹೊರಟ ಶಾಸಕ, ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಸಾಧ್ಯತೆ
ಹರೀಶ್ ಪೂಂಜಾ ವಿರುದ್ಧ ಕೇಸ್​: ಬೆಂಗಳೂರಿನತ್ತ ಹೊರಟ ಶಾಸಕ, ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಸಾಧ್ಯತೆ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: May 23, 2024 | 3:10 PM

Share

ಬೆಂಗಳೂರು, ಮೇ 23: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ (Harish Poonja) ಮೇಲೆ ಮತ್ತೆ ಎಫ್.ಐ‌.ಆರ್ ಆಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 353, 504ರಡಿ ಹರೀಶ್ ಪೂಂಜಾ ವಿರುದ್ಧ ಕರ್ತವ್ಯಕ್ಕೆ ಅಡ್ಡಿ ಮತ್ತು ಅವಾಚ್ಯ ಶಬ್ದಗಳಿಂದ ನಿಂದನೆ ಅಂತಾ ದೂರು ದಾಖಲಾಗಿದೆ‌. ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಹರೀಶ್ ಪೂಂಜಾ ನಿವಾಸದ ಬಳಿ ಹೈಡ್ರಾಮಾಮೇ ನಡೆದಿತ್ತು. ಬಂಧಿಸಲು ಆಗಮಿಸಿದ್ದ ಪೊಲೀಸರು ಕೊನೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಿ ತೆರಳಿದ್ದರು. ಇದೀಗ ಬೆಂಗಳೂರಿನತ್ತ ಹೊರಟಿರುವ ಹರೀಶ್ ಪೂಂಜಾ ಕೇಸ್​ ರದ್ದು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ನಿನ್ನೆ ಠಾಣಾ ಜಾಮೀನಿನ ಮೇಲೆ ಪೂಂಜಾ ಬಿಡುಗಡೆ ಮಾಡಲಾಗಿತ್ತು. ಮತ್ತೆ ವಿಚಾರಣೆಗೆ ಹಾಜರಾಗಲು ಪೊಲೀಸರು ನೋಟಿಸ್​ ಕೊಟ್ಟಿದ್ದರು. ಹೀಗಾಗಿ ನೋಟಿಸ್​ ಪ್ರಶ್ನಿಸಿ ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಕೆ ಸಾಧ್ಯತೆ ಇದೆ.

ಇದನ್ನೂ ಓದಿ: Harish Poonja: ಹೈಡ್ರಾಮಾಕ್ಕೆ ತೆರೆ: ಬಂಧಿಸದೆ ವಾಪಸಾದ ಪೊಲೀಸರು, ಹರೀಶ್ ಪೂಂಜಾ ಹೇಳಿದ್ದಿಷ್ಟು

ನಿನ್ನೆ ಇಡೀ ದಿನ ಹೈಡ್ರಾಮಾವೇ ನಡೆಯಿತು. ಪೊಲೀಸಿರುವ ಧಮ್ಕಿ ಹಾಕಿದ ಆರೋಪದಡಿ 2 FIR ದಾಖಲಿಸಿದ್ದ ಪೊಲೀಸರು ಹರೀಶ್ ಪೂಂಜಾ ಬಂಧಿಸಲು ನಿವಾಸಕ್ಕೆ ಬಂದಿದ್ದರು. ಆದರೆ ಇಡೀ ದಿನ ಬಿಜೆಪಿ ಕಾರ್ಯಕರ್ತರು, ಬೆಂಬಲಿಗರ ಪ್ರತಿಭಟನೆ ಹೈಡ್ರಾಮಾ ನಡೆದಿತ್ತು. ಕೊನೆಗೆ ಸಂಜೆ ನಂತರ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು.

ಪೂಂಜಾಗೆ ಶಾಸಕರಾದ ಸುನೀಲ್ ಕುಮಾರ್, ವೇದವ್ಯಾಸ ಕಾಮತ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲಾ ಸೇರಿದಂತೆ ಬಿಜೆಪಿ ನಾಯಕರು ವಕೀಲರು ಸಾಥ್ ನೀಡಿದ್ದರು. ಪೊಲೀಸರು ಸರ್ಕಾರದ ಕೈಗೊಂಬೆಯಾಗಿದ್ದಾರೆ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ತನ್ನನ್ನು ಬಂಧಿಸುವುದು ಕಾನೂನುಬಾಹಿರ ಅಂತ ಗೊತ್ತಿದ್ದ ಪೊಲೀಸರು ಮೇಲಿನವರ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದರು: ಹರೀಶ್ ಪೂಂಜಾ

ಇನ್ನು, ವಿಚಾರಣೆಗೆ ಹಾಜರಾಗಿದ್ದ ಹರೀಶ್ ಪೂಂಜಾಗೆ ಇವತ್ತು ಮಧ್ಯಾಹ್ನ 12ಗಂಟೆಗೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಬೆಳ್ತಂಗಡಿ ಠಾಣೆ ಇನ್ಸ್‌ಪೆಕ್ಟರ್‌ ನೋಟಿಸ್ ನೀಡಿದ್ದರು. ಆದರೆ ಸಾಧ್ಯವಿಲ್ಲ ಅಂತಾ ಮೌಖಿಕವಾಗಿ ತಿಳಿಸಿ ಬಂದ್ದರು. ಅಷ್ಟೇ ಅಲ್ಲ ದಕ್ಷಿಣ ಕನ್ನಡ ಎಸ್‌ಪಿ ಬಗ್ಗೆ ಮಾತನಾಡಿದ್ದಕ್ಕೆ ಸಮರ್ಥಿಸಿಕೊಂಡಿದ್ದರು. ಈ ವೇಳೆ ಮಾತನಾಡಿದ ಶಾಸಕ ಸುನೀಲ್ ಕುಮಾರ್ ಈ ವಿಚಾರವನ್ನ ಇಲ್ಲಿಗೆ ಬಿಡಲ್ಲ ಎಂದು ಹೇಳಿದ್ದರು.

ಪ್ರಕರಣದ ಹಿನ್ನೆಲೆ

ಈ ಪ್ರಕರಣದ ಹಿನ್ನೆಲೆ ನೋಡೋದಾದ್ರೆ ಹರೀಶ್ ಪೂಂಜಾ ಬೆಂಬಲಿಗರು ಮೆಲಂತಬೆಟ್ಟುವಿನಲ್ಲಿ ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಸುತ್ತಿದ್ದರು ಅಂತಾ ಆರೋಪಿಸಿ ಬೆಳ್ತಂಗಡಿ ತಹಶಿಲ್ದಾರ್ ದಾಳಿ ಮಾಡಿದ್ದರು. ಸ್ಫೋಟಕ ಬಳಸಿ ಅಕ್ರಮ ಗಣಿಗಾರಿಕೆ ಮಾಡಲಾಗುತ್ತಿದೆ ಎಂದು ಮೇ 18 ರಂದು ದೂರು ನೀಡಿದ್ದರು.

ಶಾಸಕ ಹರೀಶ್ ಪೂಂಜಾ ಆಪ್ತರಾದ ಪ್ರಮೋದ್ ಉಜಿರೆ ಮತ್ತು ಶಶಿರಾಜ್ ಶೆಟ್ಟಿ ಮೇಲೆ ದೂರು ದಾಖಲಾಗಿತ್ತು‌. ಬಿಜೆಪಿ ತಾಲೂಕು ಯುವಮೋರ್ಚಾ ಅಧ್ಯಕ್ಷ, ರೌಡಿಶೀಟರ್ ಆಗಿದ್ದ ಶಶಿರಾಜ್ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದರು. ಈ ವಿಚಾರ ತಿಳಿದ ಪೂಂಜಾ ಪೊಲೀಸರ ವಿರುದ್ಧ ಕೆಂಡಮಂಡಲರಾಗಿದ್ದರು. ಮದ್ಯರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ್ದರು. ಈ ವೇಳೆ ಪಿಎಸ್‌ಐಗೆ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ