Fire ಹೊಸೂರು ಗ್ರಾಮದಲ್ಲಿ ಕಡಲೆ ಬಣವೆಗೆ ಆಕಸ್ಮಿಕ ಬೆಂಕಿ: 20 ಎಕರೆಯಲ್ಲಿ ಬೆಳೆದಿದ್ದ ಬೆಳೆ ಸುಟ್ಟು ಭಸ್ಮ
ಜಿಲ್ಲೆಯ ಚಿತ್ತಾಪುರ ತಾಲೂಕಿನ ಹೊಸೂರು ಗ್ರಾಮದಲ್ಲಿ ಕಡಲೆ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿರುವ ಘಟನೆ ವರದಿಯಾಗಿದೆ. 20 ಎಕರೆಯಲ್ಲಿ ಬೆಳೆದಿದ್ದ ಕಡಲೆ ಬೆಳೆ ಸುಟ್ಟು ಭಸ್ಮವಾಗಿದೆ.

ಕಡಲೆ ಬಣವೆಗೆ ಆಕಸ್ಮಿಕ ಬೆಂಕಿ
ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಹೊಸೂರು ಗ್ರಾಮದಲ್ಲಿ ಕಡಲೆ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿರುವ ಘಟನೆ ವರದಿಯಾಗಿದೆ. 20 ಎಕರೆಯಲ್ಲಿ ಬೆಳೆದಿದ್ದ ಕಡಲೆ ಬೆಳೆ ಸುಟ್ಟು ಭಸ್ಮವಾಗಿದೆ. Fire
ಭೀಮಣ್ಣ ಸೀಬಾ ಎಂಬ ರೈತನಿಗೆ ಸೇರಿದ ಕಡಲೆ ಬೆಳೆ ಬೆಂಕಿಗಾಹುತಿಯಾಗಿದೆ. ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಕಿಡಿಗೇಡಿಗಳು ಕಡಲೆ ಬಣವೆಗೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

Suicide ಸಾಲ ಮರುಪಾವತಿಸಲು ಬ್ಯಾಂಕ್ನಿಂದ ಬಂದ ನೋಟಿಸ್ಗೆ ಹೆದರಿ ಜಮೀನಿನಲ್ಲಿ ರೈತ ಆತ್ಮಹತ್ಯೆಗೆ ಶರಣು



