AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hasanamba: ಹಾಸನಾಂಬೆ ದರ್ಶನದ ಕೊನೆಯ ದಿನ; ಹರಿದು ಬರುತ್ತಿರುವ ಭಕ್ತ ಸಾಗರ

ಹಾಸನಾಂಬೆ ದೇವಿಯ ದರ್ಶನ ಪಡೆಯಲು ಇಂದು ಕೊನೆಯ ದಿನವಾಗಿದ್ದು, ನಾಳೆ ಮಧ್ಯಾಹ್ನ 12ಕ್ಕೆ ಶಾಸ್ತ್ರೋಕ್ತವಾಗಿ ಬಾಗಿಲು ಮುಚ್ಚಲಾಗುತ್ತದೆ.

Hasanamba: ಹಾಸನಾಂಬೆ ದರ್ಶನದ ಕೊನೆಯ ದಿನ; ಹರಿದು ಬರುತ್ತಿರುವ ಭಕ್ತ ಸಾಗರ
ಹಾಸನಾಂಬೆ ದರ್ಶನದ ಕೊನೆಯ ದಿನವಾದ ಇಂದು ಹರಿದು ಬರುತ್ತಿರುವ ಭಕ್ತ ಸಾಗರ
TV9 Web
| Edited By: |

Updated on:Oct 26, 2022 | 8:01 AM

Share

ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಜಿಲ್ಲೆಯ ಹಾಸನಾಂಬೆ ದೇವಾಯಲಯದ ದೇವಿಯ ದರ್ಶನಕ್ಕೆ ಇಂದು ಕೊನೆಯ ದಿನವಾಗಿದೆ. ಇಂದು ಸಂಜೆ 4 ಗಂಟೆಯವರೆಗೂ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದ್ದು, ಬಳಿಕ ಅವಕಾಶ ಇರುವುದಿಲ್ಲ. ಮತ್ತೆ ಒಂದು ವರ್ಷ ದೇವಿಯ ದರ್ಶನಕ್ಕೆ ಭಕ್ತರು ಕಾಯಬೇಕಾಗುತ್ತದೆ. ಇಂದು ಸಂಜೆವರೆಗೆ ದರ್ಶನ ಭಾಗ್ಯ ಸಿಗಲಿದ್ದು, ರಾತ್ರಿ ಉತ್ಸವ ನಡೆಯಲಿದೆ. ಬಳಿಕ ಮತ್ತೆ ದೇವಿಯ ದರ್ಶನಕ್ಕೆ ಅವಕಾಶ ಇರಲಿದ್ದು, ನಾಳೆ ಬೆಳಗ್ಗೆವರೆಗೆ ಅವಕಾಶ ಕಲ್ಪಿಸಲಾಗಿದೆ. ನಾಳೆ ಮಧ್ಯಾಹ್ನದ ವೇಳೆಗೆ ಜಿಲ್ಲಾಡಳಿತವು ದೇವಾಲಯದ ಬಾಗಿಲನ್ನು ಶಾಸ್ತ್ರೋಕ್ತವಾಗಿ ಮುಚ್ಚಲಿದೆ.

ಹಾಸನಾಂಬೆ ಸಾರ್ವಜನಿಕರ ದರ್ಶನಕ್ಕೆ ಇಂದು 12ನೇ ದಿನದ ಸಾರ್ವಜನಿಕ ದರ್ಶನ ಹಾಗೂ ದೇವಿಯ ದರ್ಶನದ ಕಡೆಯ ದಿನವಾಗಿರುವುದರಿಂದ ಭಕ್ತರ ಸಾಗರ ಹರಿದು ಬರುತ್ತಿದೆ. ಇಂದು ಬೆಳಗ್ಗೆ 7 ಗಂಟೆಯಿಂದ ದೇವಿಯ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಭಕ್ತರು ಬೇಗನೇ ಬಂದು ಸರಥಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಶ್ರೀದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ.

ನಿನ್ನೆ ಸೂರ್ಯ ಗ್ರಹಣ ಹಿನ್ನೆಲೆ ದೇವಲಾಯದ ಬಾಗಿಲು ಮುಚ್ಚಿತ್ತು. ಇಂದು ಮತ್ತೆ ದರ್ಶನ ಆರಂಭವಾದ ಹಿನ್ನೆಲೆ ದೀಪಾವಳಿ ಸಂಭ್ರಮದ ನಡುವೆ ಶಕ್ತಿ ದೇವತೆ ದರ್ಶನಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಇಂದು ಸಂಜೆ 4 ಗಂಟೆಯವರೆಗೂ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದ್ದು, ಬಳಿಕ ರಾತ್ರಿ 10 ಗಂಟೆಯವರೆಗೆ ನೈವೇದ್ಯ ಹಾಗೂ ಉತ್ಸವ ನೆರವೇರಲಿದೆ. 10 ಗಂಟೆಯಿಂದ ನಾಳೆ ಬೆಳಗ್ಗೆ 7 ಗಂಟೆಯವರೆಗೂ ಮತ್ತೆ ದೇವಿಯ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗುತ್ತಿದೆ. ನಾಳೆ ಮದ್ಯಾಹ್ನ 12 ಗಂಟೆಗೆ ಜಿಲ್ಲಾಡಳಿತವು ಶಾಸ್ತ್ರೋಕ್ತವಾಗಿ ಗರ್ಭಗುಡಿಯ ಬಾಗಿಲು ಮುಚ್ಚಲಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:01 am, Wed, 26 October 22

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?