AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hasanamba: ಹಾಸನಾಂಬೆ ದರ್ಶನದ ಕೊನೆಯ ದಿನ; ಹರಿದು ಬರುತ್ತಿರುವ ಭಕ್ತ ಸಾಗರ

ಹಾಸನಾಂಬೆ ದೇವಿಯ ದರ್ಶನ ಪಡೆಯಲು ಇಂದು ಕೊನೆಯ ದಿನವಾಗಿದ್ದು, ನಾಳೆ ಮಧ್ಯಾಹ್ನ 12ಕ್ಕೆ ಶಾಸ್ತ್ರೋಕ್ತವಾಗಿ ಬಾಗಿಲು ಮುಚ್ಚಲಾಗುತ್ತದೆ.

Hasanamba: ಹಾಸನಾಂಬೆ ದರ್ಶನದ ಕೊನೆಯ ದಿನ; ಹರಿದು ಬರುತ್ತಿರುವ ಭಕ್ತ ಸಾಗರ
ಹಾಸನಾಂಬೆ ದರ್ಶನದ ಕೊನೆಯ ದಿನವಾದ ಇಂದು ಹರಿದು ಬರುತ್ತಿರುವ ಭಕ್ತ ಸಾಗರ
TV9 Web
| Edited By: |

Updated on:Oct 26, 2022 | 8:01 AM

Share

ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಜಿಲ್ಲೆಯ ಹಾಸನಾಂಬೆ ದೇವಾಯಲಯದ ದೇವಿಯ ದರ್ಶನಕ್ಕೆ ಇಂದು ಕೊನೆಯ ದಿನವಾಗಿದೆ. ಇಂದು ಸಂಜೆ 4 ಗಂಟೆಯವರೆಗೂ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದ್ದು, ಬಳಿಕ ಅವಕಾಶ ಇರುವುದಿಲ್ಲ. ಮತ್ತೆ ಒಂದು ವರ್ಷ ದೇವಿಯ ದರ್ಶನಕ್ಕೆ ಭಕ್ತರು ಕಾಯಬೇಕಾಗುತ್ತದೆ. ಇಂದು ಸಂಜೆವರೆಗೆ ದರ್ಶನ ಭಾಗ್ಯ ಸಿಗಲಿದ್ದು, ರಾತ್ರಿ ಉತ್ಸವ ನಡೆಯಲಿದೆ. ಬಳಿಕ ಮತ್ತೆ ದೇವಿಯ ದರ್ಶನಕ್ಕೆ ಅವಕಾಶ ಇರಲಿದ್ದು, ನಾಳೆ ಬೆಳಗ್ಗೆವರೆಗೆ ಅವಕಾಶ ಕಲ್ಪಿಸಲಾಗಿದೆ. ನಾಳೆ ಮಧ್ಯಾಹ್ನದ ವೇಳೆಗೆ ಜಿಲ್ಲಾಡಳಿತವು ದೇವಾಲಯದ ಬಾಗಿಲನ್ನು ಶಾಸ್ತ್ರೋಕ್ತವಾಗಿ ಮುಚ್ಚಲಿದೆ.

ಹಾಸನಾಂಬೆ ಸಾರ್ವಜನಿಕರ ದರ್ಶನಕ್ಕೆ ಇಂದು 12ನೇ ದಿನದ ಸಾರ್ವಜನಿಕ ದರ್ಶನ ಹಾಗೂ ದೇವಿಯ ದರ್ಶನದ ಕಡೆಯ ದಿನವಾಗಿರುವುದರಿಂದ ಭಕ್ತರ ಸಾಗರ ಹರಿದು ಬರುತ್ತಿದೆ. ಇಂದು ಬೆಳಗ್ಗೆ 7 ಗಂಟೆಯಿಂದ ದೇವಿಯ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಭಕ್ತರು ಬೇಗನೇ ಬಂದು ಸರಥಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಶ್ರೀದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ.

ನಿನ್ನೆ ಸೂರ್ಯ ಗ್ರಹಣ ಹಿನ್ನೆಲೆ ದೇವಲಾಯದ ಬಾಗಿಲು ಮುಚ್ಚಿತ್ತು. ಇಂದು ಮತ್ತೆ ದರ್ಶನ ಆರಂಭವಾದ ಹಿನ್ನೆಲೆ ದೀಪಾವಳಿ ಸಂಭ್ರಮದ ನಡುವೆ ಶಕ್ತಿ ದೇವತೆ ದರ್ಶನಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಇಂದು ಸಂಜೆ 4 ಗಂಟೆಯವರೆಗೂ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದ್ದು, ಬಳಿಕ ರಾತ್ರಿ 10 ಗಂಟೆಯವರೆಗೆ ನೈವೇದ್ಯ ಹಾಗೂ ಉತ್ಸವ ನೆರವೇರಲಿದೆ. 10 ಗಂಟೆಯಿಂದ ನಾಳೆ ಬೆಳಗ್ಗೆ 7 ಗಂಟೆಯವರೆಗೂ ಮತ್ತೆ ದೇವಿಯ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗುತ್ತಿದೆ. ನಾಳೆ ಮದ್ಯಾಹ್ನ 12 ಗಂಟೆಗೆ ಜಿಲ್ಲಾಡಳಿತವು ಶಾಸ್ತ್ರೋಕ್ತವಾಗಿ ಗರ್ಭಗುಡಿಯ ಬಾಗಿಲು ಮುಚ್ಚಲಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:01 am, Wed, 26 October 22

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​