AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಜೆಡಿಎಸ್​ನ ಮತ್ತೊಂದು ವಿಕೆಟ್‌ ಪತನ, ಕಾಂಗ್ರೆಸ್​ ಸೇರೊ ಬಗ್ಗೆ ಮಾತನಾಡಿದ ಶಾಸಕನ ಆಡಿಯೋ ವೈರಲ್​

ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿದ್ದು, ರಾಜಕೀಯ ಅಖಾಡ ರಂಗೇರುತ್ತಿದೆ. ಈ ಮಧ್ಯೆ ಅರಸೀಕೆರೆ ಜೆಡಿಎಸ್​ ಶಾಸಕ‌ ಶಿವಲಿಂಗೇಗೌಡರದ್ದು ಎನ್ನಲಾದ ಆಡಿಯೋ ವೈರಲ್​ ಆಗಿದ್ದು, ರಾಜ್ಯ ರಾಜಕಾರಣದಲ್ಲಿ ಬಾರಿ ಸಂಚಲನ ಮೂಡಿಸಿದೆ.

ಹಾಸನ: ಜೆಡಿಎಸ್​ನ ಮತ್ತೊಂದು ವಿಕೆಟ್‌ ಪತನ, ಕಾಂಗ್ರೆಸ್​ ಸೇರೊ ಬಗ್ಗೆ ಮಾತನಾಡಿದ ಶಾಸಕನ ಆಡಿಯೋ ವೈರಲ್​
ಜೆಡಿಎಸ್​ ತೊರೆದು ಕಾಂಗ್ರೆಸ್​ ಸೇರುವುದರ ಬಗ್ಗೆ ಮಾತನಾಡಿದ ಶಾಸಕ ಶಿವಲಿಂಗೇಗೌಡ
TV9 Web
| Edited By: |

Updated on: Feb 09, 2023 | 9:52 AM

Share

ಹಾಸನ: ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ಅಖಾಡ ರಂಗೇರುತ್ತಿದೆ. ಕೆಲವರು ಟಿಕೆಟ್​ಗಾಗಿ ಹೋರಾಡುತ್ತಿದ್ದರೆ ಇನ್ನು ಕೆಲವರು ಕ್ಷೇತ್ರವನ್ನ ಗಟ್ಟಿಮಾಡಿಕೊಳ್ಳುವುದರಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಅರಸೀಕೆರೆ ಜೆಡಿಎಸ್​ ಶಾಸಕ‌ ಶಿವಲಿಂಗೇಗೌಡರದ್ದು ಎನ್ನಲಾದ ಆಡಿಯೋ ವೈರಲ್​ ಆಗಿದೆ. ಇದರಲ್ಲಿ ಜೆಡಿಎಸ್​ ತೊರೆದು ಕಾಂಗ್ರೆಸ್ ಸೇರೊ ಬಗ್ಗೆ ಮಾತಾಡಿದ್ದು, ನಾನು ಕಾಂಗ್ರೆಸ್ ಸೇರಿದ್ರೆ ಐವತ್ತು ಸಾವಿರ ಲೀಡಲ್ಲಿ ಗೆಲ್ತಿನಿ ಎಂದಿದ್ದಾರೆ. ಇದೀಗ ಇದು ರಾಜ್ಯ ರಾಜಕಾರಣದಲ್ಲಿ ಬಾರಿ ಸಂಚಲನ ಮೂಡಿಸಿದೆ. ರೇವಣ್ಣ ಕುಮಾರಸ್ವಾಮಿ ಹೆಸರು ಪ್ರಸ್ತಾಪ ಮಾಡದೆ ಯಾರಲ್ಲ ಯಾವನಪ್ಪ ಬಂದ್ರು ನಾ ಗೆಲ್ತಿನಿ ಎಂದಿದ್ದಾರೆ.

ಶಾಸಕ ಶಿವಲಿಂಗೇಗೌಡ ಕಳೆದ ಒಂದು ವರ್ಷದಿಂದ ಜೆಡಿಎಸ್​ನಿಂದ ಅಂತರ ಕಾಯ್ದುಕೊಂಡಿದ್ದರು. ಶಿವಲಿಂಗೇಗೌಡ ಕಾಂಗ್ರೆಸ್​ ಸೇರ್ತಾರೆ ಎಂಬ ಬಗ್ಗೆ ವದಂತಿ ಕೂಡ ಈ ಹಿಂದೆ ಹರಡಿತ್ತು. ಕೆಪಿಸಿಸಿ ಕಾರ್ಯಾದ್ಯಕ್ಷ ಧ್ರುವನಾರಾಯಣ ಕೂಡ ಶಿವಲಿಂಗೇಗೌಡ ನಮ್ಮ ಪಾರ್ಟಿ ಸೇರ್ತಾರೆ ಎಂದು ಹೇಳಿದ್ರು, ಆದರೂ ಇದುವರೆಗೆ ಸುಳಿವು ಬಿಟ್ಟು ಕೊಡದ ಶಾಸಕ ಶಿವಲಿಂಗೇಗೌಡ. ಇದೀಗ ತಾವು ಕಾಂಗ್ರೆಸ್ ಸೇರಿದ್ರೆ ದೊಡ್ಡ ಮಟ್ಟದ ಲೀಡಲ್ಲಿ ಗೆಲ್ತಿನಿ ಎನ್ನೋ ವಿಶ್ವಾಸದ ಕುರಿತು ಮಾತನಾಡಿದ್ದಾರೆ. ತಮ್ಮ ಕಾರ್ಯಕರ್ತರ ಜೊತೆ ಮಾತನಾಡುವಾಗ ಕಾಂಗ್ರೆಸ್ ಸೇರೋ ಬಗ್ಗೆ ಪ್ರಸ್ತಾಪ ಮಾಡಿದ್ದರು. ಕಳೆದ ಆರು ತಿಂಗಳಿಂದ ನಡೆಯುತ್ತಿದ್ದ ಚರ್ಚೆಗೆ ಕಡೆಗೂ ಸ್ಪಷ್ಟನೆ ಸಿಕ್ಕಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ