AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಜೆಡಿಎಸ್​ನ ಮತ್ತೊಂದು ವಿಕೆಟ್‌ ಪತನ, ಕಾಂಗ್ರೆಸ್​ ಸೇರೊ ಬಗ್ಗೆ ಮಾತನಾಡಿದ ಶಾಸಕನ ಆಡಿಯೋ ವೈರಲ್​

ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿದ್ದು, ರಾಜಕೀಯ ಅಖಾಡ ರಂಗೇರುತ್ತಿದೆ. ಈ ಮಧ್ಯೆ ಅರಸೀಕೆರೆ ಜೆಡಿಎಸ್​ ಶಾಸಕ‌ ಶಿವಲಿಂಗೇಗೌಡರದ್ದು ಎನ್ನಲಾದ ಆಡಿಯೋ ವೈರಲ್​ ಆಗಿದ್ದು, ರಾಜ್ಯ ರಾಜಕಾರಣದಲ್ಲಿ ಬಾರಿ ಸಂಚಲನ ಮೂಡಿಸಿದೆ.

ಹಾಸನ: ಜೆಡಿಎಸ್​ನ ಮತ್ತೊಂದು ವಿಕೆಟ್‌ ಪತನ, ಕಾಂಗ್ರೆಸ್​ ಸೇರೊ ಬಗ್ಗೆ ಮಾತನಾಡಿದ ಶಾಸಕನ ಆಡಿಯೋ ವೈರಲ್​
ಜೆಡಿಎಸ್​ ತೊರೆದು ಕಾಂಗ್ರೆಸ್​ ಸೇರುವುದರ ಬಗ್ಗೆ ಮಾತನಾಡಿದ ಶಾಸಕ ಶಿವಲಿಂಗೇಗೌಡ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 09, 2023 | 9:52 AM

ಹಾಸನ: ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ಅಖಾಡ ರಂಗೇರುತ್ತಿದೆ. ಕೆಲವರು ಟಿಕೆಟ್​ಗಾಗಿ ಹೋರಾಡುತ್ತಿದ್ದರೆ ಇನ್ನು ಕೆಲವರು ಕ್ಷೇತ್ರವನ್ನ ಗಟ್ಟಿಮಾಡಿಕೊಳ್ಳುವುದರಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಅರಸೀಕೆರೆ ಜೆಡಿಎಸ್​ ಶಾಸಕ‌ ಶಿವಲಿಂಗೇಗೌಡರದ್ದು ಎನ್ನಲಾದ ಆಡಿಯೋ ವೈರಲ್​ ಆಗಿದೆ. ಇದರಲ್ಲಿ ಜೆಡಿಎಸ್​ ತೊರೆದು ಕಾಂಗ್ರೆಸ್ ಸೇರೊ ಬಗ್ಗೆ ಮಾತಾಡಿದ್ದು, ನಾನು ಕಾಂಗ್ರೆಸ್ ಸೇರಿದ್ರೆ ಐವತ್ತು ಸಾವಿರ ಲೀಡಲ್ಲಿ ಗೆಲ್ತಿನಿ ಎಂದಿದ್ದಾರೆ. ಇದೀಗ ಇದು ರಾಜ್ಯ ರಾಜಕಾರಣದಲ್ಲಿ ಬಾರಿ ಸಂಚಲನ ಮೂಡಿಸಿದೆ. ರೇವಣ್ಣ ಕುಮಾರಸ್ವಾಮಿ ಹೆಸರು ಪ್ರಸ್ತಾಪ ಮಾಡದೆ ಯಾರಲ್ಲ ಯಾವನಪ್ಪ ಬಂದ್ರು ನಾ ಗೆಲ್ತಿನಿ ಎಂದಿದ್ದಾರೆ.

ಶಾಸಕ ಶಿವಲಿಂಗೇಗೌಡ ಕಳೆದ ಒಂದು ವರ್ಷದಿಂದ ಜೆಡಿಎಸ್​ನಿಂದ ಅಂತರ ಕಾಯ್ದುಕೊಂಡಿದ್ದರು. ಶಿವಲಿಂಗೇಗೌಡ ಕಾಂಗ್ರೆಸ್​ ಸೇರ್ತಾರೆ ಎಂಬ ಬಗ್ಗೆ ವದಂತಿ ಕೂಡ ಈ ಹಿಂದೆ ಹರಡಿತ್ತು. ಕೆಪಿಸಿಸಿ ಕಾರ್ಯಾದ್ಯಕ್ಷ ಧ್ರುವನಾರಾಯಣ ಕೂಡ ಶಿವಲಿಂಗೇಗೌಡ ನಮ್ಮ ಪಾರ್ಟಿ ಸೇರ್ತಾರೆ ಎಂದು ಹೇಳಿದ್ರು, ಆದರೂ ಇದುವರೆಗೆ ಸುಳಿವು ಬಿಟ್ಟು ಕೊಡದ ಶಾಸಕ ಶಿವಲಿಂಗೇಗೌಡ. ಇದೀಗ ತಾವು ಕಾಂಗ್ರೆಸ್ ಸೇರಿದ್ರೆ ದೊಡ್ಡ ಮಟ್ಟದ ಲೀಡಲ್ಲಿ ಗೆಲ್ತಿನಿ ಎನ್ನೋ ವಿಶ್ವಾಸದ ಕುರಿತು ಮಾತನಾಡಿದ್ದಾರೆ. ತಮ್ಮ ಕಾರ್ಯಕರ್ತರ ಜೊತೆ ಮಾತನಾಡುವಾಗ ಕಾಂಗ್ರೆಸ್ ಸೇರೋ ಬಗ್ಗೆ ಪ್ರಸ್ತಾಪ ಮಾಡಿದ್ದರು. ಕಳೆದ ಆರು ತಿಂಗಳಿಂದ ನಡೆಯುತ್ತಿದ್ದ ಚರ್ಚೆಗೆ ಕಡೆಗೂ ಸ್ಪಷ್ಟನೆ ಸಿಕ್ಕಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
ನಂಜೇಗೌಡರ ಕುಟುಂಬಸ್ಥರಿಂದಲೂ ರಾತ್ರಿಯಿಡೀ ವಿಜಯೋತ್ಸವ, ಕುಣಿತ
ನಂಜೇಗೌಡರ ಕುಟುಂಬಸ್ಥರಿಂದಲೂ ರಾತ್ರಿಯಿಡೀ ವಿಜಯೋತ್ಸವ, ಕುಣಿತ
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ
RCB ಫ್ಯಾನ್ಸ್ ಗಮನಕ್ಕೆ, ಇಂದೇ ನಡೆಯಲಿದೆ ವಿಜಯಯಾತ್ರೆ: ಎಷ್ಟು ಗಂಟೆಗೆ?
RCB ಫ್ಯಾನ್ಸ್ ಗಮನಕ್ಕೆ, ಇಂದೇ ನಡೆಯಲಿದೆ ವಿಜಯಯಾತ್ರೆ: ಎಷ್ಟು ಗಂಟೆಗೆ?
ಒಂದು 'ಪದ' ಬದಲಾವಣೆಗೆ 18 ವರ್ಷ ಕಾದ RCBಯ ಮೂವರು ದಿಗ್ಗಜರು
ಒಂದು 'ಪದ' ಬದಲಾವಣೆಗೆ 18 ವರ್ಷ ಕಾದ RCBಯ ಮೂವರು ದಿಗ್ಗಜರು
ಗೃಹಲಕ್ಷ್ಮಿ ಹಣದಲ್ಲಿ ಸಾರ್ವಜನಿಕ ರಸ್ತೆ ಸರಿಪಡಿಸಿದ ಕೊಪ್ಪಳದ ಮಹಿಳೆ
ಗೃಹಲಕ್ಷ್ಮಿ ಹಣದಲ್ಲಿ ಸಾರ್ವಜನಿಕ ರಸ್ತೆ ಸರಿಪಡಿಸಿದ ಕೊಪ್ಪಳದ ಮಹಿಳೆ
ಯಮಧರ್ಮನಾಗಿ ಪ್ರತ್ಯಕ್ಷವಾದ ರಾಯಚೂರಿನ ಆರ್​ಸಿಬಿ ಅಭಿಮಾನಿ! ವಿಡಿಯೋ ವೈರಲ್
ಯಮಧರ್ಮನಾಗಿ ಪ್ರತ್ಯಕ್ಷವಾದ ರಾಯಚೂರಿನ ಆರ್​ಸಿಬಿ ಅಭಿಮಾನಿ! ವಿಡಿಯೋ ವೈರಲ್
VIDEO: ಹಾದೀಲಿ ಬೀದಿಲಿ, ನಡು ರೋಡಲ್ಲಿ... ಕುಣಿದು ಕುಪ್ಪಳಿಸಿದ RCB ಫ್ಯಾನ್
VIDEO: ಹಾದೀಲಿ ಬೀದಿಲಿ, ನಡು ರೋಡಲ್ಲಿ... ಕುಣಿದು ಕುಪ್ಪಳಿಸಿದ RCB ಫ್ಯಾನ್