AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan Mixer Blast: ಹಾಸನ ಸ್ಫೋಟ ಪ್ರಕರಣಕ್ಕೆ ಟ್ವಿಸ್ಟ್; ಮದುವೆ ಬೇಡ ಎಂದಾಕೆಗೆ ಮಿಕ್ಸಿಯಲ್ಲಿ ಸ್ಫೋಟಕ ಇಟ್ಟು ಕಳುಹಿಸಿ ಸಿಕ್ಕಿಬಿದ್ದ ಯುವಕ

ಮಂಗಳೂರಿನ ಕುಕ್ಕರ್​ ಸ್ಫೋಟದ ಕಹಿ ನೆನೆಪು ಮಾಸುವ ಬೆನ್ನಲ್ಲೇ ಹಾಸನದಲ್ಲಿ ಡಿಸೆಂಬರ್ 26ರಂದು ಸಂಜೆ ಕೊರಿಯರ್ ಮೂಲಕ ಬಂದಿದ್ದ ಮಿಕ್ಸರ್ ಸ್ಫೋಟಗೊಂಡಿತ್ತು. ಪ್ರಕರಣದ ಜಾಡು ಹಿಡಿದ ಪೊಲೀಸರು ಘಟನೆಯ ಅಸಲಿಯತ್ತನ್ನು ಬಯಲಿಗೆಳೆದಿದ್ದಾರೆ.

Hassan Mixer Blast: ಹಾಸನ ಸ್ಫೋಟ ಪ್ರಕರಣಕ್ಕೆ ಟ್ವಿಸ್ಟ್; ಮದುವೆ ಬೇಡ ಎಂದಾಕೆಗೆ ಮಿಕ್ಸಿಯಲ್ಲಿ ಸ್ಫೋಟಕ ಇಟ್ಟು ಕಳುಹಿಸಿ ಸಿಕ್ಕಿಬಿದ್ದ ಯುವಕ
ಮಿಕ್ಸರ್ ಸ್ಫೋಟ ಸಂಭವಿಸಿದ ಹಾಸನದ ಕೊರಿಯರ್​ ಅಂಗಡಿ
TV9 Web
| Edited By: |

Updated on:Dec 29, 2022 | 3:48 PM

Share

ಹಾಸನ: ನಗರದ ಕೆ.ಆರ್.ಪುರಂ ಬಡಾವಣೆಯ ಡಿಟಿಡಿಸಿ‌ ಕೊರಿಯರ್ ಶಾಪ್​ನಲ್ಲಿ ನಡೆದಿದ್ದ ಮಿಕ್ಸರ್​ ಸ್ಫೋಟ (Mixer Blast) ಪ್ರಕರಣಕ್ಕೆ (Blast Case) ತಿರುವು ದೊರೆತಿದ್ದು, ಮದುವೆ ನಿರಾಕರಿಸಿದ್ದಕ್ಕೆ ಮಹಿಳೆಯ ಹತ್ಯೆಗೆ ಸಂಚು ರೂಪಿಸಿದ ಪ್ರಕರಣ ಎಂಬುದು ಬೆಳಕಿಗೆ ಬಂದಿದೆ. ಬೆಂಗಳೂರಿನ ಅನೂಪ್‌ ಕುಮಾರ್‌ ಎಂಬಾತ ಮಹಿಳೆಯ ಹತ್ಯೆಗೆ ಸಂಚು ರೂಪಿಸಿ ಮಿಕ್ಸರ್​ನಲ್ಲಿ ಸ್ಫೋಟಕ ಇಟ್ಟು ಕಳುಹಿಸಿದ್ದ ಎಂಬುದನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಮಂಗಳೂರಿನ ಕುಕ್ಕರ್​ ಸ್ಫೋಟದ ಕಹಿ ನೆನೆಪು ಮಾಸುವ ಬೆನ್ನಲ್ಲೇ ಹಾಸನದಲ್ಲಿ ಡಿಸೆಂಬರ್ 26ರಂದು ಸಂಜೆ ಕೊರಿಯರ್ ಮೂಲಕ ಬಂದಿದ್ದ ಮಿಕ್ಸರ್ ಸ್ಫೋಟಗೊಂಡಿತ್ತು. ಪ್ರಕರಣದ ಜಾಡು ಹಿಡಿದ ಪೊಲೀಸರಿಗೆ ಇದೊಂದು ಪ್ರೇಮ ವೈಫಲ್ಯ ಪ್ರಕರಣವೆಂಬುದು ಗೊತ್ತಾಗಿದೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

ಹಾಸನದ ಮಹಿಳೆಯೊಬ್ಬರು ವಿವಾಹ ವಿಚ್ಛೇದನದ ನಂತರ ಮ್ಯಾಟ್ರಿಮೋನಿಯಲ್ಲಿ ತನ್ನ ಫೋಟೋ ಅಪ್‌ಲೋಡ್ ಮಾಡಿದ್ದರು. ಮಹಿಳೆಯ ಅಂದಕ್ಕೆ ಮಾರುಹೋಗಿ ಬೆಂಗಳೂರು ಮೂಲದ ಅನೂಪ್ ಮದುವೆ ಪ್ರಸ್ತಾಪ ಮಾಡಿದ್ದರು. ಇದನ್ನು ಒಪ್ಪಿಕೊಂಡಿದ್ದ ಮಹಿಳೆ ಅನೂಪ್ ಜತೆ ಸುತ್ತಾಡಿದ್ದರು. ಅನೂಪ್‌ಕುಮಾರ್‌ ವಿಶ್ವಾಸ ಗಳಿಸಿ ಆತನಿಂದ ಲಕ್ಷಾಂತರ ರೂ ಹಣ ಸಾಲ ಪಡೆದಿದ್ದರು ಎನ್ನಲಾಗಿದೆ.

ಮಹಿಳೆ ವಿರುದ್ಧ ಆಕ್ರೋಶಗೊಂಡು ಕೃತ್ಯ

ಕೊಟ್ಟ ಹಣ ವಾಪಸ್ ನೀಡದೆ, ಮದುವೆಗೂ ಒಪ್ಪದೆ ಮಹಿಳೆ ಅನೂಪ್​ನಿಂದ ಅಂತರ ಕಾಯ್ದುಕೊಂಡಿದ್ದರು. ಇದರಿಂದ ತೀವ್ರ ನಿರಾಸೆಗೆ ಒಳಗಾದ ಆರೋಪಿ, ಒಂದೋ ಮದುವೆಯಾಗಬೇಕು ಇಲ್ಲವೇ ಹಣ ವಾಪಾಸ್ ನೀಡಬೇಕು ಎಂದು ಮಹಿಳೆಗೆ ತಿಳಿಸಿದ್ದ. ಈ ಮಧ್ಯೆ, ಒಂದೆರಡು ಬಾರಿ ಹಾಸನಕ್ಕೆ ಬಂದು ಮಹಿಳೆ ಮನೆ ಎದುರು ಗಲಾಟೆ ಮಾಡಿದ್ದ. ಇದರ ಬೆನ್ನಲ್ಲೇ, ಅನೂಪ್ ವಿರುದ್ಧ ಪೊಲೀಸರು ಮತ್ತು ರಾಜ್ಯ ಮಹಿಳಾ ಆಯೋಗಕ್ಕೆ ಮಹಿಳೆ ದೂರು ನೀಡಿದ್ದರು.

ಮಿಕ್ಸರ್​​ನಲ್ಲಿ ಡಿಟೋನೇಟರ್ ಇಟ್ಟು ಕೊರಿಯರ್

ತನಗೆ ಮೋಸವಾಗಿದೆ ಎಂದು ಮಹಿಳೆ ವಿರುದ್ಧ ಕೆರಳಿದ ಅನೂಪ್ ಮೊದಲು ಸೀರೆ, ನಂತರ ಸೀರಿಯಲ್ ಸೆಟ್ ಪಾರ್ಸೆಲ್ ಕಳುಹಿಸಿದ್ದ. ಇದನ್ನು ನಿರಾಕರಿಸಿದ್ದ ಮಹಿಳೆ ಸೀರೆಯನ್ನು ವಾಪಾಸ್ ಕಳುಹಿಸಿ ನಿಂದಿಸಿದ್ದರು. ಹೀಗಾಗಿ ಮೂರನೇ ಬಾರಿ ಮಿಕ್ಸಿಯಲ್ಲಿ ಡಿಟೋನೇಟರ್ ಇಟ್ಟು ಕಳುಹಿಸಿದ್ದಾನೆ. ಮೋಸ ಮಾಡಿದವಳ ಮುಖ ವಿಕಾರವಾಗಬೇಕು ಅಥವಾ ಆಕೆ ಸಾಯಬೇಕು ಎಂಬ ಉದ್ದೇಶದಿಂದ ಆರೋಪಿ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Hassan Mixer Blast: ಕೊರಿಯರ್​​ ಮೂಲಕ ಬಂದಿದ್ದ ಹೊಸ ಮಿಕ್ಸರ್​ ನಿಗೂಢ ಸ್ಫೋಟ; ಸ್ಥಳಕ್ಕೆ ಎಸ್ಪಿ ಭೇಟಿ

ಕೊರಿಯರ್ ಮೂಲಕ ಬಂದ ಮಿಕ್ಸರ್​ ಅನ್ನು ಡಿಸೆಂಬರ್ 17ರಂದೇ ಕೊರಿಯರ್ ಮಾಲೀಕ ಶಶಿ ಡೆಲಿವರಿ ಮಾಡಿಸಿದ್ದರು. ಆದರೆ ಅದನ್ನು ನಿರಾಕರಿಸಿದ್ದ ಮಹಿಳೆ ವಾಪಸ್ ಕಳುಹಿಸುವಂತೆ ಕೊರಿಯರ್​ನವರಿಗೆ ತಿಳಿಸಿದ್ದರು. ಕೊರಿಯರ್ ಮಾಡಿದವರ ಪೂರ್ಣ ವಿಳಾಸ ಇಲ್ಲದ ಕಾರಣ ಅದನ್ನು ವಾಪಸ್ ಕಳಿಸಲು 350 ರೂ. ಶುಲ್ಕ ನೀಡಬೇಕೆಂದು ಕೊರಿಯರ್ ಮಾಲೀಕ ಕೇಳಿದ್ದರು. ಆದರೆ ಹಣ ನೀಡದೆ ಮಹಿಳೆ ವಾಪಸಾಗಿದ್ದರು. ವಾಪಸ್ ‌ಕಳುಹಿಸಲು ಸೂಕ್ತ ವಿಳಾಸ ಇಲ್ಲದ ಕಾರಣ ಕೊರಿಯರ್ ಅಂಗಡಿ ಮಾಲೀಕ ಅದನ್ನು ಬಿಚ್ಚಿ ಪರಿಶೀಲನೆ ಮಾಡಿದ್ದರು. ಈ ವೇಳೆ ಸ್ಫೋಟ ಸಂಭವಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:49 am, Wed, 28 December 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ