AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ರೌಡಿಶೀಟರ್ ಮಾಸ್ತಿಗೌಡ ಕೊಂದಿದ್ದ 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ: ಕೋರ್ಟ್ ಆದೇಶ

2023ರ ಜುಲೈ 4ರಂದು ಚನ್ನರಾಯಪಟ್ಟಣದ ಮುಖ್ಯರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ರೌಡಿಶೀಟರ್ ಮಾಸ್ತಿಗೌಡನನ್ನು ಕೊಲೆಗೈದಿದ್ದರು. ಚನ್ನರಾಯಪಟ್ಟಣ ಭಾಗದಲ್ಲಿ ರೌಡಿ ಚಟುವಟಿಕೆ ಮಟ್ಟಹಾಕುವ ನಿಟ್ಟಿನಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ವಹಿಸಿದ್ದಾರೆ. ಅಂದಿನ ಎಸ್ಪಿ ಹರಿರಾಮ್ ಶಂಕರ್ ಅವರ ಪರಿಶ್ರಮದಿಂದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲಾಗಿದೆ. 

ಹಾಸನ: ರೌಡಿಶೀಟರ್ ಮಾಸ್ತಿಗೌಡ ಕೊಂದಿದ್ದ 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ: ಕೋರ್ಟ್ ಆದೇಶ
ಹಾಸನ: ರೌಡಿಶೀಟರ್ ಮಾಸ್ತಿಗೌಡ ಕೊಂದಿದ್ದ 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ: ಕೋರ್ಟ್ ಆದೇಶ
ಮಂಜುನಾಥ ಕೆಬಿ
| Edited By: |

Updated on: May 07, 2024 | 10:18 PM

Share

ಹಾಸನ, ಮೇ 07: ರೌಡಿಶೀಟರ್ (rowdy sheeter)​ ಮಾಸ್ತಿಗೌಡ ಕೊಂದಿದ್ದ ರೌಡಿಶೀಟರ್ ಯಾಚೇನಹಳ್ಳಿ ಚೇತು ಸೇರಿ 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಜಿಲ್ಲೆಯ ಚನ್ನರಾಯಪಟ್ಟಣದ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ. ಕೊಲೆ ನಡೆದ 10 ತಿಂಗಳಲ್ಲಿ ವಿಚಾರಣೆ ಮುಗಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ. ಕಲಬುರಗಿ ಜೈಲಿನಲ್ಲಿದ್ದುಕೊಂಡೇ ಯಾಚೇನಹಳ್ಳಿ ಚೇತು ಕೊಲೆ ಮಾಡಿಸಿದ್ದ. ಮಂಡ್ಯ ಶಿವು ಅಲಿಯಾಸ್ ಶಿವಕುಮಾರ್, ಉಲಿವಾಲ ಚೇತು, ರಾಕಿ ಸೇರಿದಂತೆ 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ನೀಡಿದೆ.

ಮತ್ತಿಬ್ಬರು ಅಪರಾಧಿಗಳಿಗೆ ತಲಾ 2.5 ವರ್ಷ ಶಿಕ್ಷೆ ವಿಧಿಸಿದೆ. ಇನ್ಸ್​ಪೆಕ್ಟರ್​ ಕೆ.ಎಂ.ವಸಂತ್ ಪ್ರಕರಣದ ತನಿಖಾಧಿಕಾರಿಯಾಗಿದ್ದ. ಚನ್ನರಾಯಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಇದನ್ನೂ ಓದಿ: ಹಾಸನದಲ್ಲಿ ರೌಡಿಶೀಟರ್​ ಮಾಸ್ತಿಗೌಡ ಬರ್ಬರ ಹತ್ಯೆ ಕೇಸ್​: ಠಾಣೆಗೆ ಬಂದು ಶರಣಾದ ಮೂವರು ಆರೋಪಿಗಳು

2023ರ ಜುಲೈ 4ರಂದು ಚನ್ನರಾಯಪಟ್ಟಣದ ಮುಖ್ಯರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ರೌಡಿಶೀಟರ್ ಮಾಸ್ತಿಗೌಡನನ್ನು ಕೊಲೆಗೈದಿದ್ದರು. ಚನ್ನರಾಯಪಟ್ಟಣ ಭಾಗದಲ್ಲಿ ರೌಡಿ ಚಟುವಟಿಕೆ ಮಟ್ಟಹಾಕುವ ನಿಟ್ಟಿನಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ವಹಿಸಿದ್ದಾರೆ. ಅಂದಿನ ಎಸ್ಪಿ ಹರಿರಾಮ್ ಶಂಕರ್ ಅವರ ಪರಿಶ್ರಮದಿಂದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲಾಗಿದೆ.

ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​ ಕಾರ್ತಿಕೇಯನ್(40) ಬರ್ಬರ ಹತ್ಯೆ ಮಾಡಲಾಗಿದೆ. ರಾಮಸ್ವಾಮಿಪಾಳ್ಯದ ನಡುರಸ್ತೆಯಲ್ಲಿ ಅಟ್ಟಾಡಿಸಿ ಕೊಲೆಗೈದು ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ರಕ್ತಸ್ರಾವವಾಗಿ ರಸ್ತೆಯಲ್ಲೇ ರೌಡಿಶೀಟರ್ ಕಾರ್ತಿಕೇಯನ್ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಬಾಣಸವಾಡಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಖಾಸಗಿ ಆಸ್ವತ್ರೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ

ದೇವನಹಳ್ಳಿ: ಖಾಸಗಿ ಆಸ್ಪತ್ರೆ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಹಿನ್ನೆಲೆ ಆಸ್ವತ್ರೆ ತುಂಬಾ ದಟ್ಟಹೊಗೆ ಆವರಿಸಿದೆ. ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ರಾಜಾನುಕುಂಟೆಯ ರಕ್ಷಾ ಆಸ್ವತ್ರೆಯಲ್ಲಿ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಆಸ್ವತ್ರೆ ಸಿಬ್ಬಂದಿ ಹಾಗೂ ಜನ ಹೊರಗಡೆ ಓಡಿ ಬಂದಿದ್ದಾರೆ.

ಇದನ್ನೂ ಓದಿ: ಕಾಸರಗೋಡು: ಆ್ಯಂಬುಲೆನ್ಸ್ ಡಿಕ್ಕಿ: ಕಾರಿನಲ್ಲಿ ತೆರಳುತ್ತಿದ್ದ ಮೂವರ ದುರ್ಮರಣ

ದಟ್ಟ ಹೊಗೆ ಹಿನ್ನೆಲೆ ಸ್ಥಳಿಯರಲ್ಲಿ ಆತಂಕ ಮನೆ ಮಾಡಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸಲು ಯತ್ನಿಸಲಾಗಿದೆ. ಸ್ಥಳದಲ್ಲೇ ರಾಜಾನುಕುಂಟೆ ಪೊಲೀಸರು ಬಿಡುಬಿಟ್ಟಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್