AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನದಲ್ಲಿ ಕಾಲುಜಾರಿ ಬಿದ್ದ ಮಾಜಿ ಸಚಿವ ಹೆಚ್​ಡಿ ರೇವಣ್ಣ: ಪಕ್ಕೆಲುಬಿಗೆ ಪೆಟ್ಟು, ಐಸಿಯುನಲ್ಲಿ ಚಿಕಿತ್ಸೆ

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ದೇವಾಲಯದಲ್ಲಿ ಕಾಲು ಜಾರಿ ಬಿದ್ದು ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರಿಗೆ ಪಕ್ಕೆಲುಬಿಗೆ ಪೆಟ್ಟಾಗಿದೆ. ಸದ್ಯ ಹೊಳೆನರಸೀಪುರದ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೂಜೆ ಸಲ್ಲಿಸಿ ಬರುವಾಗ ದೇಗುಲದಲ್ಲಿ ಜಾರಿ ಬಿದ್ದಿದ್ದಾರೆ.

ದೇವಸ್ಥಾನದಲ್ಲಿ ಕಾಲುಜಾರಿ ಬಿದ್ದ ಮಾಜಿ ಸಚಿವ ಹೆಚ್​ಡಿ ರೇವಣ್ಣ: ಪಕ್ಕೆಲುಬಿಗೆ ಪೆಟ್ಟು, ಐಸಿಯುನಲ್ಲಿ ಚಿಕಿತ್ಸೆ
ದೇವಸ್ಥಾನದಲ್ಲಿ ಕಾಲುಜಾರಿ ಬಿದ್ದ ಮಾಜಿ ಸಚಿವ ಹೆಚ್​ಡಿ ರೇವಣ್ಣ: ಪಕ್ಕೆಲುಬಿಗೆ ಪೆಟ್ಟು, ಆಸ್ಪತ್ರೆಗೆ ದಾಖಲು
ಮಂಜುನಾಥ ಕೆಬಿ
| Edited By: |

Updated on:Jul 17, 2024 | 3:10 PM

Share

ಹಾಸನ, ಜುಲೈ 17: ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಮಾಜಿ ಸಚಿವ ಹೆಚ್​ಡಿ ರೇವಣ್ಣ (HD Revanna) ಅವರಿಗೆ ಪಕ್ಕೆಲುಬಿಗೆ ಪೆಟ್ಟಾಗಿರುವಂತಹ ಘಟನೆ ಜಿಲ್ಲೆಯ ಹೊಳೆನರಸೀಪುರ (Holenarasipur) ತಾಲ್ಲೂಕಿನ ಹರದನಹಳ್ಳಿ ದೇವೇಶ್ವರ ದೇವಾಲಯದಲ್ಲಿ ನಡೆದಿದೆ. ಸದ್ಯ ಹೊಳೆನರಸೀಪುರ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏಕಾದಶಿ ಪ್ರಯುಕ್ತ ಉಪವಾಸವಿದ್ದು, ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ಪೂಜೆ ಸಲ್ಲಿಸಿ ಬರುವಾಗ ಜಾರಿ ಬಿದಿದ್ದು, ಪಕ್ಕೆಲುಬುಗೆ ಪೆಟ್ಟಾಗಿದೆ.

ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರ ಕುಟುಂಬಕ್ಕೆ ಸಂಕಷ್ಟಗಳು ಎದುರಾಗುತ್ತಿವೆ. ಹೀಗಾಗಿ ಅವರು ಇತ್ತೀಚೆಗೆ ಒಂದಾದ ಮೇಲೆ ಒಂದರಂತೆ ದೇವಸ್ಥಾನಗಳಿಗೆ ಮೊರೆ ಹೋಗಿದ್ದರು. ಆ ಮೂಲಕ ದೇವರೇ ತಮ್ಮ ಕುಟುಂಬಕ್ಕೆ ಎದುರಾದ ಕಾನೂನು ಸಂಕಷ್ಟಗಳಿಂದ ಪಾರು ಮಾಡು ಅಂತ ಪ್ರಾರ್ಥಿಸಿದ್ದರು.

ಇದನ್ನೂ ಓದಿ: ನನ್ನ ಮಗ ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ ನಾನು ಬೇಡ ಅನ್ನಲ್ಲ -ಹೆಚ್​ಡಿ ರೇವಣ್ಣ

ಇನ್ನು ಹೆಚ್.ಡಿ.ರೇವಣ್ಣ ಕಿಡ್ನ್ಯಾಪ್ ಕೇಸ್ ಎದುರಿಸುತ್ತಿದ್ದಾರೆ. ಅತ್ಯಾಚಾರ ಸಂತ್ರಸ್ತೆಯನ್ನ ಕಿಡ್ನ್ಯಾಪ್ ಮಾಡಿದ್ದಾರೆ ಅಂತ ಮೈಸೂರಿನ ಕೆ.ಆರ್.ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೇ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ರೇವಣ್ಣ, ಸದ್ಯ ಬೇಲ್ ಮೇಲೆ ಹೊರಗಿದ್ದಾರೆ. ಆದರೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ತನಿಖೆ ಮುಗಿಸಿ, ಚಾರ್ಜ್​ಶೀಟ್ ಸಲ್ಲಿಕೆಗೆ ತಯಾರಿ ನಡೆಸಿದೆ.

10 ದಿನ ಜೈಲು ಅನುಭವಿಸಿ ಹೆಚ್​ಡಿ ರೇವಣ್ಣ ಈಗ ಹೊರ ಬಂದಿದ್ದಾರೆ. 3 ದಿನ ಪೊಲೀಸ್ ಕಸ್ಟಡಿ ಮತ್ತು 6 ದಿನ ಜೈಲುಶಿಕ್ಷೆ ಅನುಭವಿಸಿದ್ದರು. ಪತ್ನಿ ಭವಾನಿ ರೇವಣ್ಣ ವಿರುದ್ಧ ಮೈಸೂರು ಜಿಲ್ಲೆ ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಕೇಸ್ ದಾಖಲಾಗಿತ್ತು. ಭವಾನಿ ರೇವಣ್ಣ ಸೂಚನೆ ಮೇರೆಗೆ ಕಾರು ಚಾಲಕ ಅಜಿತ್‌, ಸಂತ್ರಸ್ತೆಯನ್ನು ಮನೆಯಿಂದ ಕಾರಿನಲ್ಲಿ ಕರೆದೊಯ್ದ ಆರೋಪವಿತ್ತು.

ಇದನ್ನೂ ಓದಿ: ಒಂಟಿತನಕ್ಕೆ ಒಗ್ಗಿಕೊಳ್ಳುತ್ತಿರುವ ಹೆಚ್ ಡಿ ರೇವಣ್ಣ ಒಂಟಿಯಾಗಿಯೇ ಸದನದಿಂದ ಹೊರಬಂದರು!

ಕಿಡ್ನ್ಯಾಪ್ ಬಗ್ಗೆ K.R.ನಗರ ಠಾಣೆಯಲ್ಲಿ ದೂರು ಸಂತ್ರಸ್ತೆ ಮಗ ದೂರು ನೀಡಿದ್ದರು. ವಿಚಾರಣಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿತ್ತು. ಹೈಕೋರ್ಟ್ ಮೆಟ್ಟಿಲೇರಿದ್ದ ಭವಾನಿಗೆ ಮಧ್ಯಂತರ ಜಾಮೀನು ಸಿಕ್ಕಿತ್ತು. ಆದರೆ, ಕೆ.ಆರ್​.ನಗರ ಮತ್ತು ಹಾಸನಕ್ಕೆ ಹೋಗುವಂತಿಲ್ಲ ಅಂತಾ ಷರತ್ತು ವಿಧಿಸಿ ಭವಾನಿಗೆ ಬೇಲ್ ನೀಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:43 pm, Wed, 17 July 24

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ