AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲು ಪಾಲಾದ ಪ್ರಜ್ವಲ್ ರೇವಣ್ಣ ವಿಚಾರಣಾಧೀನ ಕೈದಿ ನಂಬರ್ 5664

Prajwal Revanna Case: ಹಾಸನ ಅಶ್ಲೀಲ ವಿಡಿಯೋ, ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಜೆಡಿಎಸ್​ ಸಂಸದ ಪ್ರಜ್ವಲ್​ ರೇವಣ್ಣಗೆ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಇಷ್ಟು ದಿನ ಎಸ್​ಐಟಿ ಕಸ್ಟಡಿಯಲ್ಲಿದ್ದ ಪ್ರಜ್ವಲ್​​ನನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್​ ಮಾಡಲಾಗಿದ್ದು, ಅವರಿಗೆ ವಿಚಾರಣಧೀನ ಕೈದಿ ನಂಬರ್​ ಸಹ ನೀಡಲಾಗಿದೆ.

ಪರಪ್ಪನ ಅಗ್ರಹಾರ ಜೈಲು ಪಾಲಾದ ಪ್ರಜ್ವಲ್ ರೇವಣ್ಣ ವಿಚಾರಣಾಧೀನ ಕೈದಿ ನಂಬರ್ 5664
ಪ್ರಜ್ವಲ್ ರೇವಣ್ಣ
ರಾಮು, ಆನೇಕಲ್​
| Edited By: |

Updated on:Jun 10, 2024 | 8:53 PM

Share

ಬೆಂಗಳೂರು, (ಜೂನ್ 10): ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ( Prajwal Revanna) ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್​ನನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್​ ಮಾಡಲಾಗಿದ್ದು, ವಿಚಾರಣಾಧೀನ ಖೈದಿ ಸಂಖ್ಯೆ 5664 (Prajwal Revanna prisoner no 5664) ನೀಡಲಾಗಿದೆ. ಇನ್ನು ಮಹಿಳೆಯ ಅಪಹರಣ ಪ್ರಕರಣದಲ್ಲಿ ಹೊಳೆನರಸೀಪುರ ಶಾಸಕ ಎಚ್​.ಡಿ.ರೇವಣ್ಣಗೆ ವಿಚಾರಣಾಧೀನ ಖೈದಿ ಸಂಖ್ಯೆ 4567 ನೀಡಲಾಗಿತ್ತು.

ಸದ್ಯ ಪ್ರಜ್ವಲ್ ರೇವಣ್ಣ, ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಕ್ವಾರೆಂಟೈನ್ ಸೆಲ್ ನಲ್ಲಿದ್ದು, ಅವರಿಗೆ ವಿಚಾರಣಾಧೀನ ಕೈದಿ ನಂಬರ್-5664 ನೀಡಲಾಗಿದೆ. ಇನ್ನು ಇಂದಿನ ರಾತ್ರಿ ಊಟವನ್ನು ಸಹ ಜೈಲಾಧಿಕಾರಿಗಳು ನೀಡಿದ್ದಾರೆ. ರಾತ್ರಿ ಜೈಲಿನ ಮೆನುವಿನಂತೆ ಮುದ್ದೆ, ಅನ್ನ, ಸಾಂಬರು, ಪಲ್ಯ ನೀಡಲಾಗಿದೆ. ಆದ್ರೆ, ಪ್ರಜ್ವಲ್ , ಜೈಲಿನ ಕ್ವಾರೆಂಟೈನ್ ಬ್ಯಾರಕ್ ನಲ್ಲಿ ಮೌನಕ್ಕೆ ಶರಣಾಗಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್​ ರೇವಣ್ಣಗೆ ನ್ಯಾಯಾಂಗ ಬಂಧನ, 14 ದಿನ ಪರಪ್ಪನ ಅಗ್ರಹಾರ ಜೈಲೇ ಗತಿ

ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ಅವರು ಜೈಲು ಪಾಲಾಗಿದ್ದಾರೆ. ಅತ್ಯಾಚಾರ ಆರೋಪ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ಎಸ್‌ಐಟಿ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಇಂದು ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಪ್ರಜ್ವಲ್ ರೇವಣ್ಣ ಅವರಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪ್ರಜ್ವಲ್ ರೇವಣ್ಣರನ್ನು ಕೋರ್ಟ್‌ಗೆ ಹಾಜರುಪಡಿಸಿದ್ದ ಎಸ್ಐಟಿ ಅಧಿಕಾರಿಗಳು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಮನವಿ ಮಾಡಿದರು. ಆಗ ಜಡ್ಜ್‌ ನಿಮಗೆ ಕಸ್ಟಡಿಯಲ್ಲಿ ಪೊಲೀಸರು ತೊಂದರೆ ಕೊಟ್ರಾ ಎಂದು ಪ್ರಶ್ನಿಸಿದರು. ಆಗ ಇಲ್ಲ ಎಂದು ಪ್ರಜ್ವಲ್ ರೇವಣ್ಣ ಉತ್ತರಿಸಿದ್ದರು.

ರಾಜ್ಯದ ಮತ್ತಷ್ಟುವ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:47 pm, Mon, 10 June 24

Follow Us
ರಾಮು, ಆನೇಕಲ್​
ರಾಮು, ಆನೇಕಲ್​

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!