AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಸಮಯಕ್ಕೆ ಅಣ್ತಮ್ಮಂದಿರ ಅರ್ಜಿ ವಿಚಾರಣೆ: ಸೂರಜ್‌ ಸಿಐಡಿ ಕಸ್ಟಡಿಗೆ, ತಮ್ಮ ಪ್ರಜ್ವಲ್‌ ನ್ಯಾಯಾಂಗ ಬಂಧನಕ್ಕೆ!

42ನೇ ಎಸಿಎಂಎಂ ಕೋರ್ಟ್‌ನಲ್ಲಿ ಒಂದೇ ಸಮಯದಲ್ಲಿ ರೇವಣ್ಣ ಸನ್ಸ್ ಅರ್ಜಿಗಳ ವಿಚಾರಣೆ ನಡೆದಿದೆ. ರೇವಣ್ಣನವರ ಹಿರಿಯ ಪುತ್ರ ಸೂರಜ್​ಗೆ ಕೋರ್ಟ್​, ನ್ಯಾಯಾಂಗ ಬಂಧನದಿಂದ ಸಿಐಡಿ ಕಸ್ಟಡಿಗೆ ನೀಡಿದರೆ, ಸಹೋದರ ಪ್ರಜ್ವಲ್​ ರೇವಣ್ಣಗೆ ಎಸ್‌ಐಟಿ ಕಸ್ಟಡಿಯಿಂದ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಒಂದೇ ಸಮಯಕ್ಕೆ ಅಣ್ತಮ್ಮಂದಿರ ಅರ್ಜಿ ವಿಚಾರಣೆ: ಸೂರಜ್‌ ಸಿಐಡಿ ಕಸ್ಟಡಿಗೆ, ತಮ್ಮ ಪ್ರಜ್ವಲ್‌ ನ್ಯಾಯಾಂಗ ಬಂಧನಕ್ಕೆ!
ಸೂರಜ್, ಪ್ರಜ್ವಲ್
Shivaprasad B
| Edited By: |

Updated on:Jun 24, 2024 | 4:39 PM

Share

ಬೆಂಗಳೂರು, (ಜೂನ್ 24): ಕಾಕತಾಳೀಯ ಎಂಬಂತೆ ಇಂದು (ಜೂನ್ 24) ಬೆಂಗಳೂರಿನ 42ನೇ ಎಸಿಎಂಎಂ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಕೋರ್ಟ್​ನಲ್ಲಿ ಮಾಜಿ ಸಚಿವ ಎಚ್​ಡಿ ರೇವಣ್ಣ ಪುತ್ರರ ಅರ್ಜಿ ವಿಚಾರಣೆ ನಡೆದಿದೆ. ಸಲಿಂಗ ಕಾಮ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಜೆಡಿಎಸ್​ ವಿಧಾನಪರಿಷತ್ ಸದಸ್ಯ ಸೂರಜ್‌ ರೇವಣ್ಣನನ್ನು (Suraj Revanna Case) ಕೋರ್ಟ್​, 8 ದಿನ ಸಿಐಡಿ ಕಸ್ಟಡಿಗೆ ನೀಡಿದೆ. ಇನ್ನು ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಪ್ರಜ್ವಲ್​ ರೇವಣ್ಣಗೆ ಸಿಐಡಿ ಕಸ್ಟಡಿಯಿಂದ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಎರಡು ಪ್ರಕರಣಗಳ ಪ್ರತ್ಯೇಕವಾಗಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ.ಎನ್‌.ಶಿವಕುಮಾರ್‌ ಅವರು ಸೂರಜ್‌ನನ್ನು ಜುಲೈ 1ರವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶ ನೀಡಿದ್ದರೆ, ಪ್ರಜ್ವಲ್​ಗೆ ಜುಲೈ 8ರ ವರೆಗೆ ನ್ಯಾಯಾಂಗ ಬಂಧನ ನೀಡಿ ಆದೇಶ ಹೊರಡಿಸಿದರು.

ಜುಲೈ 1ರ ವರೆಗೆ ಸೂರಜ್ ಸಿಐಡಿ ಕಸ್ಟಡಿಗೆ

ಸಲಿಂಗ ಕಾಮ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸೂರಜ್ ರೇವಣ್ಣನನ್ನು ವಿಚಾರಣೆಗಾಗಿ ಹತ್ತು ದಿನ ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ಮನವಿ ಮಾಡಿದ್ದರು. ಆದರೆ, ಕೋರ್ಟ್, 10 ದಿನ ಬದಲಾಗಿ 8 ದಿನ ಸಿಐಡಿ ಕಸ್ಟಡಿಗೆ ನೀಡಿದೆ. ಇದರಿಂದ ಜುಲೈ 1 ರವರೆಗೆ ಸೂರಜ್ ರೇವಣ್ಣ ಸಿಐಡಿ ಕಸ್ಟಡಿಯಲ್ಲಿ ಇರಲಿದ್ದಾರೆ.

ಇದನ್ನೂ ಓದಿ: ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್; ತನಿಖಾಧಿಕಾರಿಗಳ ನೇಮಕ, ಬಾಡಿ ವಾರಂಟ್ ಸಲ್ಲಿಕೆ

ಜುಲೈ 8ರವರೆಗೆ ಪ್ರಜ್ವಲ್‌ಗೆ ನ್ಯಾಯಾಂಗ ಬಂಧನ

ಅಣ್ಣ ಸೂರಜ್ ರೇವಣ್ಣ ಅರ್ಜಿ ವಿಚಾರಣೆ ಮುಗಿಯುತ್ತಿದ್ದಂತೆ ತಮ್ಮ ಪ್ರಜ್ವಲ್ ರೇವಣ್ಣನನ್ನು (Prajwal Revanna) ಎಸ್ಐಟಿ ತಂಡ ಕೋರ್ಟ್‌ಗೆ ಹಾಜರುಪಡಿಸಿತು. ಅತ್ಯಾಚಾರ ಪ್ರಕರಣ ಸಂಬಂಧ ಪ್ರಜ್ವಲ್‌ನ ಕಸ್ಟಡಿಗೆ ಪಡೆಯಲಾಗಿತ್ತು. ಕಸ್ಟಡಿ ಇಂದು (ಜೂನ್ 24) ಅಂತ್ಯವಾದ ಹಿನ್ನೆಲೆಯಲ್ಲಿ 42 ಎಸಿಎಂಎಂ ಕೋರ್ಟ್‌ಗೆ ಎಸ್ಐಟಿ ಹಾಜರು ಪಡಿಸಿದೆ. ಹೀಗಾಗಿ ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ‌ ಕೋರ್ಟ್‌ ಆದೇಶ ಹೊರಡಿಸಿದೆ.

ಪ್ರಜ್ವಲ್​ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್

ಇನ್ನು ಮತ್ತೊಂದೆಡೆ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​, ಆದೇಶ ಕಾಯ್ದಿರಿಸಿದೆ. ಜೂನ್ 26ಕ್ಕೆ ಜಾಮೀನು ಅರ್ಜಿ ಸಂಬಂಧ ಆದೇಶ ನೀಡುವ ಸಾಧ್ಯತೆ ಇದೆ. ಹೀಗಾಗಿ ಪ್ರಜ್ವಲ್​ ರೇವಣ್ಣಗೆ ಜಾಮೀನು ಸಿಗುತ್ತಾ? ಅಥವಾ ಜೈಲೇ ಗತಿನಾ ಎನ್ನುವುದನ್ನು ಕಾದುನೋಡಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 4:24 pm, Mon, 24 June 24

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್