AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಕೋಟಿ ಕೋಟಿ ಲಪಟಾಯಿಸಿದ ಹಾಸನದ ಟೈಲರಮ್ಮನ ಕಥೆ: 16 ಲಕ್ಷದ ಕಾರು, ಕೋಟಿ ಬೆಲೆ ಬಾಳುವ ಮನೆ! ಇಷ್ಟೆಲ್ಲ ಸಂಪಾದಿಸಿದ್ದೇಗೆ!?

Tailor lady Fraud case: ಕೊಡಚಾದ್ರಿ ಚೀಟಿಯಲ್ಲಿ ಹಣ ಹೂಡಿಕೆ ಮಾಡಿದ್ದೇನೆಂದು ನಂಬಿಸಿ ಮಹಿಳಾ ಗ್ರಾಹಕರಿಂದ ಕೋಟ್ಯಾಂತರ ರೂ.ಗಳ ಪಡೆದ ಲೇಡಸ್ ಟೇಲರ್ ಪ್ರಕರಣವೀಗ ಬೆಳಕಿಗೆ ಬಂದಿದೆ. 16 ಲಕ್ಷದ ಕಾರು, ಕೋಟಿ ರೂ. ಬೆಲೆ ಬಾಳುವ ಮನೆ ಹೊಂದಿರುವ ವಂಚಕಿ, ಮಹಿಳೆಯರ ಬಳಿ ಮೂರು ಕೋಟಿಗೂ ಅಧಿಕ ಹಣವನ್ನು ಸಾಲ ಪಡೆದು, ಹಿಂದಿರುಗಿಸದೆ ಮೋಸ ಮಾಡಿದ್ದಾಳೆ. ವಂಚನೆಗೊಳಗಾದ ಮಹಿಳೆಯರು ನಡುರಸ್ತೆಯಲ್ಲಿ ಆಕೆಗೆ ಧರ್ಮದೇಟು ನೀಡಿದ್ದು, ಪ್ರಕರಣ ದಾಖಲಾಗಿದೆ

ಹಾಸನ: ಕೋಟಿ ಕೋಟಿ ಲಪಟಾಯಿಸಿದ ಹಾಸನದ ಟೈಲರಮ್ಮನ ಕಥೆ: 16 ಲಕ್ಷದ ಕಾರು, ಕೋಟಿ ಬೆಲೆ ಬಾಳುವ ಮನೆ! ಇಷ್ಟೆಲ್ಲ ಸಂಪಾದಿಸಿದ್ದೇಗೆ!?
ಕೋಟಿ ಕೋಟಿ ಲಪಟಾಯಿಸಿದ ಹಾಸನದ ಟೈಲರಮ್ಮ ಮತ್ತು ಆಕೆಯ ಪತಿ
ಮಂಜುನಾಥ ಕೆಬಿ
| Edited By: |

Updated on: Oct 27, 2025 | 12:05 PM

Share

ಹಾಸನ,ಅಕ್ಟೋಬರ್ 27: ಹಾಸನದ ಲೇಡೀಸ್ ಡ್ರೆಸ್ ಟೇಲರ್  (Ladies Dress Tailor) ಹೇಮಾವತಿ ವಿರುದ್ಧ ಮಹಿಳೆಯರ ನಂಬಿಕೆಯನ್ನು ದುರುಪಯೋಗ ಪಡಿಸಿಕೊಂಡು ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಕೇಳಿಬಂದಿದೆ. ನಡು ರಸ್ತೆಯಲ್ಲಿ ಮಹಿಳೆಯರು ಆಕ್ರೋಶದಿಂದ ಹೇಮಾವತಿಯನ್ನು ಹಿಡಿದು ಎಳೆದಾಡಿದ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಿಗ್ಗಾಮುಗ್ಗಾ ಥಳಿಸಿರುವ ಮಹಿಳೆಯರ ವಿರುದ್ಧವೇ ಟೇಲರ್ ದೂರು ದಾಖಲಿಸಿದ್ದು, ಸತ್ಯಾಂಶ ತಿಳಿಯಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕೆಲವೇ ತಿಂಗಳುಗಳಲ್ಲಿ ಹಣ ದುಪ್ಪಟ್ಟು ಮಾಡಿಕೊಡುವುದಾಗಿ ಹೇಳಿ ವಂಚನೆ

ಹೇಮಾವತಿ ಹಾಸನದ ಅರಳಿಪೇಟೆ ರಸ್ತೆಯಲ್ಲಿದ್ದ ಜ್ಯೋತಿ ಡ್ರೆಸ್ ಮೇಕರ್ಸ್ ಅಂಗಡಿ ನಡೆಸುತ್ತಿದ್ದಳು. ಇದೀಗ ಟೈಲರಿಂಗ್ ಕೆಲಸದ ಹೆಸರಿನಲ್ಲಿ ಹಾಗೂ ವೈಯಕ್ತಿಕ ಪರಿಚಯದ ಆಧಾರದಲ್ಲಿ ಮಹಿಳೆಯರಿಂದ ಸಾಲ ಪಡೆದು 3 ಕೋಟಿ ರೂ.ಗಿಂತ ಅಧಿಕ ಹಣ ವಂಚನೆ ಮಾಡಿದ್ದಾಳೆಂದು ಆರೋಪಿಸಲಾಗಿದೆ. ಹೇಮಾವತಿ ತನ್ನ ಮಗಳನ್ನು ವಿದೇಶದಲ್ಲಿ ಎಮ್ ಎಸ್ ಓದಿಸಬೇಕೆಂದೂ, ಕೋಟಿ ರೂ.ಗಳ ಮನೆ ಖರೀದಿಸಿದ್ದೇನೆಂದು ಹೇಳಿ ಹಣ ಕೇಳುತ್ತಿದ್ದಳು. ತಾನು ಕೊಡಚಾದ್ರಿ ಚಿಟ್ಸ್​ನಲ್ಲಿ 1 ಕೋಟಿ ರೂ.ಗಳಿಗೂ ಅಧಿಕ ಚೀಟಿ ಹಾಕಿದ್ದೇನೆ, ಇದರಿಂದ ಕೆಲವೇ ತಿಂಗಳುಗಳಲ್ಲಿ ದುಪ್ಪಟ್ಟು ಹಣ ಬರಲಿದೆ ಎಂದು ನಕಲಿ ಸ್ಲಿಪ್ ತೋರಿಸಿ ಪರಿಚಯದ ಮಹಿಳೆಯರ ಬಳಿ ಸಾಲ ಕೇಳುತ್ತಿದ್ದಳು.

ಹೇಮಾವತಿಯ ಮಾತಿಗೆ ಮರುಳಾಗಿದ್ದ ಮಹಿಳೆಯರು ತಮ್ಮ ಚಿನ್ನವನ್ನು ಅಡವಿಟ್ಟು ಲಕ್ಷಾಂತರ ಹಣವನ್ನು ಆಕೆಗೆ ನೀಡಿದ್ದರು. ಹತ್ತಾರು ವರ್ಷಗಳಿಂದ ಡ್ರೆಸ್ ಶಾಪ್ ನಡೆಸುತ್ತಿದ್ದ ಹೇಮಾವತಿಯು ತನ್ನ ನಿತ್ಯ ಗ್ರಾಹಕರನ್ನೇ ಗುರಿಯಾಗಿಸಿಕೊಂಡು, ಅವರಿಂದ 45 ಲಕ್ಷ ರೂಪಾಯಿವರೆಗೂ ಹಣ ಪಡೆದು ವಂಚನೆ ಮಾಡಿದ್ದಾಳೆಂದು ಹಾಸನ ನಗರ ಠಾಣೆ, ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಹೇಮಾವತಿಯ ಪತಿಯೂ ವಂಚನೆಯಲ್ಲಿ ಸಾಥ್ ಕೊಟ್ಟಿರುವ ಶಂಕೆ

ಹೇಮಾವತಿಯ ಮೋಸದ ಜಾಲಕ್ಕೆ ಸಿಲುಕಿ ನೊಂದ ಮಹಿಳೆಯರು ಹೇಮಾವತಿ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದು, ಈ ದೃಶ್ಯಗಳು ವೈರಲ್ ಆಗಿವೆ. ಪೊಲೀಸರು ಘಟನೆಯ ಕುರಿತು ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆ ಹಾಗೂ ಹಾಸನ ನಗರ ಠಾಣೆಯಲ್ಲಿ ದೂರುಗಳನ್ನು ದಾಖಲಿಸಿದ್ದಾರೆ.ವವಂಚನೆಗೆ ಹೇಮಾವತಿಯ ಪತಿ ವಿರೂಪಾಕ್ಷಪ್ಪ ಸಹಭಾಗಿಯಾಗಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ಪೊಲೀಸರು ಇಬ್ಬರನ್ನೂ ವಿಚಾರಣೆಗಾಗಿ ಕರೆದಿದ್ದು, ನೊಂದ ಮಹಿಳೆಯರು ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Manjunath KB
Manjunath KB
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ