AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷಣಮಾತ್ರದಲ್ಲಿ ಮಾಯವಾಗತ್ತೆ ನಿಮ್ಮ ಬೈಕ್​; ದುಬಾರಿ ವಾಹನಗಳೇ ಈತನ ಟಾರ್ಗೆಟ್​

ಅರಸೀಕೆರೆ ಪಟ್ಟಣದಲ್ಲಿ ಕಳುವಾದ ಬೈಕ್ ಪ್ರಕರಣ ಬೆನ್ನುಹತ್ತಿ ಹೊರಟ ಪೊಲೀಸರು ಒಟ್ಟು 14 ಬೈಕ್ ಕಳ್ಳತನ ಪ್ರಕರಣಗಳನ್ನು ಬಯಲಿಗೆಳೆದರು.

ಕ್ಷಣಮಾತ್ರದಲ್ಲಿ ಮಾಯವಾಗತ್ತೆ ನಿಮ್ಮ ಬೈಕ್​; ದುಬಾರಿ ವಾಹನಗಳೇ ಈತನ ಟಾರ್ಗೆಟ್​
ಕದಿಯಾಲದ ಬೈಕ್
ರಾಜೇಶ್ ದುಗ್ಗುಮನೆ
| Edited By: |

Updated on: Dec 25, 2020 | 3:17 PM

Share

ಹಾಸನ: ಬೈಕ್​ ಕದಿಯೋದೇ ಈತನ ವೃತ್ತಿ. ರಸ್ತೆ ಬದಿ ನಿಲ್ಲಿಸಿದ್ದ ಬೈಕ್​ ಅನ್ನು ಕ್ಷಣಮಾತ್ರದಲ್ಲಿ ಮಾಯ ಮಾಡುವ ಕಲೆ ಈತನಿಗೆ ಕರಗತವಾಗಿತ್ತು. ಈಗ ಈತ ಪೊಲೀಸರ ಅತಿಥಿಯಾಗಿದ್ದು, ಆತನಿಂದ ಬರೊಬ್ಬರಿ ₹ 18 ಲಕ್ಷ ಮೌಲ್ಯದ ಬೈಕ್ ವಶಕ್ಕೆ ಪಡೆದಿದ್ದಾರೆ.

ಹೆಸರು ಬ್ರೂಸ್ಲಿ. ಅಂದಹಾಗೆ ಈತ ಫೈಟರ್ ಬ್ರೂಸ್ಲಿ ಅಲ್ಲ, ರಂಗ ಅಲಿಯಾಸ್ ಬ್ರೂಸ್ಲಿ. ತನ್ನ ಗೆಳೆಯನ ಜೊತೆಗೆ ಸೇರಿ ಆತ ಟಾರ್ಗೆಟ್ ಮಾಡುತ್ತಿದ್ದು ಬರೇ ದುಬಾರಿ ಬೈಕ್​ಗಳು. ಬುಲೆಟ್ ಎಲ್ಲಿ ಕಾಣುತ್ತವೋ ಅಲ್ಲಿ ಅವನ್ನು ಎಗರಿಸದೆ ಬಿಡುತ್ತಿರಲಿಲ್ಲ. ಎಲ್ಲಿಯೋ ಕದ್ದು ಎಲ್ಲಿಯೋ ಮಾರಿ ಲಕ್ಷ ಲಕ್ಷ ಹಣ ಸಂಪಾದಿಸಿ ಶೋಕಿ ಜೀವನ ನಡೆಸುತ್ತಿದ್ದ.

ಡಿಸೆಂಬರ್ 20ರಂದು ಅರಸೀಕೆರೆ ಪಟ್ಟಣದಲ್ಲಿ ಎರಡು ಬೈಕ್ ಕದ್ದು ರೈಲ್ವೆ ನಿಲ್ದಾಣದ ಬಳಿ ಬೈಕ್ ನಂಬರ್ ಪ್ಲೇಟ್ ಕಿತ್ತು, ಚಾಸಿ ನಂಬರ್ ನಾಶಮಾಡೋ ವೇಳೆ ಪೊಲೀಸರಿಗೆ ಬ್ರೂಸ್ಲಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದ. ಮತ್ತೋರ್ವ ಚೋರ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಮಟ್ಟನವಿಲೆ ಗ್ರಾಮದ ಮಂಜ ತಲೆಮರೆಸಿಕೊಂಡಿದ್ದು, ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಬರೊಬ್ಬರಿ 18 ಲಕ್ಷ ಮೌಲ್ಯದ 15 ದುಬಾರಿ ಬೆಲೆಯ ಬೈಕ್​ಗಳನ್ನ ವಶಕ್ಕೆ ಪಡೆದಿದ್ದಾರೆ.

ಅರಸೀಕೆರೆ ಪಟ್ಟಣದಲ್ಲಿ ಕಳ್ಳತನವಾದ ಬೈಕ್ ಪ್ರಕರಣ ಬೆನ್ನುಹತ್ತಿ ಹೊರಟ ಪೊಲೀಸರಿಗೆ ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂರು ಬೈಕ್, ಸೋಲೂರು ಠಾಣೆ ವ್ಯಾಪ್ತಿಯಲ್ಲಿ ಒಂದು ಬೈಕ್, ಬಾಗಲಕುಂಟೆ ವ್ಯಾಪ್ತಿಯಲ್ಲಿ 4, ಪೀಣ್ಯ ವ್ಯಾಪ್ತಿಯಲ್ಲಿ 3, ನೆಲಮಂಗಲ ವ್ಯಾಪ್ತಿಯಲ್ಲಿ ಒಂದು ಹಾಗೂ ಅರಸೀಕೆರೆ ವ್ಯಾಪ್ತಿಯಲ್ಲಿ ಮೂರು ಬೈಕ್ ಕಳ್ಳತನ ಕೇಸ್ ಬಯಲಾಗಿದೆ.

ಬಂಧಿತರಿಂದ, 6 ರಾಯಲ್ ಎನ್​ಫೀಲ್ಡ್, 2 ಬಜಾಜ್ ಡ್ಯೂಕ್ ಕೆಟಿಎಂ ಬೈಕ್, 4 ಬಜಾಜ್ ಪಲ್ಸರ್,1 ಅಪಾಚೆ ಬೈಕ್, 2 ಹೊಂಡಾ ಡಿಯೋ ಬೈಕ್ ಹೀಗೆ ಎಲ್ಲವೂ ದುಬಾರಿ ಬೆಲೆಯ ಬೈಕ್​​ಗಳಲ್ಲೇ ಟಾರ್ಗೆಟ್ ಮಾಡಿ ಕದ್ದು ಲಕ್ಷ ಲಕ್ಷಕ್ಕೆ ಮಾರಾಟ ಮಾಡಿ ಶೋಕಿ ಜೀವನ ನಡೆಸುತ್ತಿದ್ದರು.

ಕತ್ತಲಲ್ಲಿ ಶಾಪಿಂಗ್ ಮಾಲ್‌ಗಳಿಗೆ ನುಗ್ಗಿ ಕಳ್ಳತನ ಮಾಡ್ತಿದ್ದ ಕಳ್ಳರ ಬಂಧನ

Follow Us
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು