AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಭತ್ತ ನಾಟಿ ಮಾಡ್ತಿದ್ದ ವೇಳೆ ಸಿಡಿಲು ಬಡಿದು 15 ಜನರಿಗೆ ಗಾಯ; ಓರ್ವ ಮಹಿಳೆ ಸ್ಥಿತಿ ಗಂಭೀರ

ಹಾಸನ(Hassan) ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ಭತ್ತ ನಾಟಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು 15 ಜನರು ಅಸ್ವಸ್ಥರಾದ ಘಟನೆ ನಡೆದಿದೆ. ಕೂಡಲೇ ಹದಿನೈದು ಮಂದಿಯನ್ನೂ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದೆ.

ಹಾಸನದಲ್ಲಿ ಭತ್ತ ನಾಟಿ ಮಾಡ್ತಿದ್ದ ವೇಳೆ ಸಿಡಿಲು ಬಡಿದು 15 ಜನರಿಗೆ ಗಾಯ; ಓರ್ವ ಮಹಿಳೆ ಸ್ಥಿತಿ ಗಂಭೀರ
ಹಾಸನದಲ್ಲಿ ಭತ್ತ ನಾಟಿ ಮಾಡ್ತಿದ್ದ ವೇಳೆ ಸಿಡಿಲು ಬಡಿದು 15 ಜನರಿಗೆ ಗಾಯ
ಮಂಜುನಾಥ ಕೆಬಿ
| Edited By: |

Updated on:Aug 11, 2024 | 10:15 PM

Share

ಹಾಸನ, ಆ.11: ಭತ್ತ ನಾಟಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು 15 ಜನರು ಅಸ್ವಸ್ಥರಾದ ಘಟನೆ ಹಾಸನ(Hassan) ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ನಡೆದಿದೆ. ಕೂಡಲೇ ಹದಿನೈದು ಮಂದಿಯನ್ನೂ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದೆ. ಇನ್ನು ಕೆ.ಬಿ.ಚಂದ್ರು ಎಂಬುವವರಿಗೆ ಸೇರಿದ ಗದ್ದೆಯಲ್ಲಿ 25 ಮಂದಿ ನಾಟಿ ಮಾಡುತ್ತಿದ್ದರು. ಈ ವೇಳೆ ಗುಡುಗು, ಸಿಡಿಲು ಸಹಿತ ದಿಢೀರ್ ಮಳೆ ಶುರುವಾಗಿ, ಸಿಡಿಲು ಬಡಿದು ಹಲವು ಕಾರ್ಮಿಕರು ಗಾಯಗೊಂಡಿದ್ದಾರೆ. ರೇಣುಕಾ (49), ಸವಿತಾ (45), ಸುಮಿತ್ರ (51), ರೇಣುಕಮ್ಮಾ (55), ನೇತ್ರ (40), ನಿರ್ಮಲ (51), ವೀಣಾ (35), ಅನಿತಾ (55) ಸೇರಿ ಹದಿನೈದು ಮಂದಿಗೆ ಗಾಯವಾಗಿದ್ದು, ಲತಾ (35) ಎಂಬುವವರ ಸ್ಥಿತಿ ಗಂಭೀರವಾಗಿದೆ.

ರಾಮನಗರದಲ್ಲಿ ಮುಂದುವರಿದ ಚಿರತೆ ದಾಳಿ, ಜನರಲ್ಲಿ ಆತಂಕ

ರಾಮನಗರ: ಜಿಲ್ಲೆಯಲ್ಲಿ ಚಿರತೆ ದಾಳಿ ಮುಂದುವರೆದಿದ್ದು, ಜನರಲ್ಲಿ ಆತಂಕ ಮೂಡಿದೆ. ಹೌದು, ರಾಮನಗರ ಜಿಲ್ಲಾಧಿಕಾರಿ ಕಚೇರಿ ಮುಂದಿನ ಮನೆಯ ಗೇಟ್ ಹಾರಿ ಸಾಕು ನಾಯಿಯನ್ನ ಚಿರತೆ ಬೇಟೆಯಾಡಿದೆ. ಪ್ರತಿರೋಧ ಒಡ್ಡಿದರೂ ಬಿಡದೆ ಕೊಂದು ಹೊತ್ತೊಯ್ದಿದೆ. ಮನೆಗಳಿಗೆ ಚಿರತೆ ನುಗ್ಗುತ್ತಿರುವುದರಿಂದ ಜನರಲ್ಲಿ ಆತಂಕ ಮನೆಮಾಡಿದೆ. ರಾತ್ರಿ ವೇಳೆ ಚಿರತೆ ಚಲನವಲನ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನು ನಿನ್ನೆ(ಶನಿವಾರ) ಮಹಿಳೆ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿತ್ತು. ಈ ಹಿನ್ನಲೆ ಚಿರತೆ ಸೆರೆ ಹಿಡಿಯುವಂತೆ ರಾಮನಗರ ಜನರು ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ:ಗುಡುಗು, ಸಿಡಿಲು ಸಹಿತ ಮಳೆ: ಕುಸಿದು ಬಿದ್ದ ದೇವಸ್ಥಾನದ ಗೋಪುರ

ಶೆಡ್ ಬಾಗಿಲು ಒಡೆದು ಮೇಕೆಗಳ ಕಳ್ಳತನ

ಬೆಂಗಳೂರು: ಶೆಡ್ ಬಾಗಿಲು ಒಡೆದು ಮೇಕೆಗಳನ್ನು ಕಳ್ಳತನ ಮಾಡಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕುಂಬಾರಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿಶ್ವನಾಥ್​ ಅವರಿಗೆ ಸೇರಿದ ಮೇಕೆಗಳು ಇದಾಗಿದ್ದು, ಲಕ್ಷಕ್ಕೂ ಹೆಚ್ಚು ಬೆಲೆಬಾಳುವ 10ಮೇಕೆಗಳನ್ನು ಖದೀಮರು ಹೊತ್ತೊಯ್ದಿದ್ದಾರೆ. ಈ ಕುರಿತು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಕಳ್ಳರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:05 pm, Sun, 11 August 24

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​