AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan News: ಅಯ್ಯೋ ವಿಧಿಯೇ! ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಸಾವು

ತೆಂಗಿನಕಾಯಿ ಗೊನೆ ಬಿದ್ದು ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 16 ವರ್ಷದ ವಿದ್ಯಾರ್ಥಿ ದುರಂತ ಅಂತ್ಯಕಂಡಿದ್ದಾನೆ.

Hassan News: ಅಯ್ಯೋ ವಿಧಿಯೇ! ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಸಾವು
ಪ್ರಜ್ವಲ್, ಮೃತ ಬಾಲಕ
ರಮೇಶ್ ಬಿ. ಜವಳಗೇರಾ
|

Updated on:Jun 23, 2023 | 10:38 AM

Share

ಹಾಸನ: ಸಾವು ಯಾವ ರೂಪದಲ್ಲಿ ಬರುತ್ತದೆ ಅಂತ ಊಹಿಸಲು ಸಾಧ್ಯವಿಲ್ಲ. ಜವರಾಯ ಯಾರ ಬಳಿ, ಯಾವ ರೂಪದಲ್ಲಿ ಬರುತ್ತಾನೋ ಆ ದೇವರೇ ಬಲ್ಲ. ಈ ಬಾಲಕನ ಸಾವು ತೆಂಗಿನಕಾಯಿ ಗೊನೆಯಲ್ಲಿ ಬರೆದಿತ್ತು ಅನ್ಸುತ್ತೆ. ಹೌದು…ತೆಂಗಿನಕಾಯಿ ಗೊನೆ ಬಿದ್ದು 16 ವರ್ಷದ ಪ್ರಜ್ವಲ್ ಮೃತಪಟ್ಟಿದ್ದಾನೆ. ಹಾಸನ(Hassan) ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳ ಹೋಬಳಿಯ ಬಿ.ಚೋಳೇನಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಶ್ರವಣಬೆಳಗೊಳದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಪ್ರಜ್ವಲ್ ಮೃತ ದುರ್ವೈವಿ.

ಮಳೆಯಿಂದ ತೋಟದಲ್ಲಿ ಕಾಯಿ ಬಿದ್ದಿದ್ದರಿಂದ ಅವುಗಳನ್ನು ಆಯುವಾಗ ಏಕಾಏಕಿ ಪ್ರಜ್ವಲ್ ಮೇಲೆ ತೆಂಗಿನಕಾಯಿ ಗೊನೆ ಬಿದ್ದಿದೆ. ಇದರಿಂದ ಅಸ್ವಸ್ಥಗೊಂಡಿದ್ದ ಪ್ರಜ್ವಲ್ ಸ್ಥಳದಲ್ಲೇ ಕುಸಿದು ಬಿದ್ದಿದ್ದ. ಕೂಡಲೇ ಸ್ಥಳೀಯರು ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದ್ದಾರೆ. ದುರದೃಷ್ಟವಶಾತ್ ಆಸ್ಪತ್ರೆ ಮುಟ್ಟುವ ಮಾರ್ಗ ಮಧ್ಯೆದಲ್ಲೇ ಪ್ರಜ್ವಲ್ ಕೊನೆಯುಸಿರೆಳೆದಿದ್ದಾನೆ. ಈ ಬಗ್ಗೆ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನವಜಾತ ಶಿಶುವಿನ ಶವ ಪತ್ತೆ

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ಗುಡ್ಡದದೇವಲಾಪುರ ಕ್ರಾಸ್ ಬಳಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ ಅನೈತಿಕ ಸಂಬಂಧ ಹಿನ್ನೆಲೆ ನಿನ್ನೆ (ಜೂನ್ 22) ರಾತ್ರಿ ನವಜಾತ ಶಿಶು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಹನಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:17 am, Fri, 23 June 23

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ