Hassan News: ಅಯ್ಯೋ ವಿಧಿಯೇ! ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಸಾವು

ತೆಂಗಿನಕಾಯಿ ಗೊನೆ ಬಿದ್ದು ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 16 ವರ್ಷದ ವಿದ್ಯಾರ್ಥಿ ದುರಂತ ಅಂತ್ಯಕಂಡಿದ್ದಾನೆ.

Hassan News: ಅಯ್ಯೋ ವಿಧಿಯೇ! ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಸಾವು
ಪ್ರಜ್ವಲ್, ಮೃತ ಬಾಲಕ

Updated on: Jun 23, 2023 | 10:38 AM

ಹಾಸನ: ಸಾವು ಯಾವ ರೂಪದಲ್ಲಿ ಬರುತ್ತದೆ ಅಂತ ಊಹಿಸಲು ಸಾಧ್ಯವಿಲ್ಲ. ಜವರಾಯ ಯಾರ ಬಳಿ, ಯಾವ ರೂಪದಲ್ಲಿ ಬರುತ್ತಾನೋ ಆ ದೇವರೇ ಬಲ್ಲ. ಈ ಬಾಲಕನ ಸಾವು ತೆಂಗಿನಕಾಯಿ ಗೊನೆಯಲ್ಲಿ ಬರೆದಿತ್ತು ಅನ್ಸುತ್ತೆ. ಹೌದು…ತೆಂಗಿನಕಾಯಿ ಗೊನೆ ಬಿದ್ದು 16 ವರ್ಷದ ಪ್ರಜ್ವಲ್ ಮೃತಪಟ್ಟಿದ್ದಾನೆ. ಹಾಸನ(Hassan) ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳ ಹೋಬಳಿಯ ಬಿ.ಚೋಳೇನಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಶ್ರವಣಬೆಳಗೊಳದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಪ್ರಜ್ವಲ್ ಮೃತ ದುರ್ವೈವಿ.

ಮಳೆಯಿಂದ ತೋಟದಲ್ಲಿ ಕಾಯಿ ಬಿದ್ದಿದ್ದರಿಂದ ಅವುಗಳನ್ನು ಆಯುವಾಗ ಏಕಾಏಕಿ ಪ್ರಜ್ವಲ್ ಮೇಲೆ ತೆಂಗಿನಕಾಯಿ ಗೊನೆ ಬಿದ್ದಿದೆ. ಇದರಿಂದ ಅಸ್ವಸ್ಥಗೊಂಡಿದ್ದ ಪ್ರಜ್ವಲ್ ಸ್ಥಳದಲ್ಲೇ ಕುಸಿದು ಬಿದ್ದಿದ್ದ. ಕೂಡಲೇ ಸ್ಥಳೀಯರು ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದ್ದಾರೆ. ದುರದೃಷ್ಟವಶಾತ್ ಆಸ್ಪತ್ರೆ ಮುಟ್ಟುವ ಮಾರ್ಗ ಮಧ್ಯೆದಲ್ಲೇ ಪ್ರಜ್ವಲ್ ಕೊನೆಯುಸಿರೆಳೆದಿದ್ದಾನೆ. ಈ ಬಗ್ಗೆ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನವಜಾತ ಶಿಶುವಿನ ಶವ ಪತ್ತೆ

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ಗುಡ್ಡದದೇವಲಾಪುರ ಕ್ರಾಸ್ ಬಳಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ ಅನೈತಿಕ ಸಂಬಂಧ ಹಿನ್ನೆಲೆ ನಿನ್ನೆ (ಜೂನ್ 22) ರಾತ್ರಿ ನವಜಾತ ಶಿಶು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಹನಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:17 am, Fri, 23 June 23

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us