AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ 24 ಆನೆಗಳ ದಾಳಿಗೆ ಅಪಾರ ಬೆಳೆ ಹಾನಿ! ಸಾಲಾಗಿ ಹೆಜ್ಜೆ ಹಾಕುತ್ತಿರುವ ಗಜಪಡೆಗಳ ವಿಡಿಯೋ ವೈರಲ್

ಭತ್ತದ ಗದ್ದೆಗಳಲ್ಲಿ ಸುಮಾರು 24 ಆನೆಗಳ ಪರೇಡ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 3 ಚಿಕ್ಕ ಮರಿಗಳು ಸೇರಿ ಒಂದೇ ಗುಂಪಿನಲ್ಲಿರುವ 24 ಕಾಡಾನೆಗಳು ಸಂಚಾರ ನಡೆಸಿವೆ. ಕಾಡಾನೆಗಳ ಹಿಂಡು ತೋಟದಿಂದ ಭತ್ತದ ಗದ್ದೆಗಳಿದು ಸಾಗಿವೆ.

ಹಾಸನದಲ್ಲಿ 24 ಆನೆಗಳ ದಾಳಿಗೆ ಅಪಾರ ಬೆಳೆ ಹಾನಿ! ಸಾಲಾಗಿ ಹೆಜ್ಜೆ ಹಾಕುತ್ತಿರುವ ಗಜಪಡೆಗಳ ವಿಡಿಯೋ ವೈರಲ್
ಸಾಲಾಗಿ ಹೆಜ್ಜೆ ಹಾಕುತ್ತಿರುವ ಆನೆಗಳು
TV9 Web
| Updated By: sandhya thejappa|

Updated on: Nov 27, 2021 | 9:23 AM

Share

ಹಾಸನ: ಜಿಲ್ಲೆಯಲ್ಲಿ ಆನೆಗಳ ದಾಳಿ ಪ್ರಕರಣಗಳು ಹೆಚ್ಚಾಗುತ್ತಿವೆ. ರೈತರು ಬೆಳೆದ ಬೆಳೆ ಗಜಪಡೆಗಳ ಪಾಲಾಗುತ್ತಿದೆ. ಫಸಲು ರೈತರ ಕೈ ಸೇರುವ ಮೊದಲು ಆನೆಗಳ ದಾಳಿಗೆ ನಾಶವಾಗುತ್ತಿದೆ. ಈ ಹಿನ್ನೆಲೆ ಜಿಲ್ಲೆಯಲ್ಲಿ ಬೆಳೆಗಳನ್ನು ಆನೆಗಳಿಂದ ಕಾಪಾಡಿಕೊಳ್ಳುವುದು ಬೆಳೆಗಾರರಿಗೆ ದೊಡ್ಡ ಸವಾಲಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕುಂಬಾರಗಟ್ಟೆ ಗ್ರಾಮದಲ್ಲಿ ಸುಮಾರು 24 ಆನೆಗಳ ಹಿಂಡು ದಾಳಿ ನಡೆಸಿ ಅಪಾರ ಪ್ರಮಾಣದ ಬೆಳೆ ಹಾನಿ ಮಾಡಿವೆ. ಕಾಫಿ, ಭತ್ತ ಸೇರಿದಂತೆ ಅಪಾರ ಬೆಳೆ ಹಾನಿಯಾಗಿವೆ. ಕಾಡಾನೆಗಳ ಉಪಟಳದಿಂದ ಕಂಗಾಲಾದ ರೈತರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಭತ್ತದ ಗದ್ದೆಗಳಲ್ಲಿ ಸುಮಾರು 24 ಆನೆಗಳ ಪರೇಡ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 3 ಚಿಕ್ಕ ಮರಿಗಳು ಸೇರಿ ಒಂದೇ ಗುಂಪಿನಲ್ಲಿರುವ 24 ಕಾಡಾನೆಗಳು ಸಂಚಾರ ನಡೆಸಿವೆ. ಕಾಡಾನೆಗಳ ಹಿಂಡು ತೋಟದಿಂದ ಭತ್ತದ ಗದ್ದೆಗಳಿದು ಸಾಗಿವೆ. ಭತ್ತದ ಗದ್ದೆಯ ಬದುಗಳ ಮೇಲೆ ಗಜಪಡೆ ಸಾಲಾಗಿ ಸಾಗುತ್ತಿದ್ದ ವಿಡಿಯೋ ವೈರಲ್ ಆಗಿದೆ. ಆನೆಗಳು ಗದ್ದೆಗಳಲ್ಲಿ ಸಾಗುತ್ತಿರುವ ದೃಶ್ಯವನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದರು.

ಶ್ವಾನಗಳನ್ನು ಅಟ್ಟಾಡಿಸಿದ ಆನೆ ಇನ್ನು ಸಕಲೇಶಪುರ ತಾಲೂಕಿನ ಹೊಸಗದ್ದೆ ಗ್ರಾಮದಲ್ಲಿ ನಾಯಿಗಳ ಮೇಲೆ ಒಂಟಿ ಸಲಗ ದಾಳಿ ನಡೆಸಲು ಮುಂದಾಗಿದೆ. ತನ್ನ ಹಿಂಬಾಲಿಸಿದ ಶ್ವಾನಗಳನ್ನ ಆನೆ ಅಟ್ಟಾಡಿಸಿದೆ. ಇಂದು ಬೆಳ್ಳಂಬೆಳಿಗ್ಗೆ ಕಾಡಾನೆ ಗ್ರಾಮಕ್ಕೆ ಬಂದಿತ್ತು. ಗ್ರಾಮದೊಳಗೆ ಸಂಚರಿಸಿ ಹೊರ ಹೋಗುವಾಗ ನಾಯಿಗಳು ಹಿಂಬಾಲಿಸಿವೆ. ನಾಯಿಗಳು ಹಿಂದೆ ಬರುತ್ತಿರುವುದನ್ನು ಗಮನಿಸಿದ ಆನೆ ಅಟ್ಟಾಡಿಸಿದೆ. ಆನೆ ಹಿಂದಿರುಗಿ ಬರುತ್ತಿದ್ದಂತೆ ಶ್ವಾನಗಳು ಎದ್ದು ಬಿದ್ದು ಓಡಿವೆ. ಆನೆ ನಾಯಿಗಳ ಜಟಾಪಟಿ ಮೊಬೈಲ್​ನಲ್ಲಿ ಸೆರೆಯಾಗಿದೆ.

ಆನೆಗಳ ದಾಳಿ ಬಗ್ಗೆ ರೈತರೊಬ್ಬರು ಅರಣ್ಯ ಸಚಿವರು, ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕಾಡಾನೆಗಳ ದಾಳಿಯಿಂದ ನಮ್ಮ ಬದುಕು ಹಾಳಾಗಿದೆ. ಆನೆಗಳ ದಾಳಿ ಹಿನ್ನೆಲೆ ನಾವು ಭತ್ತ ಬೆಳೆಯೋದು ಬಿಟ್ಟಿದ್ದೇವೆ. ಇದೀಗ ಕಾಫಿ ಬೆಳೆಯನ್ನು ಕೂಡ ಆನೆಗಳು ನಾಶ ಮಾಡುತ್ತಿವೆ. ಹೀಗಾದರೆ ಏನು ಬೆಳೆಯಬೇಕು, ನಮ್ಮ ಹೊಟ್ಟೆ ಪಾಡೇನು ಅಂತ ಹೊಸಗದ್ದೆ ಗ್ರಾಮದ ರೈತ ಶಶಿಧರ್ ಹಾನಿಯಾದ ಕಾಫಿ ತೋಟದಲ್ಲಿ ವಿಡಿಯೋ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಜೊತೆಗೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ

Kerala: ಬುಡಕಟ್ಟು ಜನಾಂಗದ ಕುಗ್ರಾಮದಲ್ಲಿ ಸಾಲುಸಾಲು ಶಿಶುಗಳ ಮರಣ; ತನಿಖೆಗೆ ಆದೇಶಿಸಿ ಕೇರಳ ಸರ್ಕಾರ

200 ಮೆಗಾ ಪಿಕ್ಸೆಲ್ ಮೇನ್ ಕೆಮೆರಾ ಹೊಂದಿರುವ ಸ್ಮಾರ್ಟ್ ಪೋನ್ ಬೇಕಾ? ಸ್ವಲ್ಪ ತಾಳಿ, ಮೊಟೊರೊಲ ಅದನ್ನು ತರುತ್ತಿದೆ!

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!