Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ 24 ಆನೆಗಳ ದಾಳಿಗೆ ಅಪಾರ ಬೆಳೆ ಹಾನಿ! ಸಾಲಾಗಿ ಹೆಜ್ಜೆ ಹಾಕುತ್ತಿರುವ ಗಜಪಡೆಗಳ ವಿಡಿಯೋ ವೈರಲ್

ಭತ್ತದ ಗದ್ದೆಗಳಲ್ಲಿ ಸುಮಾರು 24 ಆನೆಗಳ ಪರೇಡ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 3 ಚಿಕ್ಕ ಮರಿಗಳು ಸೇರಿ ಒಂದೇ ಗುಂಪಿನಲ್ಲಿರುವ 24 ಕಾಡಾನೆಗಳು ಸಂಚಾರ ನಡೆಸಿವೆ. ಕಾಡಾನೆಗಳ ಹಿಂಡು ತೋಟದಿಂದ ಭತ್ತದ ಗದ್ದೆಗಳಿದು ಸಾಗಿವೆ.

ಹಾಸನದಲ್ಲಿ 24 ಆನೆಗಳ ದಾಳಿಗೆ ಅಪಾರ ಬೆಳೆ ಹಾನಿ! ಸಾಲಾಗಿ ಹೆಜ್ಜೆ ಹಾಕುತ್ತಿರುವ ಗಜಪಡೆಗಳ ವಿಡಿಯೋ ವೈರಲ್
ಸಾಲಾಗಿ ಹೆಜ್ಜೆ ಹಾಕುತ್ತಿರುವ ಆನೆಗಳು
Follow us
TV9 Web
| Updated By: sandhya thejappa

Updated on: Nov 27, 2021 | 9:23 AM

ಹಾಸನ: ಜಿಲ್ಲೆಯಲ್ಲಿ ಆನೆಗಳ ದಾಳಿ ಪ್ರಕರಣಗಳು ಹೆಚ್ಚಾಗುತ್ತಿವೆ. ರೈತರು ಬೆಳೆದ ಬೆಳೆ ಗಜಪಡೆಗಳ ಪಾಲಾಗುತ್ತಿದೆ. ಫಸಲು ರೈತರ ಕೈ ಸೇರುವ ಮೊದಲು ಆನೆಗಳ ದಾಳಿಗೆ ನಾಶವಾಗುತ್ತಿದೆ. ಈ ಹಿನ್ನೆಲೆ ಜಿಲ್ಲೆಯಲ್ಲಿ ಬೆಳೆಗಳನ್ನು ಆನೆಗಳಿಂದ ಕಾಪಾಡಿಕೊಳ್ಳುವುದು ಬೆಳೆಗಾರರಿಗೆ ದೊಡ್ಡ ಸವಾಲಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕುಂಬಾರಗಟ್ಟೆ ಗ್ರಾಮದಲ್ಲಿ ಸುಮಾರು 24 ಆನೆಗಳ ಹಿಂಡು ದಾಳಿ ನಡೆಸಿ ಅಪಾರ ಪ್ರಮಾಣದ ಬೆಳೆ ಹಾನಿ ಮಾಡಿವೆ. ಕಾಫಿ, ಭತ್ತ ಸೇರಿದಂತೆ ಅಪಾರ ಬೆಳೆ ಹಾನಿಯಾಗಿವೆ. ಕಾಡಾನೆಗಳ ಉಪಟಳದಿಂದ ಕಂಗಾಲಾದ ರೈತರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಭತ್ತದ ಗದ್ದೆಗಳಲ್ಲಿ ಸುಮಾರು 24 ಆನೆಗಳ ಪರೇಡ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 3 ಚಿಕ್ಕ ಮರಿಗಳು ಸೇರಿ ಒಂದೇ ಗುಂಪಿನಲ್ಲಿರುವ 24 ಕಾಡಾನೆಗಳು ಸಂಚಾರ ನಡೆಸಿವೆ. ಕಾಡಾನೆಗಳ ಹಿಂಡು ತೋಟದಿಂದ ಭತ್ತದ ಗದ್ದೆಗಳಿದು ಸಾಗಿವೆ. ಭತ್ತದ ಗದ್ದೆಯ ಬದುಗಳ ಮೇಲೆ ಗಜಪಡೆ ಸಾಲಾಗಿ ಸಾಗುತ್ತಿದ್ದ ವಿಡಿಯೋ ವೈರಲ್ ಆಗಿದೆ. ಆನೆಗಳು ಗದ್ದೆಗಳಲ್ಲಿ ಸಾಗುತ್ತಿರುವ ದೃಶ್ಯವನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದರು.

ಶ್ವಾನಗಳನ್ನು ಅಟ್ಟಾಡಿಸಿದ ಆನೆ ಇನ್ನು ಸಕಲೇಶಪುರ ತಾಲೂಕಿನ ಹೊಸಗದ್ದೆ ಗ್ರಾಮದಲ್ಲಿ ನಾಯಿಗಳ ಮೇಲೆ ಒಂಟಿ ಸಲಗ ದಾಳಿ ನಡೆಸಲು ಮುಂದಾಗಿದೆ. ತನ್ನ ಹಿಂಬಾಲಿಸಿದ ಶ್ವಾನಗಳನ್ನ ಆನೆ ಅಟ್ಟಾಡಿಸಿದೆ. ಇಂದು ಬೆಳ್ಳಂಬೆಳಿಗ್ಗೆ ಕಾಡಾನೆ ಗ್ರಾಮಕ್ಕೆ ಬಂದಿತ್ತು. ಗ್ರಾಮದೊಳಗೆ ಸಂಚರಿಸಿ ಹೊರ ಹೋಗುವಾಗ ನಾಯಿಗಳು ಹಿಂಬಾಲಿಸಿವೆ. ನಾಯಿಗಳು ಹಿಂದೆ ಬರುತ್ತಿರುವುದನ್ನು ಗಮನಿಸಿದ ಆನೆ ಅಟ್ಟಾಡಿಸಿದೆ. ಆನೆ ಹಿಂದಿರುಗಿ ಬರುತ್ತಿದ್ದಂತೆ ಶ್ವಾನಗಳು ಎದ್ದು ಬಿದ್ದು ಓಡಿವೆ. ಆನೆ ನಾಯಿಗಳ ಜಟಾಪಟಿ ಮೊಬೈಲ್​ನಲ್ಲಿ ಸೆರೆಯಾಗಿದೆ.

ಆನೆಗಳ ದಾಳಿ ಬಗ್ಗೆ ರೈತರೊಬ್ಬರು ಅರಣ್ಯ ಸಚಿವರು, ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕಾಡಾನೆಗಳ ದಾಳಿಯಿಂದ ನಮ್ಮ ಬದುಕು ಹಾಳಾಗಿದೆ. ಆನೆಗಳ ದಾಳಿ ಹಿನ್ನೆಲೆ ನಾವು ಭತ್ತ ಬೆಳೆಯೋದು ಬಿಟ್ಟಿದ್ದೇವೆ. ಇದೀಗ ಕಾಫಿ ಬೆಳೆಯನ್ನು ಕೂಡ ಆನೆಗಳು ನಾಶ ಮಾಡುತ್ತಿವೆ. ಹೀಗಾದರೆ ಏನು ಬೆಳೆಯಬೇಕು, ನಮ್ಮ ಹೊಟ್ಟೆ ಪಾಡೇನು ಅಂತ ಹೊಸಗದ್ದೆ ಗ್ರಾಮದ ರೈತ ಶಶಿಧರ್ ಹಾನಿಯಾದ ಕಾಫಿ ತೋಟದಲ್ಲಿ ವಿಡಿಯೋ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಜೊತೆಗೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ

Kerala: ಬುಡಕಟ್ಟು ಜನಾಂಗದ ಕುಗ್ರಾಮದಲ್ಲಿ ಸಾಲುಸಾಲು ಶಿಶುಗಳ ಮರಣ; ತನಿಖೆಗೆ ಆದೇಶಿಸಿ ಕೇರಳ ಸರ್ಕಾರ

200 ಮೆಗಾ ಪಿಕ್ಸೆಲ್ ಮೇನ್ ಕೆಮೆರಾ ಹೊಂದಿರುವ ಸ್ಮಾರ್ಟ್ ಪೋನ್ ಬೇಕಾ? ಸ್ವಲ್ಪ ತಾಳಿ, ಮೊಟೊರೊಲ ಅದನ್ನು ತರುತ್ತಿದೆ!

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು