Hassan News: ಬೈಕ್​ ವೀಲ್ಹಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ; ಇಬ್ಬರು ಯುವತಿಯರು ಸಾವು ಬದುಕಿನ ನಡುವೆ ಹೋರಾಟ

ಹಾಸನ ನಗರದ ಸಾಲಗಾಮೆ ರಸ್ತೆಯ ಸಹ್ಯಾದ್ರಿ ಚಿತ್ರಮಂದಿರ ಬಳಿ ವೀಲ್ಹಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತವಾಗಿ ಅಮಾಯಕ ಯುವತಿಯರು ಸಾವು ಬದುಕಿನ ನಡುವೆ ಹೋರಾಟ ನಡೆಸುವ ಪರಿಸ್ಥಿತಿ ಎದುರಾಗಿದೆ.

Hassan News: ಬೈಕ್​ ವೀಲ್ಹಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ; ಇಬ್ಬರು ಯುವತಿಯರು ಸಾವು ಬದುಕಿನ ನಡುವೆ ಹೋರಾಟ
ಹಾಸನದಲ್ಲಿ ಭೀಕರ ಅಪಘಾತ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 29, 2023 | 7:50 AM

ಹಾಸನ: ಇತ್ತೀಚೆಗೆ ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬೈಕ್ ವೀಲ್ಹಿಂಗ್ (Bike Wheeling) ಪುಂಡರ ಹಾವಳಿ ಜಾಸ್ತಿಯಾಗಿದೆ. ಕೈಯಲ್ಲಿ ಮಚ್ಚು, ಲಾಂಗು ಹಿಡಿದುಕೊಂಡು ಮಧ್ಯರಾತ್ರಿ ನಡು ರಸ್ತೆಯಲ್ಲಿ ವೀಲ್ಹಿಂಗ್ ಮಾಡುವ ಮೂಲಕ ಇತರ ವಾಹನ ಸವಾರರಿಗೂ ತೊಂದರೆ ಕೊಡುತ್ತಿದ್ದಾರೆ. ಅದರಂತೆ ಇದೀಗ ಹಾಸನ(Hassan)ನಗರದ ಸಾಲಗಾಮೆ ರಸ್ತೆಯ ಸಹ್ಯಾದ್ರಿ ಚಿತ್ರಮಂದಿರ ಬಳಿ ವೀಲ್ಹಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತವಾಗಿ ಅಮಾಯಕ ಯುವತಿಯರು ಸಾವು ಬದುಕಿನ ನಡುವೆ ಹೋರಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಹೌದು ಪುಂಡರು ವೀಲ್ಹಿಂಗ್ ಮಾಡುತ್ತಿದ್ದ ಬೈಕ್ ಭೂಮಿಕಾ ಹಾಗೂ ಸಿಂಚನ ಎಂಬಿಬ್ಬರಿಗೆ ಡಿಕ್ಕಿಯಾಗಿ ಗಂಭೀರ ಗಾಯಗಳಾಗಿವೆ.​

ವೀಲ್ಹಿಂಗ್ ಅಟ್ಟಹಾಸಕ್ಕೆ ಇಬ್ಬರು ಯುವತಿಯರಿಗೆ ಗಂಭೀರ ಗಾಯ

ರಾತ್ರಿ ನಗರದ ಸಾಲಗಾಮೆ ರಸ್ತೆಯ ಫುಡ್​ಕೋರ್ಟ್​ನಲ್ಲಿ ಊಟ ಮುಗಿಸಿ ಭೂಮಿಕಾ ಹಾಗೂ ಸಿಂಚನ ಬೈಕ್‌ ಏರಿ ಬರುತ್ತಿದ್ದರು. ಈ ವೇಳೆ ಜನನಿಬಿಡ ಪ್ರದೇಶದಲ್ಲಿ ವೀಲ್ಹಿಂಗ್ ಮಾಡಿಕೊಂಡು ಬಂದು ಭೂಮಿಕಾ ಹಾಗೂ ಸಿಂಚನೆಗೆ ಪುಂಡರು ಡಿಕ್ಕಿ ಹೊಡೆದಿದ್ದಾರೆ. ಈ ಸಂದರ್ಭದಲ್ಲಿ ಭೂಮಿಕಾ ತಲೆಗೆ ಬಲವಾದ ಪೆಟ್ಟು ಬಿದ್ದ ಹಿನ್ನಲೆಯಲ್ಲಿ ಬೆಂಗಳೂರಿಗೆ ನಿಮಾನ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮತ್ತೊರ್ವ ಯುವತಿಗೂ ಗಂಭೀರ ಗಾಯಗಳಾಗಿದ್ದು, ಇಬ್ಬರು ಯುವತಿಯರು ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ.

ಇದನ್ನೂ ಓದಿ:ಸಿಲಿಕಾನ್ ಸಿಟಿಯಲ್ಲಿ ಡೆಡ್ಲಿ ವ್ಹೀಲಿಂಗ್, ವಿಡಿಯೋ ಶೇರ್ ಮಾಡಿಕೊಂಡು ಸಿಕ್ಕಿಬಿದ್ದ

ವೀಲ್ಹಿಂಗ್ ಪುಂಡರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು

ಇನ್ನು ವೀಲ್ಹಿಂಗ್ ಮಾಡಿ ಅಪಘಾತಗೊಳಿಸಿದ ಶಾಕೀರ್ ಹಾಗೂ ಮತ್ತೊರ್ವ ಅಪ್ರಾಪ್ತನಿಗೆ ಸಾರ್ವಜನಿಕರು ಬಟ್ಟೆ ಬಚ್ಚಿ ಹಿಗ್ಗಾಮುಗ್ಗಾ ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹಾಸನ ನಗರದಲ್ಲಿ ವೀಲ್ಹಿಂಗ್ ಪುಂಡರ ಹಾವಳಿ ಮಿತಿಮೀರಿದೆ. ಕೂಡಲೇ ಇದಕ್ಕೆ ಕಡಿವಾಣ ಹಾಕದಿದ್ದರೆ, ಇಂತಹ ಮತ್ತಷ್ಟು ಘಟನೆಗಳು ಸಂಭವಿಸುತ್ತದೆ ಆದಷ್ಟು ಬೇಗ ಇದಕ್ಕೆ ಬ್ರೇಕ್​​ ಹಾಕುವಂತೆ ಸಾರ್ವಜನಿಕರು ಪೊಲೀಸರಿಗೆ ಒತ್ತಾಯಿಸಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ