AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಡೀಸೆಲ್ ಟ್ಯಾಂಕರ್, ಬೊಲೆರೊ ವಾಹನದ ನಡುವೆ ಡಿಕ್ಕಿ! ನೂರಾರು ಕೋಳಿಗಳ ಸಾವು

ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿತ್ರದುರ್ಗ ನಗರದ ಗಣೇಶ್ (20) ಮತ್ತು ಶಿವು(22) ಎಂಬುವವರು ಸಾವನ್ನಪ್ಪಿದ್ದಾರೆ.

ಹಾಸನದಲ್ಲಿ ಡೀಸೆಲ್ ಟ್ಯಾಂಕರ್, ಬೊಲೆರೊ ವಾಹನದ ನಡುವೆ ಡಿಕ್ಕಿ! ನೂರಾರು ಕೋಳಿಗಳ ಸಾವು
ರೈಲ್ವೆ ತಡೆಗೊಡೆಗೆ ಡಿಕ್ಕಿ ಹೊಡೆದ ಡೀಸೆಲ್ ಟ್ಯಾಂಕರ್, ಸಾವನ್ನಪ್ಪಿರುವ ಕೋಳಿಗಳ ರಾಶಿ
TV9 Web
| Edited By: sandhya thejappa|

Updated on: Sep 28, 2021 | 9:23 AM

Share

ಹಾಸನ: ಡೀಸೆಲ್ ಟ್ಯಾಂಕರ್ ಮತ್ತು ಬೊಲೆರೊ ವಾಹನದ ಮಧ್ಯೆ ಡಿಕ್ಕಿಯಾಗಿ ಬೊಲೆರೊ ಗಾಡಿಯಲ್ಲಿದ್ದ ನೂರಾರು ಕೋಳಿಗಳು ಸಾವನ್ನಪ್ಪಿವೆ. ಹಾಸನ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಘಟನೆ ಸಂಭವಿಸಿದೆ. ಡೀಸೆಲ್ ಟ್ಯಾಂಕರ್ ಬೊಲೆರೊ ವಾಹನಕ್ಕೆ ಗುದ್ದಿ ಆ ಬಳಿಕ ರೈಲ್ವೆ ತಡೆಗೋಡೆಗೂ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬೊಲೆರೊ ಗಾಡಿ ಕೋಳಿಗಳನ್ನು ತುಂಬಿಕೊಂಡು ಹೋಗುತ್ತಿತ್ತು. ಅಪಘಾತದಲ್ಲಿ ನೂರಾರು ಕೋಳಿಗಳು ಸಾವನ್ನಪ್ಪಿವೆ. ಈ ವೇಳೆ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು.

ಚಿತ್ರದುರ್ಗದಲ್ಲಿ ಬೈಕ್ ಸವಾರರ ಸಾವು ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿತ್ರದುರ್ಗ ನಗರದ ಗಣೇಶ್ (20) ಮತ್ತು ಶಿವು(22) ಎಂಬುವವರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ತಾಲೂಕಿನ ಕ್ಯಾದಿಗೆರೆ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಐಮಂಗಲ ಗ್ರಾಮದಿಂದ ವಾಪಸ್ ತೆರಳುತ್ತಿದ್ದಾಗ ಅಪಘಾತ ನಡೆದಿದೆ. ಬೈಕಿಗೆ ಡಿಕ್ಕಿ ಹೊಡೆದ ಬಳಿಕ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಇಂದು (ಸೆ.28) ಬೆಳಗಿನ ಜಾವ ಈ ಘಟನೆ ನಡೆದಿದ್ದು, ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

5 ಹಸು ಸಾವು ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ 5 ಹಸು ಸಾವನ್ನಪ್ಪಿರುವ ಘಟನೆ ಕೋಲಾರ ತಾಲೂಕಿನ ಚಾಕರಾಸನಹಳ್ಳಿಯ ಬಳಿ ಸಂಭವಿಸಿದೆ. 2 ಲಾರಿಗಳಲ್ಲಿ 20ಕ್ಕೂ ಹೆಚ್ಚು ಜಾನುವಾರು ತರಲಾಗುತ್ತಿತ್ತು. ಛತ್ತೀಸ್ಗಢದಿಂದ ಕೋಲಾರಕ್ಕೆ ಜಾನುವಾರು ತರಲಾಗುತ್ತಿತ್ತು. ಹೀಗೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರಗಳನ್ನು ಪೊಲೀಸರು ರಕ್ಷಿಸಿದ್ದಾರೆ. ಸದ್ಯ ಜಾನುವಾರುಗಳು ವೇಮಗಲ್ ಪೊಲೀಸರ ವಶದಲ್ಲಿವೆ.

ಇದನ್ನೂ ಓದಿ

ಚಿಕ್ಕಮಗಳೂರು: ಕತ್ತೆ ಹಾಲಿಗೆ ಹೆಚ್ಚಿದ ಬೇಡಿಕೆ; 1 ಲೀಟರ್ ಕತ್ತೆ ಹಾಲಿಗೆ ಬರೋಬ್ಬರಿ 5000 ರೂಪಾಯಿ!

Karnataka Dams Water Level: ಮಳೆಯಿಂದ ಕರ್ನಾಟಕದ ಡ್ಯಾಂಗಳು ಭರ್ತಿ; ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

(Accident between diesel tanker and bolero vehicle in Hassan hens death)

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!