AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ‌ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಸಿಲುಕಿಸಲು ಖತರ್ನಾಕ್​ ಪ್ಲ್ಯಾನ್; ಥಾರ್ ವಾಹನದಲ್ಲಿ ಗಾಂಜಾ ಇಟ್ಟವರು ಸಿಕ್ಕಿಬಿದ್ದಿದ್ಹೇಗೆ?

ಸಕಲೇಶಪುರ(Sakleshpura)ದಲ್ಲಿ ಅಕ್ರಮ‌ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಸಿಲುಕಿಸಲು ಹೋಗಿ ತಾವೆ ಸಿಕ್ಕಿಬಿದ್ದ ಘಟನೆಯೊಂದು ನಡೆದಿದೆ. ಪತಿಯನ್ನು ಪೊಲೀಸರಿಗೆ ಸಿಕ್ಕಿಸಲು ಪ್ಲಾನ್ ಮಾಡಿದ್ದ ನಾಲ್ವರು ಆರೋಪಿಗಳು ತಾವೇ ಅಂದರ್​ ಆಗಿದ್ದು, ನಾಲ್ವರನ್ನು ಸಕಲೇಶಪುರ ನಗರ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ಅಕ್ರಮ‌ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಸಿಲುಕಿಸಲು ಖತರ್ನಾಕ್​ ಪ್ಲ್ಯಾನ್; ಥಾರ್ ವಾಹನದಲ್ಲಿ ಗಾಂಜಾ ಇಟ್ಟವರು ಸಿಕ್ಕಿಬಿದ್ದಿದ್ಹೇಗೆ?
ಅಕ್ರಮ‌ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಸಿಲುಕಿಸಲು ಖತರ್ನಾಕ್​ ಪ್ಲ್ಯಾನ್;
ಮಂಜುನಾಥ ಕೆಬಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Oct 12, 2024 | 7:02 PM

Share

ಹಾಸನ, ಅ.12: ಅಕ್ರಮ‌ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಸಿಲುಕಿಸಲು ಹೋಗಿ ತಾವೆ ಸಿಕ್ಕಿಬಿದ್ದ ಘಟನೆ ಸಕಲೇಶಪುರ(Sakleshpura)ದಲ್ಲಿ ನಡೆದಿದೆ. ಪತಿಯನ್ನು ಪೊಲೀಸರಿಗೆ ಸಿಕ್ಕಿಸಲು ಪ್ಲಾನ್ ಮಾಡಿದ್ದ ನಾಲ್ವರು ಆರೋಪಿಗಳು, ಥಾರ್ ವಾಹನದಲ್ಲಿ ಗಾಂಜಾ ತಂದು ಮಹಿಳೆಯ ಪತಿಗೆ ನೀಡಿ ಪೊಲೀಸರಿಗೆ ಮಾಹಿತಿ ನೀಡಲು ಯತ್ನಿಸಿದ್ದರು. ಥಾರ್ ವಾಹನ ಓಡಾಟದಿಂದ ಅನುಮಾನಗೊಂಡ ಸಕಲೇಶಪುರ ನಗರ ಪೊಲೀಸ್ ಠಾಣೆ ಪೊಲೀಸರು, ವಾಹನ ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ವಾಹನದಲ್ಲಿ 1 ಕೆಜಿ 360 ಗ್ರಾಂ ಗಾಂಜಾ ಕಂಡುಬಂದಿದ್ದು, ವಶಕ್ಕೆ ಪಡೆಯಲಾಗಿದೆ.

ಆಗಿದ್ದೇನು?

ಇನ್ನು ವಿಚಾರಣೆ ವೇಳೆ ಆರೋಪಿಗಳು ಸತ್ಯಾಂಶ ಬಾಯ್ಬಿಟ್ಟಿದ್ದಾರೆ. ಸಕಲೇಶಪುರದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ಮುಕ್ತಾರ್ ಅಲಿ ಎಂಬಾತನ ಪತ್ನಿ ಜೊತೆ ಮೂಡಿಗೆರೆ ಮೂಲದ ಮಹಮದ್ ಎಂಬಾತ ಅಕ್ರಮ ಸಂಬಂಧ ಹೊಂದಿದ್ದ. ಈ ಹಿನ್ನಲೆ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಮುಕ್ತಾರ್ ಅಲಿಯನ್ನು ಪೊಲೀಸರು ಬಂಧಿಸುವಂತೆ ಮಾಡಲು ಆರೋಪಿ ಮಹಮದ್ ಹಾಗೂ ಮೂವರ ತಂಡ ಖತರ್ನಾಕ್​ ಪ್ಲಾನ್ ಮಾಡಿದ್ದರು.

ಇದನ್ನೂ ಓದಿ:ಸಹೋದರನ ಪತ್ನಿ ಜೊತೆ ಅಕ್ರಮ‌ ಸಂಬಂಧ: ಕೊನೆಗೆ ತಮ್ಮನಿಂದಲೇ ಹತ್ಯೆಯಾದ ಅಣ್ಣ

ಅದರಂತೆ ಚಿಕ್ಕಮಗಳೂರು ನೋಂದಣಿಯ KA-18-P-9557 ನಂಬರ್‌ನ ಥಾರ್ ವಾಹನದಲ್ಲಿ ಗಾಂಜಾ ತಂದಿದ್ದ ನಾಲ್ವರು, ಮುಕ್ತಾರ್ ಅಲಿಗೆ ಗಾಂಜಾ ಕೊಟ್ಟು ಪೊಲೀಸರಿಗೆ ಮಾಹಿತಿ ನೀಡಲು ತಯಾರಿ ನಡೆಸಿದ್ದರು. ಈ ವೇಳೆ ಅನುಮಾನಗೊಂಡ ಪೊಲೀಸರು ಪರಿಶೀಲನೆ ನಡೆಸಿದಾಗ ಗಾಂಜಾ ಸಿಕ್ಕಿದ್ದು, ಸಧ್ಯ ಮಾಲು ಸಮೇತ ನಾಲ್ವರು ಹಾಗೂ ಥಾರ್‌ ಜೀಪ್​ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ನಾಲ್ವರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮೂಲದವರಾಗಿದ್ದು, ನಾಲ್ವರನ್ನು ಸಕಲೇಶಪುರ ನಗರ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?