AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ‌ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಸಿಲುಕಿಸಲು ಖತರ್ನಾಕ್​ ಪ್ಲ್ಯಾನ್; ಥಾರ್ ವಾಹನದಲ್ಲಿ ಗಾಂಜಾ ಇಟ್ಟವರು ಸಿಕ್ಕಿಬಿದ್ದಿದ್ಹೇಗೆ?

ಸಕಲೇಶಪುರ(Sakleshpura)ದಲ್ಲಿ ಅಕ್ರಮ‌ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಸಿಲುಕಿಸಲು ಹೋಗಿ ತಾವೆ ಸಿಕ್ಕಿಬಿದ್ದ ಘಟನೆಯೊಂದು ನಡೆದಿದೆ. ಪತಿಯನ್ನು ಪೊಲೀಸರಿಗೆ ಸಿಕ್ಕಿಸಲು ಪ್ಲಾನ್ ಮಾಡಿದ್ದ ನಾಲ್ವರು ಆರೋಪಿಗಳು ತಾವೇ ಅಂದರ್​ ಆಗಿದ್ದು, ನಾಲ್ವರನ್ನು ಸಕಲೇಶಪುರ ನಗರ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ಅಕ್ರಮ‌ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಸಿಲುಕಿಸಲು ಖತರ್ನಾಕ್​ ಪ್ಲ್ಯಾನ್; ಥಾರ್ ವಾಹನದಲ್ಲಿ ಗಾಂಜಾ ಇಟ್ಟವರು ಸಿಕ್ಕಿಬಿದ್ದಿದ್ಹೇಗೆ?
ಅಕ್ರಮ‌ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಸಿಲುಕಿಸಲು ಖತರ್ನಾಕ್​ ಪ್ಲ್ಯಾನ್;
ಮಂಜುನಾಥ ಕೆಬಿ
| Edited By: |

Updated on: Oct 12, 2024 | 7:02 PM

Share

ಹಾಸನ, ಅ.12: ಅಕ್ರಮ‌ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಸಿಲುಕಿಸಲು ಹೋಗಿ ತಾವೆ ಸಿಕ್ಕಿಬಿದ್ದ ಘಟನೆ ಸಕಲೇಶಪುರ(Sakleshpura)ದಲ್ಲಿ ನಡೆದಿದೆ. ಪತಿಯನ್ನು ಪೊಲೀಸರಿಗೆ ಸಿಕ್ಕಿಸಲು ಪ್ಲಾನ್ ಮಾಡಿದ್ದ ನಾಲ್ವರು ಆರೋಪಿಗಳು, ಥಾರ್ ವಾಹನದಲ್ಲಿ ಗಾಂಜಾ ತಂದು ಮಹಿಳೆಯ ಪತಿಗೆ ನೀಡಿ ಪೊಲೀಸರಿಗೆ ಮಾಹಿತಿ ನೀಡಲು ಯತ್ನಿಸಿದ್ದರು. ಥಾರ್ ವಾಹನ ಓಡಾಟದಿಂದ ಅನುಮಾನಗೊಂಡ ಸಕಲೇಶಪುರ ನಗರ ಪೊಲೀಸ್ ಠಾಣೆ ಪೊಲೀಸರು, ವಾಹನ ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ವಾಹನದಲ್ಲಿ 1 ಕೆಜಿ 360 ಗ್ರಾಂ ಗಾಂಜಾ ಕಂಡುಬಂದಿದ್ದು, ವಶಕ್ಕೆ ಪಡೆಯಲಾಗಿದೆ.

ಆಗಿದ್ದೇನು?

ಇನ್ನು ವಿಚಾರಣೆ ವೇಳೆ ಆರೋಪಿಗಳು ಸತ್ಯಾಂಶ ಬಾಯ್ಬಿಟ್ಟಿದ್ದಾರೆ. ಸಕಲೇಶಪುರದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ಮುಕ್ತಾರ್ ಅಲಿ ಎಂಬಾತನ ಪತ್ನಿ ಜೊತೆ ಮೂಡಿಗೆರೆ ಮೂಲದ ಮಹಮದ್ ಎಂಬಾತ ಅಕ್ರಮ ಸಂಬಂಧ ಹೊಂದಿದ್ದ. ಈ ಹಿನ್ನಲೆ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಮುಕ್ತಾರ್ ಅಲಿಯನ್ನು ಪೊಲೀಸರು ಬಂಧಿಸುವಂತೆ ಮಾಡಲು ಆರೋಪಿ ಮಹಮದ್ ಹಾಗೂ ಮೂವರ ತಂಡ ಖತರ್ನಾಕ್​ ಪ್ಲಾನ್ ಮಾಡಿದ್ದರು.

ಇದನ್ನೂ ಓದಿ:ಸಹೋದರನ ಪತ್ನಿ ಜೊತೆ ಅಕ್ರಮ‌ ಸಂಬಂಧ: ಕೊನೆಗೆ ತಮ್ಮನಿಂದಲೇ ಹತ್ಯೆಯಾದ ಅಣ್ಣ

ಅದರಂತೆ ಚಿಕ್ಕಮಗಳೂರು ನೋಂದಣಿಯ KA-18-P-9557 ನಂಬರ್‌ನ ಥಾರ್ ವಾಹನದಲ್ಲಿ ಗಾಂಜಾ ತಂದಿದ್ದ ನಾಲ್ವರು, ಮುಕ್ತಾರ್ ಅಲಿಗೆ ಗಾಂಜಾ ಕೊಟ್ಟು ಪೊಲೀಸರಿಗೆ ಮಾಹಿತಿ ನೀಡಲು ತಯಾರಿ ನಡೆಸಿದ್ದರು. ಈ ವೇಳೆ ಅನುಮಾನಗೊಂಡ ಪೊಲೀಸರು ಪರಿಶೀಲನೆ ನಡೆಸಿದಾಗ ಗಾಂಜಾ ಸಿಕ್ಕಿದ್ದು, ಸಧ್ಯ ಮಾಲು ಸಮೇತ ನಾಲ್ವರು ಹಾಗೂ ಥಾರ್‌ ಜೀಪ್​ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ನಾಲ್ವರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮೂಲದವರಾಗಿದ್ದು, ನಾಲ್ವರನ್ನು ಸಕಲೇಶಪುರ ನಗರ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು